Homeಮುಖಪುಟವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್...

ವರ್ಲಿ ಹಿಟ್ ಆಂಡ್ ರನ್ ಪ್ರಕರಣ: 72 ಗಂಟೆ ಕಳೆದರೂ ಪತ್ತೆಯಾಗದ ಪ್ರಮುಖ ಆರೋಪಿ ಮಿಹಿರ್ ಶಾ

- Advertisement -
- Advertisement -

ಮುಂಬೈನ ವರ್ಲಿಯಲ್ಲಿ ಭಾನುವಾರ ಮುಂಜಾನೆ ಕುಡಿದ ಮತ್ತಿನಲ್ಲಿ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿ, ದ್ವಿಚಕ್ರ ವಾಹನದ ಹಿಂಬದಿ ಸವಾರೆಯಾದ 45 ವರ್ಷದ ಮಹಿಳೆಗೆ ಸಾವಿಗೆ ಕಾರಣನಾದ ಮಿಹಿರ್ ಶಾ ಮೂರು ದಿನಗ ಕಳೆದರೂ ಪತ್ತೆಯಾಗಿಲ್ಲ.

ಪತ್ತೆಕಾರ್ಯ ತೀವ್ರಗೊಳಿಸಿರುವ ಪೊಲೀಸರು, ಆರೋಪಿಯ ಸ್ನೇಹಿತರು ಸೇರಿದಂತೆ ಇದುವರೆಗೆ ಡಜನ್‌ಗಿಂತಲೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸಿದ್ದಾರೆ. ಆತನ ಪತ್ತೆಗೆ ಅನೇಕ ಕಾರ್ಯಪಡೆಗಳನ್ನು ರಚಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಸದಸ್ಯ ರಾಜಕಾರಣಿ ರಾಜೇಶ್ ಶಾ ಅವರ ಮಗ, ತನ್ನ ತಾಯಿ ಮತ್ತು ಸಹೋದರಿ ಸೇರಿದಂತೆ ಇತರ ಕುಟುಂಬ ಸದಸ್ಯರೊಂದಿಗೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಕುಟುಂಬದ ಎಲ್ಲ ಸದಸ್ಯರು ಮತ್ತು ಹತ್ತಿರದ ಸಂಬಂಧಿಗಳ ತಿಳಿದಿರುವ ಮೊಬೈಲ್ ಫೋನ್‌ಗಳು ಸ್ವಿಚ್ ಆಫ್ ಆಗಿವೆ.

ಭಾನುವಾರ ಬಂಧಿತರಾಗಿದ್ದ ಆರೋಪಿ ತಂದೆ, ಶಿವಸೇನಾ ನಾಯಕ ರಾಜೇಶ್ ಶಾ ಅವರು ₹15,000 ಹಣ ಪಾವತಿಸಿ 24 ಗಂಟೆಗಳಲ್ಲಿ ಜಾಮೀನು ಪಡೆದರು. ಇನ್ನೂ ಜೈಲಿನಲ್ಲಿರುವ ಏಕೈಕ ಆರೋಪಿ ರಾಜಋಷಿ ಬಿಡಾವತ್ ಎಂಬಾತ ಬಾರ್‌ನಲ್ಲಿ ಸುಮಾರು ₹20,000 ಖರ್ಚು ಮಾಡಿದ ಗಂಟೆಗಳ ನಂತರ, ಆರೋಪಿಗೆ ಕಾರು ಓಡಿಸುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದನು. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದಾಗ, ತಾನೇ ಕಾರು ಚಲಾಯಿಸುತ್ತಿದ್ದಂತೆ ಸುಳ್ಳು ಹೇಳಿದ್ದ.

ಪೊಲೀಸರ ಪ್ರಕಾರ, ಭಾನುವಾರ ಮಿಹಿರ್ ಶಾ ಜುಹುದಲ್ಲಿರುವ ವೈಸ್ – ಗ್ಲೋಬಲ್ ತಪಸ್ ಬಾರ್‌ನಲ್ಲಿ ಪಾರ್ಟಿಗಾಗಿ ಮನೆಯಿಂದ ಹೊರಟರು. ಆ ಸಮಯದಲ್ಲಿ ಅವನು ತನ್ನ ತಂದೆ ಹೆಸರಿಗೆ ನೋಂದಾಯಿಸಿದ ಮರ್ಸಿಡಿಸ್ ಅನ್ನು ಓಡಿಸುತ್ತಿದ್ದು, ನಾಲ್ವರು ಗೆಳೆಯರು ಜೊತೆಗಿದ್ದರು ಎನ್ನಲಾಗಿದೆ.

ಐವರು ಬಾರ್‌ನಲ್ಲಿ ರಾತ್ರಿ 11 ಗಂಟೆಯವರೆಗೆ ಪಾರ್ಟಿ ಮಾಡಿದರು; 1.15 ಕ್ಕೆ (ಸೋಮವಾರ) ಮಿಹಿರ್ ಷಾ ತನ್ನ ಸ್ನೇಹಿತರನ್ನು ತನ್ನ ಮರ್ಸಿಡಿಸ್‌ನಲ್ಲಿ ಮನೆಗೆ ಹಿಂದಿರುಗಿಸಿದ್ದಾನೆ. ನಂತರ, ಮುಂಜಾನೆ 4 ಗಂಟೆಗೆ ಆತ ಬಿಡಾವತ್‌ನನ್ನು ತನ್ನ ಕಾರ್‌ನಲ್ಲಿ ಮರೈನ್ ಡ್ರೈವ್‌ನಲ್ಲಿ ‘ಜಾಲಿ ರೈಡ್’ಗೆ ಕರೆದೊಯ್ಯಲು ಹೇಳಿದ್ದಾನೆ. ಮುಂಜಾನೆ 5 ಗಂಟೆಗೆ, ಮರೀನ್ ಡ್ರೈವ್ ಮೇಲೆ ಮತ್ತು ಕೆಳಗೆ ಕಾರು ಓಡಿಸಿದ ನಂತರ, ಮನೆಗೆ ತಿರುಗಿಸಲಾಯಿತು. ಈ ಸಮಯದಲ್ಲಿ ಷಾ ಬಿಡಾವತ್ ಜೊತೆ ಸೀಟುಗಳನ್ನು ಬದಲಾಯಿಸಿಕೊಂಡಿದ್ದಾನೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಇದು ನಿಜವಾಗಿದ್ದರೆ, ಬೆಳಿಗ್ಗೆ 5.30 ಕ್ಕೆ ಬೈಕ್‌ಗೆ ಡಿಕ್ಕಿ ಹೊಡೆದಾಗ ಶಾ ಕಾರು ಚಲಾಯಿಸುತ್ತಿದ್ದ. ಸಾವನ್ನಪ್ಪಿರುವ ಮಹಿಳೆಯನ್ನು ಕಾವೇರಿ ನಖ್ವಾ (45) ಎಂದು ಗುರುತಿಸಲಾಗಿದೆ. ಆಕೆ ತನ್ನ ಪತಿ ಪ್ರದೀಪ್‌ನೊಂದಿಗೆ ಪ್ರಯಾಣಿಸುತ್ತಿದ್ದಳು ಮತ್ತು ಇಬ್ಬರು ಅಡುಗೆ ಮಾಡಲು ಮೀನುಗ ಕೊಳ್ಳಲು ಹೋಗಿದ್ದರು ಎಂದು ವರದಿಯಾಗಿದೆ.

1.5 ಕಿಲೋಮೀಟರ್ ಮಹಿಳೆಯನ್ನು ಎಳೆದೊಯ್ದ ಶಾ

ಬಿಎಂಡಬ್ಲ್ಯು ಬೈಕ್‌ಗೆ ಗುದ್ದಿಸಿದ ನಂಯರ ಮೃತ ಮಹಿಳೆ ನಖ್ವಾ ಅವರನ್ನು 1.5 ಕಿಮೀ ಎಳೆದೊಯ್ಯಲಾಗಿದೆ ಎಂದು ಸೂಚಿಸುವ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಅಪಘಾತದ ಭಯಾನಕ ವಿವರಗಳು ಹೊರಹೊಮ್ಮಿವೆ. ಶಾ ನಂತರ ಬಿಡಾವತ್‌ನೊಂದಿಗೆ ಸೀಟು ವಿನಿಮಯ ಮಾಡಿಕೊಂಡಿದ್ದು, ಮಹಿಳೆಯ ಶವವನ್ನು ಕಾರಿನಡಿಯಿಂದ ಹೊರತೆಗೆದು ರಸ್ತೆಯಲ್ಲಿ ಬಿಟ್ಟಿದ್ದನ್ನು ಕೂಡ ದೃಶ್ಯದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಭೀಕರವೆಂದರೆ, ಚಾಲಕನು ಸಿಸಿಟಿವಿಯ ದೃಷ್ಟಿ ಕ್ಷೇತ್ರದಿಂದ ವೇಗವಾಗಿ ಚಲಿಸುವ ಮೊದಲು ಮತ್ತೊಂದು ಬಾರಿ ಆಕೆಯ ದೇಹದ ಮೇಲೆ ಕಾರನ್ನು ಹಿಮ್ಮುಖವಾಗಿ ಓಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದ್ದರಿಂದ ಬಿಡಾವತ್ ಅವರು “ತನ್ನ ಕೃತ್ಯಗಳ ಬಗ್ಗೆ ತಿಳಿದಿದ್ದರು ಮತ್ತು ಇತರ ಆರೋಪಿಗಳಿಗೆ ಸಹಾಯ ಮಾಡಿದರು” ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾಲಕನ ವಿರುದ್ಧದ ತಪ್ಪಿತಸ್ಥ ನರಹತ್ಯೆಯ ಆರೋಪವನ್ನು ಪ್ರಶ್ನಿಸಿದ್ದಾರೆ.

ಅಪಘಾತದ ನಂತರ ಮಿಹಿರ್ ಶಾ ತಪ್ಪಿಸಿಕೊಳ್ಳುವ ಯೋಜನೆಯಲ್ಲಿ ತನ್ನ ತಂದೆಗೆ ಅನೇಕ ಫೋನ್ ಕರೆಗಳನ್ನು ಮಾಡಿದ್ದ. ಅವರು, ಕಾರನ್ನು ಬಿಟ್ಟು ಆಟೋ ರಿಕ್ಷಾದಲ್ಲಿ ಗೋರೆಗಾಂವ್‌ನಲ್ಲಿರುವ ತನ್ನ ಗೆಳತಿಯ ಮನೆಗೆ ಹೋಗುವಂತೆ ಆದೇಶ ನೀಡಿದ್ದಾರೆ. ಗಂಟೆಗಳ ನಂತರ ಆತನನ್ನು ಅಪರಿಚಿತ ವ್ಯಕ್ತಿಯೊಬ್ಬ ಗೆಳತಿ ಮನೆಯಿಂದ ಕರೆದೊಯ್ದಿದ್ದಾನೆ.

ಈ ಮಧ್ಯೆ, ರಾಜೇಶ್ ಶಾ ಮತ್ತು ಚಾಲಕ ಬಿಎಂಡಬ್ಲ್ಯು ಕಾರನ್ನು ಕಲಾನಗರಕ್ಕೆ ಓಡಿಸಿದರು, ಅಲ್ಲಿ ಅವರು ಶಿವಸೇನೆ ಸ್ಟಿಕ್ಕರ್ ಅನ್ನು ವಿಂಡ್‌ಶೀಲ್ಡ್‌ನಿಂದ ಕಿತ್ತು ಕಾರನ್ನು ಮರೆಮಾಡಲು ಪ್ರಯತ್ನಿಸಿದರು. ಆದರೆ, ವರ್ಲಿ ಠಾಣೆಯ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ; ‘ಒಬಿಸಿಗಳನ್ನು ಮರಾಠರ ವಿರುದ್ಧ ನಿಲ್ಲುವಂತೆ ಮಾಡುತ್ತಿದ್ದೀರಿ..’; ಫಡ್ನವಿಸ್‌ ವಿರುದ್ಧ ಗುಡುಗಿದ ಮನೋಜ್ ಜಾರಂಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...