Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...