Homeಕರ್ನಾಟಕನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ...

ನಿರ್ದೇಶಕರ ಕೊಠಡಿ ಬಿಟ್ಟುಕೊಡದೆ ದಲಿತ ಅಧಿಕಾರಿಗೆ ಕಿರುಕುಳ; ದೂರದರ್ಶನ ಕಚೇರಿ ಕಾರಿಡಾರ್‌ನಲ್ಲಿ ಕುಳಿತು ಕೆಲಸ ಮಾಡುತ್ತಿರುವ ಭಾಗ್ಯವಾನ್

- Advertisement -
- Advertisement -

ಬೆಂಗಳೂರು ದೂರದರ್ಶನ ಕೇಂದ್ರಕ್ಕೆ ಉಪ ಮಹಾನಿರ್ದೇಶಕರಾಗಿ (ಕಾರ್ಯಕ್ರಮ ವಿಭಾಗ) ಕಳೆದ ಮೂರು ತಿಂಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ಅಧಿಕಾರಿ ಭಾಗ್ಯವಾನ್ ಎಂಬುವವರನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರಿಗೆ ಮೀಸಲಾಗಿರುವ ಕೊಠಡಿಯನ್ನು ಅವರಿಗೆ ನೀಡದೆ, ಸಿಬಿಐ ತನಿಖೆ ಎದುರಿಸುತ್ತಿರುವ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೀದರ್ ಮೂಲದ ಭಾಗ್ಯವಾನ್ ಅವರು ದಲಿತ ಸಮುದಾಯಕ್ಕೆ ಸೇರಿರುವ ಕನ್ನಡಿಗ ಅಧಿಕಾರಿಯಾಗಿದ್ದಾರೆ. ಕೇಂದ್ರ ಸರ್ಕಾರ ಸ್ವಾಮ್ಯದ ದೂರದರ್ಶನ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಅಧಿಕಾರಿಯಾಗಿ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕಳೆದ ನಲ್ವತ್ತು ವರ್ಷಗಳಿಂದ ಕಾರ್ಯಕ್ರಮ ನಿರ್ದೇಶಕರಿಗೆಂದು ಮೀಸಲಿಟ್ಟಿದ್ದ ಕೊಠಡಿಯನ್ನು ಅವರಿಗೆ ನೀಡದೆ, ಕೆಲಸ ಮಾಡಲು ಅಗತ್ಯವಿರುವ ಕಂಪ್ಯೂಟರ್ ಸಹ ಒದಗಿಸದೆ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಪ್ರತಿನಿಧಿ ಜತೆಗೆ ಮಾತನಾಡಿದ ಅವರು, “ಚಂದನ ವಾಹಿನಿ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿ ನಾನು ಇಲ್ಲಿಗೆ ಬಂದು ಮೂರು ತಿಂಗಳಾಗಿದೆ; ನಾನು ಬಂದಾಗ ಇಲ್ಲಿನ ಇಂಜಿನಿಯರ್ ಮಂಗಲಗಿ ಎಂಬುವರಿಗೆ ಕಾರ್ಯಕ್ರಮ ವಿಭಾಗದ ಹೆಚ್ಚುವರಿ ಜವಾಬ್ದಾರಿ ನೀಡಿದ್ದರು. ಮೂಲತಃ ಅವರು ಇಂಜಿನಿಯರ್ ಆಗಿದ್ದು, ಚೆನ್ನೈ ಅಥವಾ ನಮ್ಮ ರೇಡಿಯೋ ವಿಭಾಗದಲ್ಲಿ ಅವರಿಗಾಗಿಯೇ ಮೀಸಲಿರುವ ಎರಡು ಪ್ರತ್ಯೇಕ ಕೊಠಡಿಗಳಿದ್ದು ಅಲ್ಲಿ ಕೂರಬೇಕು. ಅದೆಲ್ಲಾ ಬಿಟ್ಟು ಅವರು ದೂರದರ್ಶನದ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಪಟ್ಟುಹಿಡಿದು ಕುಳಿತಿದ್ದಾರೆ” ಎಂದರು.

“ನಿರ್ದೇಶಕರ ಹುದ್ದೆ ಖಾಲಿ ಇದ್ದಾಗ ಕುಳಿತುಕೊಳ್ಳಲಿ ಪರವಾಗಿಲ್ಲ.. ನಾನು ಅಧಿಕಾರ ವಹಿಸಿಕೊಂಡ ನಂತರವಾದರೂ ಕಚೇರಿ ಬಿಟ್ಟುಕೊಡಬೇಕಿತ್ತು. ಆದರೆ, ಅವರು ಬಿಟ್ಟುಕೊಡುತ್ತಿಲ್ಲ. ಅವರಿಗೆ ಬೆಂಬಲವಾಗಿ ನಮ್ಮ ವಿಭಾಗದ ಮುಖ್ಯಸ್ಥರಾದ ಮಾಧವರೆಡ್ಡಿಯವರು ನಿಂತಿದ್ದಾರೆ. ಈ ಬಗ್ಗೆ ಕೇಳಿದರೆ, ‘ಅವರು ಬಿಟ್ಟುಕೊಡದಿದ್ದರೆ ನಾನೇನು ಮಾಡಲಿ’ ಎನ್ನುತ್ತಾರೆ. ಮಂಗಲಗಿ ಅವರನ್ನು ಕೇಳಿದರೆ ‘ಮಾಧವರೆಡ್ಡಿಯವರನ್ನು ಕೇಳಿ’ ಎನ್ನುತ್ತಾರೆ. ಕಳೆದ ಮೂರು ತಿಂಗಳಿನಿಂದ ನನಗೆ ಇದೇ ರೀತಿಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ನಮ್ಮ ಮೇಲಾಧಿಕಾರಿಗಳಿಗೆ ಪತ್ರ ಬರೆದರೂ ಅವರಿಂದಲೂ ಈವರೆಗೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಎಷ್ಟೇ ಪ್ರಯತ್ನ ಮಾಡಿದರೂ ನಿರ್ದೇಶಕರಿಗೆ ಮೀಸಲಿರುವ ಕಚೇರಿಯಲ್ಲಿ ಕುಳಿತುಕೊಳ್ಳಲು ಬಿಡುತ್ತಿಲ್ಲ. ನನಗಾಗಿ ಮೀಸಲಿರುವ ಕೊಠಡಿ ಬಿಟ್ಟು, ಬೇರೆ ಯಾವುದೋ ಒಂದು ಕೊಠಡಿ ಕೊಡುತ್ತಿದ್ದಾರೆ. ಆದರೆ, ನಾನು ಅದನ್ನು ಬೇಡ ಎಂದು ತಿರಸ್ಕರಿಸಿದ್ದೇನೆ. ಆ ಕೊಠಡಿಯನ್ನೂ ನನಗೆ ಮೂರು ತಿಂಗಳ ನಂತರ ಅಧಿಕೃತವಾಗಿ ನೀಡಿದ್ದಾರೆ” ಎಂದು ತಮಗಾಗಿರುವ ಅನ್ಯಾಯದ ಬಗ್ಗೆ ಅವರು ವಿವರಿಸಿದರು.

ಕಚೇರಿ ಕಾರಿಡಾರ್‌ನಿಂದಲೆ ಕಾರ್ಯನಿರ್ವಹಣೆ

“ಕಳೆದ ಮೂರು ತಿಂಗಳಿನಿಂದ ನಾನು ಕಚೇರಿಯ ಕಾರಿಡಾರ್‌ನಲ್ಲೇ ಕೂತು ಕೆಲಸ ಮಾಡುತ್ತಿದ್ದೇನೆ. ಸಂದರ್ಶಕರು ಕಾಯುವ (ವಿಸಿಟರ್ಸ್‌ ವೇಯ್ಟಿಂಗ್ ಹಾಲ್) ಹಾಲ್‌ನಲ್ಲೇ ಕುಳಿತು ಕಚೇರಿ ಕೆಲಸ ಮಾಡುತ್ತಿದ್ದೇನೆ. ಕಂಪ್ಯೂಟರ್ ಸೇರಿದಂತೆ ನನ್ನ ಕೆಲಸಕ್ಕೆ ಅನುಕೂಲವಾಗುವಂತ ಯಾವುದೇ ಅಗತ್ಯ ವಸ್ತುಗಳನ್ನು ಒದಗಿಸಿಲ್ಲ. ಸಹೋದ್ಯೋಗಿಗಳ ಬಳಿ ಮನವಿ ಮಾಡಿಕೊಂಡು, ಪ್ರತಿದಿನ ಒಬ್ಬೊಬ್ಬರ ಕಂಪ್ಯೂಟರ್ ಬಳಸಿಕೊಂಡು ಕೆಲಸ ಮಾಡುತ್ತಿದ್ದೇನೆ; ಪ್ರತಿನಿತ್ಯ ನನ್ನ ಕೆಲಸವನ್ನು ಮುಗಿಸಿಯೇ ಮನೆಗೆ ತೆರಳುತ್ತಿದ್ದೇನೆ” ಎಂದರು.

“ಈ ಮುಂಚೆ ನಾನು ದೂರದರ್ಶನ ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದೆ; ಅಲ್ಲಿಂದ ಬಡ್ತಿ ಪಡೆದು ಬೆಂಗಳೂರು ಕೇಂದ್ರದಲ್ಲಿ ಕಾರ್ಯಕ್ರಮ ವಿಭಾಗದ ಮುಖ್ಯಸ್ಥನಾಗಿದ್ದೇನೆ. ಕಳೆದ 26 ವರ್ಷದಿಂದ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದು, ದಲಿತ ಎನ್ನುವ ಕಾರಣಕ್ಕೆ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅದೇ ಉದ್ದೇಶಕ್ಕೆ, ಎಲ್ಲರೂ ನನಗೆ ಕಚೇರಿ ನೀಡಬಾರದು ಎಂದು ನಿರ್ಧರಿಸಿದ್ದಾರೆ; ಎಲ್ಲ ರೀತಿಯ ನಿಯಮಗಳನ್ನು ಅವರು ಉಲ್ಲಂಘಿಸಿದ್ದಾರೆ” ಎಂದು ಅವರು ಬೇಸರ ಹೊರಹಾಕಿದರು.

“ನನಗೆ ಕಿರುಕುಳ ನೀಡುತ್ತಿರುವ ಇಬ್ಬರೂ ಅಧಿಕಾರಿಗಳ ವಿರುದ್ಧ ಸಿಬಿಐ ವಿಚಾರಣೆ ನಡೆಸುತ್ತಿದೆ. ನಮ್ಮ ದೂರದರ್ಶನ ನಿಯಮಗಳ ಪ್ರಕಾರ, ವಿಚಾರಣೆಗೆ ಒಳಪಟ್ಟಿರುವ ಯಾವುದೇ ಅಧಿಕಾರಿಗೆ ಹುದ್ದೆ ನೀಡಬಾರದು ಎಂದು ಹೇಳುತ್ತದೆ. ಆದರೆ, ಅವರಿಗೆ ಹೆಚ್ಚುವರಿಯಾಗಿ ಮೂರುಮೂರು ಜವಾಬ್ದಾರಿ ನೀಡಿದ್ದಾರೆ” ಎಂದು ವಿವರಿಸಿದರು.

“ಇಡೀ ದೇಶಕ್ಕೆ ಕಾರ್ಯಕ್ರಮ ವಿಭಾಗದ ನಿರ್ದೇಶಕನಾಗಿರುವ ಡೆಪ್ಯೂಟಿ ಡೈರೆಕ್ಟರ್ ಜನರಲ್ ನಾನೊಬ್ಬನೆ; ಅದು ಬಿಟ್ಟು ಈ ವಿಭಾಗಕ್ಕೆ ಸಂಬಂಧ ಇಲ್ಲದವರಿಗೆಲ್ಲಾ ಹೆಚ್ಚುವರಿ ಚಾರ್ಜ್‌ ನೀಡಿದ್ದಾರೆ. ಅವರಿಗೆ ದೂರದರ್ಶನದ ಅನುಭವವೇ ಇಲ್ಲ; ಆದರೂ ನನ್ನ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಓದಿ ಕೆಲಸ ಪಡೆದುಕೊಂಡಿದ್ದೇನೆ. ಕಾರ್ಯಕ್ರಮ ನಿರ್ದೇಶಕರಿಗೆ ಮೀಸಲಿರುವ ಕೊಠಡಿಯನ್ನು ನನಗೆ ಬಿಟ್ಟುಕೊಡಬೇಕು; ಕಳೆದ ನಲವತ್ತು ವರ್ಷಗಳಿಂದ ಆ ಕಚೇರಿ ನಿರ್ದೇಶಕರಿಗೆ ಮೀಸಲಿತ್ತು ಎನ್ನುವುದಕ್ಕೆ ಎಲ್ಲರ ಬಳಿ ಸಾಕಷ್ಟು ಪುರಾವೆಗಳಿವೆ. ನಾನು ಕೇಳಿದರೆ ಒಬ್ಬರ ಮೇಲೆ ಒಬ್ಬರು ಹೇಳುತ್ತಾ ದಿನದೂಡುತ್ತಿದ್ದಾರೆ” ಎಂದರು.

“ತಳ ಹಂತದ ಸಹೋದ್ಯೋಗಿಗಳು ನನಗೆ ವರದಿ ಮಾಡಿಕೊಳ್ಳುತ್ತಿದ್ದಾರೆ, ಅದಕ್ಕಾಗಿಯೇ ‘ಕಾರ್ಯಕ್ರಮ ಮುಖ್ಯಸ್ಥರು’ ಎಂದು ಅಸ್ಥಿತ್ವದಲ್ಲೇ ಇಲ್ಲದ ಹುದ್ದೆಯೊಂದನ್ನು ನನಗೆ ನೀಡಿದ್ದಾರೆ. ನಾನೇ ಮುಖ್ಯಸ್ಥ ಆಗಿರುವುದರಿಂದ ಅಂತ ಹುದ್ದೆಯನ್ನು ನಿರ್ದೇಶಕರಿಗಿಂತ ಕೆಳಗಿರುವ ಅಧಿಕಾರಿಗಳಿಗೆ ಕೊಡಬಹುದು; ನನಗೆ ಕೊಡುವುದಕ್ಕೆ ಬರುವುದಿಲ್ಲ” ಎಂದು ಭಾಗ್ಯವಾನ್ ವಿವರಿಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದೂರದರ್ಶನ ವಿಭಾಗದ ಮುಖ್ಯಸ್ಥರಾದ ಮಾದವರೆಡ್ಡಿ, “ಕೊಠಡಿ ನೀಡಿಲ್ಲ ಎಂಬುದು ಸುಳ್ಳು, ಈ ಬಗ್ಗೆ ಅವರನ್ನೇ ಕೇಳಬೇಕು. ನಾನು ನಿಯಮಗಳಂತೆ ನಡೆದುಕೊಳ್ಳುತ್ತಿದ್ದೇನೆ” ಎಂದು ಹೇಳಿದ ಅವರು, ‘ಮೀಟಿಂಗ್‌ನಲ್ಲಿದ್ದೇನೆ’ ಎಂದು ತರಾತುರಿಯಲ್ಲಿ ಕರೆ ಕಡಿತಗೊಳಿಸಿದರು.

ಇದನ್ನೂ ಓದಿ; ಸ್ಟ್ಯಾನ್‌ ಸ್ವಾಮಿ ಸಾವಿನ ಕುರಿತು ತನಿಖೆಗೆ ಒತ್ತಾಯಿಸಿ ಅಮೆರಿಕ ಸಂಸತ್‌ನಲ್ಲಿ ನಿರ್ಣಯ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...