Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ 'ಗೋ ಬ್ಯಾಕ್' ಘೋಷಣೆ ಕೂಗಲಾಗಿದೆ ಎಂಬುವುದು...

FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇತ್ತೀಚೆಗೆ ಹಿಂಸಾಚಾರ ಪೀಡಿತ ಮಣಿಪುರದ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರಿಗೆ ರಾಜ್ಯಕ್ಕೆ ಭೇಟಿ ನೀಡುವಂತೆ ಒತ್ತಾಯಿಸಿದ್ದು “ಮಣಿಪುರದ ಜನರ ಮಾತುಗಳನ್ನು ಆಲಿಸಿ ಮತ್ತು ಏನು ನಡೆಯುತ್ತಿದೆ ಎಂಬುವುದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ” ಎಂದಿದ್ದಾರೆ.

ರಾಹುಲ್ ಗಾಂಧಿಯ ಮಣಿಪುರ ಭೇಟಿಯ ಬಳಿಕ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿಗಳು ಎಎನ್‌ಐ ಸುದ್ದಿ ಸಂಸ್ಥೆಯ ವಿಡಿಯೋವೊಂದನ್ನು ಹಂಚಿಕೊಂಡು “ರಾಹುಲ್ ಗಾಂಧಿ ವಿರುದ್ದ ಮಣಿಪುರದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಸದಾ ಬಿಜೆಪಿ ಪರ ಮತ್ತು ಸುಳ್ಳು ಸುದ್ದಿ ಹರಡುವ ಬಲಪಂಥೀಯ ಎಕ್ಸ್ ಬಳಕೆದಾರ @MrSinha ಎಎನ್‌ಐಯ ವಿಡಿಯೋವನ್ನು ಹಂಚಿಕೊಂಡಿದ್ದು ” ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಸ್ಥಳೀಯರು ಗೋ ಬ್ಯಾಕ್‌ ಘೋಷಣೆಗಳನ್ನು ಕೂಗಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ತನ್ನ ಪೋಸ್ಟ್ ಅನ್ನು ಡಿಲಿಟ್ ಮಾಡಿದ್ದಾರೆ.

ಮತ್ತೋರ್ವ ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅರುಣ್ ಪುದೂರ್ ಕೂಡ ಎಎನ್‌ಐಯ ವಿಡಿಯೋ ಹಂಚಿಕೊಂಡಿದ್ದು, “ಮಣಿಪುರದಲ್ಲಿ ಪಪ್ಪು ಹೋದಲೆಲ್ಲ ಗೋ ಬ್ಯಾಕ್ ಘೋಷಣೆ ಪ್ರತಿಧ್ವನಿಸಿದೆ. ಅವರು ತಮ್ಮ ಸಿಸಿಪಿ (ಚೈನೀಸ್ ಕಮ್ಯನಿಸ್ಟ್ ಪಾರ್ಟಿ) ಮಾಸ್ಟರ್‌ಗಳಿಗೆ ಸಹಾಯ ಮಾಡಲು ರಾಜ್ಯದಲ್ಲಿ ಮತ್ತೆ ಘರ್ಷಣೆ ಹುಟ್ಟು ಹಾಕುತ್ತಾರೆ ಎಂಬುವುದು ಜನರಿಗೆ ತಿಳಿದಿದೆ” ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, “ಈಶಾನ್ಯ ಹಿಂದೂ ಬುಡಕಟ್ಟುಗಳ ವಿನಾಶಕ್ಕೆ ನೆಹರೂ-ಗಾಂಧಿ ವಂಶಸ್ಥರು ಕಾರಣ” ಎಂದು ಆರೋಪಿಸಿದ್ದಾರೆ. “ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಎಂದಾದರೂ ರಾಜ್ಯಕ್ಕೆ ಭೇಟಿ ನೀಡಿದ್ದಾರಾ?” ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಅನೇಕ ಎಕ್ಸ್‌ ಬಳಕೆದಾರರು ಎಎನ್‌ಐಯ ವಿಡಿಯೋ ಹಂಚಿಕೊಂಡು “ರಾಹುಲ್ ಗಾಂಧಿ ಇತ್ತೀಚೆಗೆ ಮಣಿಪುರಕ್ಕೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಜನರು ಗೋ ಬ್ಯಾಕ್ ಘೋಷಣೆಗಳನ್ನು ಕೂಗಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣ ಬಳಕೆದಾರರು ಎಎನ್‌ಐಯ ವಿಡಿಯೋ ಹಂಚಿಕೊಂಡಿರುವ ಕಾರಣ ನಾವು ಆ ವಿಡಿಯೋವನ್ನು ಎಎನ್‌ಐ ಯಾವಾಗ ಪೋಸ್ಟ್ ಮಾಡಿದೆ ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಜನವರಿ 21,2024ರಂದು ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ ಎಎನ್‌ಐ ಹೀಗೆ ಬರೆದಿತ್ತು “ಅಸ್ಸಾಂನ ನಾಗಾಂವ್‌ನ ಅಂಬಾಗಾನ್ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಜನರು ‘ರಾಹುಲ್ ಗಾಂಧಿ ಗೋ ಬ್ಯಾಕ್, ಅನ್ಯಾಯ ಯಾತ್ರೆ’ ಪೋಸ್ಟರ್‌ಗಳನ್ನು ಹಿಡಿದು ಪ್ರತಿಭಟಿಸಿದರು.” ಈ ಪೋಸ್ಟ್ ವಿಡಿಯೋ ಹಳೇದು ಮಾತ್ರವಲ್ಲ ಅಸ್ಸಾಂನದ್ದು ಎಂದು ನಮಗೆ ತಿಳಿಸುತ್ತದೆ.

ಎಎನ್‌ಐ ವಿಡಿಯೋ ಪೋಸ್ಟ್ ಮಾಡಿದ್ದ ಅದೇ ಘಟನೆಯ ಕುರಿತು 22 ಜನವರಿ 2024ರಂದು ಡೆಕ್ಕನ್ ಹೆರಾಲ್ಟ್ ಸುದ್ದಿ ಪ್ರಕಟಿಸಿತ್ತು. ವರದಿಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆ ಅಸ್ಸಾಂನ ನಾಗಾಂವ್ ಜಿಲ್ಲೆ ತಲುಪಿದ ವೇಳೆ ಈ ಘಟನೆ ಸಂಭವಿಸಿದೆ ತಿಳಿಸಲಾಗಿದೆ. ವರದಿಯ ಪ್ರಕಾರ, ರಾಹುಲ್ ಗಾಂಧಿ ಮತ್ತು ಇತರ ಕೆಲವು ನಾಯಕರು ರೂಪೋಹಿಗೆ ಹೋಗುವಾಗ ಅಂಬಾಗನ್‌ನಲ್ಲಿರುವ ರಸ್ತೆ ಬದಿಯ ರೆಸ್ಟೋರೆಂಟ್‌ ಬಳಿ ವಾಹನ ನಿಲ್ಲಿಸಿ ಕೆಳಗಿಳಿದಿದ್ದರು. ಈ ವೇಳೆ ಗುಂಪು ಸೇರಿದ ಜನರು ಪೋಸ್ಟರ್‌ಗಳನ್ನು ಪ್ರದರ್ಶಿಸಿದ್ದಾರೆ.

ಅದೇ ದಿನ, ಇತರ ದಾಳಿಯ ಘಟನೆಗಳು ವರದಿಯಾಗಿತ್ತು. ಯಾತ್ರೆಯಿಂದ ವಾಪಸಾಗುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ವಾಹನಗಳ ಮೇಲೆ ದಾಳಿ ನಡೆಸಿರುವ ಆರೋಪ ಕೇಳಿ ಬಂದಿತ್ತು. ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದ ಮೂವರು ಸದಸ್ಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿತ್ತು. ಸೋನಿತ್‌ಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಜೈರಾಮ್ ರಮೇಶ್ ಅವರ ಕಾರಿನ ಮೇಲೂ ದಾಳಿ ನಡೆಸಿದ್ದ ಬಗ್ಗೆ ವರದಿಯಾಗಿತ್ತು. ಈ ನಡುವೆ ಯಾತ್ರೆ ನಾಗಾಂವ್ ತಲುಪಿತ್ತು.

ಈ ಆಪಾದಿತ ದಾಳಿಗಳನ್ನು ಖಂಡಿಸಿ ಕಾಂಗ್ರೆಸ್ ಜನವರಿ 22 ರಂದು ದೇಶದಾದ್ಯಂತ ಪ್ರತಿಭಟನೆ ಘೋಷಿಸಿತ್ತು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಅಸ್ಸಾಂನಲ್ಲಿ ಯಾತ್ರೆ ಪ್ರವೇಶಿಸಿದಾಗಿನಿಂದ ನಮ್ಮ ಬೆಂಗಾವಲು ವಾಹನಗಳು, ಆಸ್ತಿಗಳು ಮತ್ತು ನಾಯಕರ ಮೇಲೆ ನಿರಂತರ ದಾಳಿಗಳು ನಡೆಯುತ್ತಿದೆ ಎಂದು ಹೇಳಿದ್ದರು.

ಒಟ್ಟಿನಲ್ಲಿ ಜನವರಿ 21, 2024ರಂದು ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿದ್ದ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಅಸ್ಸಾಂನ ನಾಗಾಂವ್‌ ತಲುಪಿದ್ದಾಗ ಅವರ ವಿರುದ್ದ ಪೋಸ್ಟರ್ ಪ್ರದರ್ಶಿಸಿ ಘೋಷಣೆಗಳನ್ನು ಕೂಗಲಾಗಿತ್ತು. ಅದರ ವಿಡಿಯೋವನ್ನು, ಇತ್ತೀಚೆಗೆ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದಾಗ ಗೋ ಬ್ಯಾಕ್‌ ಘೋಷಣೆ ಕೂಗಲಾಗಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...