Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...