Homeಮುಖಪುಟಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು 'ಜಾತ್ಯತೀತತೆ' ಸಂವಿಧಾನದ ಮೂಲ ರಚನೆ ಎಂದಿದೆ:...

ಪೀಠಿಕೆ ತಿದ್ದುಪಡಿ ಪ್ರಶ್ನಿಸಿ ಅರ್ಜಿ| ನ್ಯಾಯಾಲಯದ ಹಲವು ತೀರ್ಪುಗಳು ‘ಜಾತ್ಯತೀತತೆ’ ಸಂವಿಧಾನದ ಮೂಲ ರಚನೆ ಎಂದಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಿಂದ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ತೆಗೆದು ಹಾಕುವಂತೆ ಕೋರಿ ರಾಜ್ಯಸಭೆಯ ಮಾಜಿ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಜುಲೈ 10 ) ಆಗಸ್ಟ್‌ಗೆ ಮುಂದೂಡಿದೆ.

ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು, “ಈ ನ್ಯಾಯಾಲಯದ ಹಲವಾರು ತೀರ್ಪುಗಳು ‘ಜಾತ್ಯತೀತ’ ಎಂಬ ಪದ ನಮ್ಮ ಸಂವಿಧಾನದ ಮೂಲ ರಚನೆ ಎಂಬುವುದಾಗಿ ಹೇಳಿದೆ” ಎಂದಿದ್ದಾರೆ.

ಒಂದೇ ವಿಷಯದ ಕುರಿತು ಮೂರು ಅರ್ಜಿಗಳು ಸಲ್ಲಿಕೆಯಾಗಿವೆ. ಹಾಗಾಗಿ, ಅರ್ಜಿದಾರರ ವಕೀಲರೊಬ್ಬರು  ಮಾಡಿದ ಮನವಿಯನ್ನು ಪರಿಗಣಿಸಿ, ಆಗಸ್ಟ್ 12 ರಿಂದ ವಿಷಯವನ್ನು ವಿಚಾರಣೆಗೆ ಮರು ಪಟ್ಟಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.

ಸಂವಿಧಾನದ ಪೀಠಿಕೆ ಅಂಗೀಕರಿಸಿದ ನವೆಂಬರ್ 26, 1949ರ ದಿನಾಂಕವನ್ನು ಬದಲಾಯಿಸದೆ ತಿದ್ದುಪಡಿ ಮಾಡಬಹುದೇ? ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಕೇಳಿತ್ತು.

ಸುಬ್ರಮಣಿಯನ್ ಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರಿದ್ದ ದ್ವಿಸದಸ್ಯ ಪೀಠ ಈ ಪ್ರಶ್ನೆ ಎತ್ತಿತ್ತು.

ಪ್ರಸ್ತುತ ಅರ್ಜಿಯು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಅಧಿಕಾರವದಿಯಲ್ಲಿ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಲು ಅನುವು ಮಾಡಿಕೊಟ್ಟ 1976ರ 42ನೇ ಸಂವಿಧಾನದ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದೆ. ಹೊಸ ಪದಗಳ ಅಳವಡಿಕೆ 368ನೇ ವಿಧಿಯ ಅಡಿಯಲ್ಲಿ ಸಂಸತ್ತಿನ ತಿದ್ದುಪಡಿ ಅಧಿಕಾರವನ್ನು ಮೀರಿದೆ ಎಂದು ವಾದಿಸಿದೆ.

ಸಂವಿಧಾನದ ರಚನಾಕಾರರು ಪ್ರಜಾಪ್ರಭುತ್ವದ ಆಡಳಿತದಲ್ಲಿ ಸಮಾಜವಾದಿ ಅಥವಾ ಜಾತ್ಯತೀತ ಪರಿಕಲ್ಪನೆಗಳನ್ನು ಪರಿಚಯಿಸಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ. ಸಂವಿಧಾನವು ನಾಗರಿಕರ ಆಯ್ಕೆಯ ಹಕ್ಕನ್ನು ಕಸಿದುಕೊಳ್ಳುವ ಮೂಲಕ ರಾಜಕೀಯ ಸಿದ್ಧಾಂತಗಳನ್ನು ಅವರ ಮೇಲೆ ಹೇರಲು ಸಾಧ್ಯವಿಲ್ಲದ ಕಾರಣ ಡಾ.ಬಿಆರ್‌ ಅಂಬೇಡ್ಕರ್ ಈ ಪದಗಳು ಅಳವಡಿಸುವುದನ್ನು ವಿರೋಧಿಸಿದ್ದರು ಎಂದಿದ್ದಾರೆ.

ಭಾರತೀಯ ಕಮ್ಯುನಿಸ್ಟ್ ಪಕ್ಷದ ರಾಜ್ಯಸಭಾ ಸಂಸದ ಬಿನೋಯ್ ವಿಶ್ವಂ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ಅರ್ಜಿಯನ್ನು ವಿರೋಧಿಸಿ, “ಜಾತ್ಯತೀತತೆ ಮತ್ತು ಸಮಾಜವಾದವು” ಭಾರತೀಯ ಸಂವಿಧಾನದ ಅಂತರ್ಗತ ವಿಷಯಗಳಾಗಿವೆ. ಆದ್ದರಿಂದ, ಪೀಠಿಕೆಯಲ್ಲಿ ಈ ಪದಗಳ ಸೇರ್ಪಡೆಯಿಂದ ಸಂವಿಧಾನದ ಮೂಲ ಸ್ವರೂಪಕ್ಕೆ ಧಕ್ಕೆಯಾಗುವುದಿಲ್ಲ ಎಂದಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಡಿಸೆಂಬರ್ 1976ರಲ್ಲಿ ಇಂದಿರಾ ಗಾಂಧಿ ಸರ್ಕಾರವು ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ಸೇರಿಸಲು ತಿದ್ದುಪಡಿ ಮಾಡಿತ್ತು. ‘ರಾಷ್ಟ್ರದ ಏಕತೆ’ ಎಂಬ ಪದಗುಚ್ಛವನ್ನು ‘ರಾಷ್ಟ್ರದ ಏಕತೆ ಮತ್ತು ಸಮಗ್ರತೆ’ ಎಂದು ಬದಲಾಯಿಸಲಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 42ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂಬುವುದು ಅರ್ಜಿದಾರರ ವಾದವಾಗಿದೆ.

ಮೂಲ ಪೀಠಿಕೆಯಲ್ಲಿ ಭಾರತವನ್ನು ‘ಸಾರ್ವಭೌಮ, ಪ್ರಜಾಪ್ರಭುತ್ವ ಗಣರಾಜ್ಯ’ ಎಂದು ಉಲ್ಲೇಖಿಸಲಾಗಿತ್ತು. ‘ಸಾರ್ವಭೌಮ’ ಮತ್ತು ‘ಪ್ರಜಾಪ್ರಭುತ್ವ’ದ ನಡುವೆ ‘ಸಮಾಜವಾದಿ’, ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸುಪ್ರೀಂ ಕೋರ್ಟ್ ‘1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್‌ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ’ ಎಂದು ಹೇಳಿತ್ತು.

ಇದನ್ನೂ ಓದಿ : ಮುಸ್ಲಿಂ ಮಹಿಳೆ ವಿಚ್ಛೇದಿತ ಗಂಡನಿಂದ ಜೀವನಾಂಶ ಪಡೆಯಬಹುದು: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...