Homeಮುಖಪುಟಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

- Advertisement -
- Advertisement -

ಜುಲೈ 5, 2021ರಂದು ಕಸ್ಟಡಿಯಲ್ಲಿ ಸಾವನ್ನಪ್ಪಿದ ಮಾನವ ಹಕ್ಕುಗಳ ಕಾರ್ಯಕರ್ತ ಫಾದರ್ ಸ್ಟ್ಯಾನ್‌ ಸ್ವಾಮಿ ಅವರ ಬಂಧನ, ಸೆರೆವಾಸ ಮತ್ತು ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಲು ಭಾರತ ಸರ್ಕಾರವನ್ನು ಒತ್ತಾಯಿಸಿ ಅಮೆರಿಕದ ಯುಎಸ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ನಿರ್ಣಯ ಮಂಡಿಸಲಾಗಿದೆ.

ಮೂವರು ಸಂಸದರಾದ ಜಿಮ್ ಮೆಕ್‌ಗವರ್ನ್, ಆಂಡ್ರೆ ಕಾರ್ಸನ್, ಜುವಾನ್ ವರ್ಗಾಸ್ ಸಂಸತ್ತಿನಲ್ಲಿ ನಿರ್ಣಯ ಮಂಡಿಸಿದ್ದಾರೆ.

“ಮಾನವ ಹಕ್ಕುಗಳ ಸಾರ್ವತ್ರಿಕ ಘೋಷಣೆಯ 19 ನೇ ವಿಧಿಯಲ್ಲಿ ಬರೆಯಲ್ಪಟ್ಟಂತೆ ಮತ್ತು 1948 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿಸಿದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವು ಮೂಲಭೂತ ಮಾನವ ಹಕ್ಕು. ಇದು ಭಾರತ ಸಹಿತ ಜಗತ್ತಿನ ಎಲ್ಲಾ ಸರ್ಕಾರಗಳಿಗೂ ಅನ್ವಯವಾಗುತ್ತದೆ” ಎಂದು ನಿರ್ಣಯವು ಸ್ಪಷ್ಟಪಡಿಸಿದೆ.

“ಫಾದರ್ ಸ್ಟ್ಯಾನ್‌ ಧ್ವನಿಯಿಲ್ಲದವರಿಗೆ ಧ್ವನಿ ನೀಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅವರು ಸ್ಥಳೀಯ ಆದಿವಾಸಿ ಜನರ ಹಕ್ಕುಗಳಿಗಾಗಿ ದಣಿವರಿಯದ ವಕೀಲರಾಗಿದ್ದರು. ಯುವ ಸಮುದಾಯದ ನಾಯಕರಿಗೆ ತರಬೇತಿ ನೀಡಿದವರು ಮತ್ತು ಭಾರತದಲ್ಲಿ ಅನೇಕ ಸಮುದಾಯಗಳಿಗೆ ನ್ಯಾಯಕ್ಕಾಗಿ ಕೆಲಸ ಮಾಡಿದವರು” ಎಂದು ಸಂಸದ ವರ್ಗಾಸ್ ಹೇಳಿದ್ದಾರೆ.

“ಮಾಜಿ ಜೆಸ್ಯೂಟ್ ಆಗಿದ್ದ ಫಾದರ್ ಸ್ಟ್ಯಾನ್‌ ಅವರು ಕಸ್ಟಡಿಯಲ್ಲಿದ್ದಾಗ ನಿರಂತರ ಕಿರುಕುಳ ಎದುರಿಸಿದ್ದರು. ಅವರಿಗೆ ವೈದ್ಯಕೀಯ ಆರೈಕೆಯನ್ನು ನಿರಾಕರಿಸಿರುವುದರ ಬಗ್ಗೆ ನಾನು ಗಾಬರಿಗೊಂಡಿದ್ದೇನೆ. ಫಾದರ್ ಸ್ಟ್ಯಾನ್‌ ಒಳ್ಳೆಯ ಕೆಲಸಗಳು ಮತ್ತು ಅವರ ಆಜೀವ ಬದ್ಧತೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಈ ನಿರ್ಣಯವನ್ನು ಮಂಡಿಸುತ್ತಿದ್ದೇನೆ” ಎಂದು ವರ್ಗಾಸ್ ತಿಳಿಸಿದ್ದಾರೆ.

“ಫಾದರ್ ಸ್ಟ್ಯಾನ್‌ ಎಂದು ಕರೆಯಲ್ಪಡುವ ಫಾದರ್ ಸ್ಟಾನಿಸ್ಲಾಸ್ ಲೂರ್ದುಸ್ವಾಮಿ ಅವರು ಏಪ್ರಿಲ್ 26, 1937 ರಂದು ದಕ್ಷಿಣ ಭಾರತದ ತಮಿಳುನಾಡು ರಾಜ್ಯದ ತಿರುಚಿರಾಪಳ್ಳಿ ಜಿಲ್ಲೆಯ ವೀರಗಳೂರು ಎಂಬ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಿಂದಲೂ ಜೆಸ್ಯೂಟ್ ಪಾದ್ರಿಗಳ ಕೆಲಸದಿಂದ ಪ್ರೇರಿತರಾಗಿ 1957ರಲ್ಲಿ ಧರ್ಮಶಾಸ್ತ್ರವನ್ನು ಅಧ್ಯಯನ ಮಾಡಿದರು” ಎಂದು ನಿರ್ಣಯವು ಹೇಳಿದೆ.

ನಿರ್ಣಯದ ಪ್ರಕಾರ, ಸಮಕಾಲೀನ ಭಾರತದಲ್ಲಿನ ಅತ್ಯಂತ ಮಹತ್ವದ ಆದಿವಾಸಿ ಚಳುವಳಿಗಳಲ್ಲಿ ಒಂದಾದ ಪಾತಾಳಗಡಿ ಚಳುವಳಿಯಲ್ಲಿ ಫಾದರ್ ಸ್ಟ್ಯಾನ್‌ ಪ್ರಮುಖ ಪಾತ್ರ ವಹಿಸಿದ್ದಾರೆ. ಇದು ಆದಿವಾಸಿ ಸಮುದಾಯಗಳ ನಡುವೆ ಅವರಿಗೆ ಭಾರತೀಯ ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾಹಿತಿಯನ್ನು ಹರಡಲು ಸಹಾಯವಾಯಿತು. ಈ ಚಳುವಳಿಗೆ ಕಲ್ಲಿನ ಕೆತ್ತನೆಯ ಆದಿವಾಸಿ ಸಂಪ್ರದಾಯಗಳನ್ನು (ಉದಾಹರಣೆಗೆ, ಸಮಾಧಿಯ ಕಲ್ಲುಗಳು) ಬಳಸಲಾಗಿತ್ತು.

“ಜಾರ್ಖಂಡ್‌ನಲ್ಲಿ ಆದಿವಾಸಿ ಜನರಿಗೆ ಸ್ವ-ಆಡಳಿತವನ್ನು ಸ್ಥಾಪಿಸಲು ಅವಕಾಶ ನೀಡುವ ಭಾರತೀಯ ಸಂವಿಧಾನದ ಪಂಚಾಯತ್ ವ್ಯವಸ್ಥೆ ಅಥವಾ ಪೆಸಾ ಕಾಯ್ದೆಯ ನಿಬಂಧನೆಗಳ ಅನುಷ್ಠಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಫಾದರ್ ಸ್ಟ್ಯಾನ್‌ ಮಾಡಿದ್ದಾರೆ” ಎಂದು ನಿರ್ಣಯ ಹೇಳಿದೆ.

ಫಾದರ್ ಸ್ಟ್ಯಾನ್‌ ಸ್ವಾಮಿ ಅವರು ಜುಲೈ 5, 2021 ರಂದು ತಮ್ಮ 84 ನೇ ವಯಸ್ಸಿನಲ್ಲಿ ಮುಂಬೈನ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಕಸ್ಟಡಿಯಲ್ಲಿರುವಾಗ ನಿಧನರಾದರು. 2018 ರ ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಅವರ ಪಾತ್ರ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಕ್ಟೋಬರ್ 8, 2020 ರಂದು ಅವರನ್ನು ಬಂಧಿಸಲಾಗಿತ್ತು. ಪಿತೂರಿ, ದ್ವೇಷಪೂರಿತ ಭಾಷಣ ಮತ್ತು ಭಯೋತ್ಪಾದನೆ ಸೇರಿದಂತೆ ವಿವಿಧ ಅಪರಾಧಗಳ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು.

ಇದನ್ನೂ ಓದಿ : ಹತ್ರಾಸ್ ಕಾಲ್ತುಳಿತ ಪ್ರಕರಣ: ‘ಜನಸಂದಣಿಯೇ ಅವಘಡಕ್ಕೆ ಪ್ರಮುಖ ಕಾರಣ..’ ಎಂದು ಎಸ್‌ಐಟಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...