Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...