Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

- Advertisement -
- Advertisement -

ಜುಲೈ 5, 2021ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ ಮಾನವ ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟ್ಯಾನ್‌ ಸ್ವಾಮಿ ಅವರ ಬಂಧನ, ಸೆರೆವಾಸ ಮತ್ತು ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ಭಾರತ ಸರ್ಕಾರವನ್ನು ಒತ್ತಾಯಿಸಿ ಅಮೆರಿಕದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ನಿರ್ಣಯ ಮಂಡಿಸಲಾಗಿದೆ.

ಮೂವರು ಸಂಸದರಾದ ಜಿಮ್ ಮೆಕ್‌ಗವರ್ನ್, ಆಂಡ್ರೆ ಕಾರ್ಸನ್, ಜುವಾನ್ ವರ್ಗಾಸ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿದ್ದಾರೆ.

“ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ 19 ನೇ ವಿಧಿಯಲ್ಲಿ ಬರೆಯಲ್ಪಟ್ಟಂತೆ ಮತ್ತು 1948 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿಸಿದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವು ಮೂಲಭೂತ ಮಾನವ ಹಕ್ಕು. ಇದು ಭಾರತ ಸಹಿತ ಜಗತ್ತಿನ ಎಲ್ಲಾ ಸರ್ಕಾರಗಳಿಗೂ ಅನ್ವಯವಾಗುತ್ತದೆ” ಎಂದು ನಿರ್ಣಯವು ಸ್ಪಷ್ಟಪಡಿಸಿದೆ.

“ಫಾದರ್ ಸ್ಟ್ಯಾನ್‌ ಧ್ವನಿಯಿಲ್ಲದವರಿಗೆ ಧ್ವನಿ ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅವರು ಸ್ಥಳೀಯ ಆದಿವಾಸಿ ಜನರ ಹಕ್ಕುಗಳಿಗಾಗಿ ದಣಿವರಿಯದ ವಕೀಲರಾಗಿದ್ದರು. ಯುವ ಸಮುದಾಯದ ನಾಯಕರಿಗೆ ತರಬೇತಿ ನೀಡಿದವರು ಮತ್ತು ಭಾರತದಲ್ಲಿ ಅನೇಕ ಸಮುದಾಯಗಳಿಗೆ ನ್ಯಾಯಕ್ಕಾಗಿ ಕೆಲಸ ಮಾಡಿದವರು” ಎಂದು ಸಂಸದ ವರ್ಗಾಸ್ ಹೇಳಿದ್ದಾರೆ.

“ಮಾಜಿ ಜೆಸ್ಯೂಟ್ ಆಗಿದ್ದ ಫಾದರ್ ಸ್ಟ್ಯಾನ್‌ ಅವರು ಕಸ್ಟಡಿಯಲ್ಲಿದ್ದಾಗ ನಿರಂತರ ಕಿರುಕುಳ ಎದುರಿಸಿದ್ದರು. ಅವರಿಗೆ ವೈದ್ಯಕೀಯ ಆರೈಕೆಯನ್ನು ನಿರಾಕರಿಸಿರುವುದರ ಬಗ್ಗೆ ನಾನು ಗಾಬರಿಗೊಂಡಿದ್ದೇನೆ. ಫಾದರ್ ಸ್ಟ್ಯಾನ್‌ ಒಳ್ಳೆಯ ಕೆಲಸಗಳು ಮತ್ತು ಅವರ ಆಜೀವ ಬದ್ಧತೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಈ ನಿರ್ಣಯವನ್ನು ಮಂಡಿಸುತ್ತಿದ್ದೇನೆ” ಎಂದು ವರ್ಗಾಸ್ ತಿಳಿಸಿದ್ದಾರೆ.

“ಫಾದರ್ ಸ್ಟ್ಯಾನ್‌ ಎಂದು ಕರೆಯಲ್ಪಡುವ ಫಾದರ್ ಸ್ಟಾನಿಸ್ಲಾಸ್ ಲೂರ್ದುಸ್ವಾಮಿ ಅವರು ಏಪ್ರಿಲ್ 26, 1937 ರಂದು ದಕ್ಷಿಣ ಭಾರತದ ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿ ಜಿಲ್ಲೆಯ ವೀರಗಳೂರು ಎಂಬ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಿಂದಲೂ ಜೆಸ್ಯೂಟ್ ಪಾದ್ರಿಗಳ ಕೆಲಸದಿಂದ ಪ್ರೇರಿತರಾಗಿ 1957ರಲ್ಲಿ ಧರ್ಮಶಾಸ್ತ್ರವನ್ನು ಅಧ್ಯಯನ ಮಾಡಿದರು” ಎಂದು ನಿರ್ಣಯವು ಹೇಳಿದೆ.

ನಿರ್ಣಯದ ಪ್ರಕಾರ, ಸಮಕಾಲೀನ ಭಾರತದಲ್ಲಿನ ಅತ್ಯಂತ ಮಹತ್ವದ ಆದಿವಾಸಿ ಚಳುವಳಿಗಳಲ್ಲಿ ಒಂದಾದ ಪಾತಾಳಗಡಿ ಚಳುವಳಿಯಲ್ಲಿ ಫಾದರ್ ಸ್ಟ್ಯಾನ್‌ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಆದಿವಾಸಿ ಸಮುದಾಯಗಳ ನಡುವೆ ಅವರಿಗೆ ಭಾರತೀಯ ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾಹಿತಿಯನ್ನು ಹರಡಲು ಸಹಾಯವಾಯಿತು. ಈ ಚಳುವಳಿಗೆ ಕಲ್ಲಿನ ಕೆತ್ತನೆಯ ಆದಿವಾಸಿ ಸಂಪ್ರದಾಯಗಳನ್ನು (ಉದಾಹರಣೆಗೆ, ಸಮಾಧಿಯ ಕಲ್ಲುಗಳು) ಬಳಸಲಾಗಿತ್ತು.

“ಜಾರ್ಖಂಡ್‌ನಲ್ಲಿ ಆದಿವಾಸಿ ಜನರಿಗೆ ಸ್ವ-ಆಡಳಿತವನ್ನು ಸ್ಥಾಪಿಸಲು ಅವಕಾಶ ನೀಡುವ ಭಾರತೀಯ ಸಂವಿಧಾನದ ಪಂಚಾಯತ್ ವ್ಯವಸ್ಥೆ ಅಥವಾ ಪೆಸಾ ಕಾಯ್ದೆಯ ನಿಬಂಧನೆಗಳ ಅನುಷ್ಠಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಫಾದರ್ ಸ್ಟ್ಯಾನ್‌ ಮಾಡಿದ್ದಾರೆ” ಎಂದು ನಿರ್ಣಯ ಹೇಳಿದೆ.

ಫಾದರ್ ಸ್ಟ್ಯಾನ್‌ ಸ್ವಾಮಿ ಅವರು ಜುಲೈ 5, 2021 ರಂದು ತಮ್ಮ 84 ನೇ ವಯಸ್ಸಿನಲ್ಲಿ ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿರುವಾಗ ನಿಧನರಾದರು. 2018 ರ ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಅವರ ಪಾತ್ರ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಕ್ಟೋಬರ್ 8, 2020 ರಂದು ಅವರನ್ನು ಬಂಧಿಸಲಾಗಿತ್ತು. ಪಿತೂರಿ, ದ್ವೇಷಪೂರಿತ ಭಾಷಣ ಮತ್ತು ಭಯೋತ್ಪಾದನೆ ಸೇರಿದಂತೆ ವಿವಿಧ ಅಪರಾಧಗಳ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...