Homeಮುಖಪುಟವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್...

ವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್ ಶಾ

- Advertisement -
- Advertisement -

ಮುಂಬೈನ ವರ್ಲಿಯಲ್ಲಿ ಭಾನುವಾರ ಮುಂಜಾನೆ ಕುಡಿದ ಮತ್ತಿನಲ್ಲಿ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿ, ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾದ 45 ವರ್ಷದ ಮಹಿಳೆಗೆ ಸಾವಿಗೆ ಕಾರಣನಾದ ಮಿಹಿರ್ ಶಾ ಮೂರು ದಿನಗ ಕಳೆದರೂ ಪತ್ತೆಯಾಗಿಲ್ಲ.

ಪತ್ತೆಕಾರ್ಯ ತೀವ್ರಗೊಳಿಸಿರುವ ಪೊಲೀಸರು, ಆರೋಪಿಯ ಸ್ನೇಹಿತರು ಸೇರಿದಂತೆ ಇದುವರೆಗೆ ಡಜನ್‌ಗಿಂತಲೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿದ್ದಾರೆ. ಆತನ ಪತ್ತೆಗೆ ಅನೇಕ ಕಾರ್ಯಪಡೆಗಳನ್ನು ರಚಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಸದಸ್ಯ ರಾಜಕಾರಣಿ ರಾಜೇಶ್ ಶಾ ಅವರ ಮಗ, ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಇತರ ಕುಟುಂಬ ಸದಸ್ಯರೊಂದಿಗೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ಮತ್ತು ಹತ್ತಿರದ ಸಂಬಂಧಿಗಳ ತಿಳಿದಿರುವ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿವೆ.

ಭಾನುವಾರ ಬಂಧಿತರಾಗಿದ್ದ ಆರೋಪಿ ತಂದೆ, ಶಿವಸೇನಾ ನಾಯಕ ರಾಜೇಶ್ ಶಾ ಅವರು ₹15,000 ಹಣ ಪಾವತಿಸಿ 24 ಗಂಟೆಗಳಲ್ಲಿ ಜಾಮೀನು ಪಡೆದರು. ಇನ್ನೂ ಜೈಲಿನಲ್ಲಿರುವ ಏಕೈಕ ಆರೋಪಿ ರಾಜಋಷಿ ಬಿಡಾವತ್ ಎಂಬಾತ ಬಾರ್‌ನಲ್ಲಿ ಸುಮಾರು ₹20,000 ಖರ್ಚು ಮಾಡಿದ ಗಂಟೆಗಳ ನಂತರ, ಆರೋಪಿಗೆ ಕಾರು ಓಡಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದನು. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದಾಗ, ತಾನೇ ಕಾರು ಚಲಾಯಿಸುತ್ತಿದ್ದಂತೆ ಸುಳ್ಳು ಹೇಳಿದ್ದ.

ಪೊಲೀಸರ ಪ್ರಕಾರ, ಭಾನುವಾರ ಮಿಹಿರ್ ಶಾ ಜುಹುದಲ್ಲಿರುವ ವೈಸ್ – ಗ್ಲೋಬಲ್ ತಪಸ್ ಬಾರ್‌ನಲ್ಲಿ ಪಾರ್ಟಿಗಾಗಿ ಮನೆಯಿಂದ ಹೊರಟರು. ಆ ಸಮಯದಲ್ಲಿ ಅವನು ತನ್ನ ತಂದೆ ಹೆಸರಿಗೆ ನೋಂದಾಯಿಸಿದ ಮರ್ಸಿಡಿಸ್ ಅನ್ನು ಓಡಿಸುತ್ತಿದ್ದು, ನಾಲ್ವರು ಗೆಳೆಯರು ಜೊತೆಗಿದ್ದರು ಎನ್ನಲಾಗಿದೆ.

ಐವರು ಬಾರ್‌ನಲ್ಲಿ ರಾತ್ರಿ 11 ಗಂಟೆಯವರೆಗೆ ಪಾರ್ಟಿ ಮಾಡಿದರು; 1.15 ಕ್ಕೆ (ಸೋಮವಾರ) ಮಿಹಿರ್ ಷಾ ತನ್ನ ಸ್ನೇಹಿತರನ್ನು ತನ್ನ ಮರ್ಸಿಡಿಸ್‌ನಲ್ಲಿ ಮನೆಗೆ ಹಿಂದಿರುಗಿಸಿದ್ದಾನೆ. ನಂತರ, ಮುಂಜಾನೆ 4 ಗಂಟೆಗೆ ಆತ ಬಿಡಾವತ್‌ನನ್ನು ತನ್ನ ಕಾರ್‌ನಲ್ಲಿ ಮರೈನ್ ಡ್ರೈವ್‌ನಲ್ಲಿ ‘ಜಾಲಿ ರೈಡ್’ಗೆ ಕರೆದೊಯ್ಯಲು ಹೇಳಿದ್ದಾನೆ. ಮುಂಜಾನೆ 5 ಗಂಟೆಗೆ, ಮರೀನ್ ಡ್ರೈವ್ ಮೇಲೆ ಮತ್ತು ಕೆಳಗೆ ಕಾರು ಓಡಿಸಿದ ನಂತರ, ಮನೆಗೆ ತಿರುಗಿಸಲಾಯಿತು. ಈ ಸಮಯದಲ್ಲಿ ಷಾ ಬಿಡಾವತ್ ಜೊತೆ ಸೀಟುಗಳನ್ನು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದು ನಿಜವಾಗಿದ್ದರೆ, ಬೆಳಿಗ್ಗೆ 5.30 ಕ್ಕೆ ಬೈಕ್‌ಗೆ ಡಿಕ್ಕಿ ಹೊಡೆದಾಗ ಶಾ ಕಾರು ಚಲಾಯಿಸುತ್ತಿದ್ದ. ಸಾವನ್ನಪ್ಪಿರುವ ಮಹಿಳೆಯನ್ನು ಕಾವೇರಿ ನಖ್ವಾ (45) ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ಪ್ರದೀಪ್‌ನೊಂದಿಗೆ ಪ್ರಯಾಣಿಸುತ್ತಿದ್ದಳು ಮತ್ತು ಇಬ್ಬರು ಅಡುಗೆ ಮಾಡಲು ಮೀನುಗ ಕೊಳ್ಳಲು ಹೋಗಿದ್ದರು ಎಂದು ವರದಿಯಾಗಿದೆ.

1.5 ಕಿಲೋಮೀಟರ್ ಮಹಿಳೆಯನ್ನು ಎಳೆದೊಯ್ದ ಶಾ

ಬಿಎಂಡಬ್ಲ್ಯು ಬೈಕ್‌ಗೆ ಗುದ್ದಿಸಿದ ನಂಯರ ಮೃತ ಮಹಿಳೆ ನಖ್ವಾ ಅವರನ್ನು 1.5 ಕಿಮೀ ಎಳೆದೊಯ್ಯಲಾಗಿದೆ ಎಂದು ಸೂಚಿಸುವ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಅಪಘಾತದ ಭಯಾನಕ ವಿವರಗಳು ಹೊರಹೊಮ್ಮಿವೆ. ಶಾ ನಂತರ ಬಿಡಾವತ್‌ನೊಂದಿಗೆ ಸೀಟು ವಿನಿಮಯ ಮಾಡಿಕೊಂಡಿದ್ದು, ಮಹಿಳೆಯ ಶವವನ್ನು ಕಾರಿನಡಿಯಿಂದ ಹೊರತೆಗೆದು ರಸ್ತೆಯಲ್ಲಿ ಬಿಟ್ಟಿದ್ದನ್ನು ಕೂಡ ದೃಶ್ಯದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಭೀಕರವೆಂದರೆ, ಚಾಲಕನು ಸಿಸಿಟಿವಿಯ ದೃಷ್ಟಿ ಕ್ಷೇತ್ರದಿಂದ ವೇಗವಾಗಿ ಚಲಿಸುವ ಮೊದಲು ಮತ್ತೊಂದು ಬಾರಿ ಆಕೆಯ ದೇಹದ ಮೇಲೆ ಕಾರನ್ನು ಹಿಮ್ಮುಖವಾಗಿ ಓಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದ್ದರಿಂದ ಬಿಡಾವತ್ ಅವರು “ತನ್ನ ಕೃತ್ಯಗಳ ಬಗ್ಗೆ ತಿಳಿದಿದ್ದರು ಮತ್ತು ಇತರ ಆರೋಪಿಗಳಿಗೆ ಸಹಾಯ ಮಾಡಿದರು” ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾಲಕನ ವಿರುದ್ಧದ ತಪ್ಪಿತಸ್ಥ ನರಹತ್ಯೆಯ ಆರೋಪವನ್ನು ಪ್ರಶ್ನಿಸಿದ್ದಾರೆ.

ಅಪಘಾತದ ನಂತರ ಮಿಹಿರ್ ಶಾ ತಪ್ಪಿಸಿಕೊಳ್ಳುವ ಯೋಜನೆಯಲ್ಲಿ ತನ್ನ ತಂದೆಗೆ ಅನೇಕ ಫೋನ್ ಕರೆಗಳನ್ನು ಮಾಡಿದ್ದ. ಅವರು, ಕಾರನ್ನು ಬಿಟ್ಟು ಆಟೋ ರಿಕ್ಷಾದಲ್ಲಿ ಗೋರೆಗಾಂವ್‌ನಲ್ಲಿರುವ ತನ್ನ ಗೆಳತಿಯ ಮನೆಗೆ ಹೋಗುವಂತೆ ಆದೇಶ ನೀಡಿದ್ದಾರೆ. ಗಂಟೆಗಳ ನಂತರ ಆತನನ್ನು ಅಪರಿಚಿತ ವ್ಯಕ್ತಿಯೊಬ್ಬ ಗೆಳತಿ ಮನೆಯಿಂದ ಕರೆದೊಯ್ದಿದ್ದಾನೆ.

ಈ ಮಧ್ಯೆ, ರಾಜೇಶ್ ಶಾ ಮತ್ತು ಚಾಲಕ ಬಿಎಂಡಬ್ಲ್ಯು ಕಾರನ್ನು ಕಲಾನಗರಕ್ಕೆ ಓಡಿಸಿದರು, ಅಲ್ಲಿ ಅವರು ಶಿವಸೇನೆ ಸ್ಟಿಕ್ಕರ್ ಅನ್ನು ವಿಂಡ್‌ಶೀಲ್ಡ್‌ನಿಂದ ಕಿತ್ತು ಕಾರನ್ನು ಮರೆಮಾಡಲು ಪ್ರಯತ್ನಿಸಿದರು. ಆದರೆ, ವರ್ಲಿ ಠಾಣೆಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ‘ಒಬಿಸಿಗಳನ್ನು ಮರಾಠರ ವಿರುದ್ಧ ನಿಲ್ಲುವಂತೆ ಮಾಡುತ್ತಿದ್ದೀರಿ..’; ಫಡ್ನವಿಸ್‌ ವಿರುದ್ಧ ಗುಡುಗಿದ ಮನೋಜ್ ಜಾರಂಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...