Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...