Homeಕರ್ನಾಟಕಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

- Advertisement -
- Advertisement -

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ (57) ಇಂದು (ಜುಲೈ11) ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ.

‘ಅಚ್ಚ ಕನ್ನಡದ ನಿರೂಪಕಿ’ ಎಂದೇ ಪ್ರಸಿದ್ದಿ ಪಡೆದಿದ್ದ ಅಪರ್ಣಾ ಅವರು, ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದರು.

ಸಿನಿಮಾ ಮತ್ತು ಧಾರಾವಾಹಿಗಳಲ್ಲಿಯೂ ನಟಿಸಿ ಅವರು ಖ್ಯಾತಿ ಪಡೆದಿದ್ದರು. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಕೂಡ ಅಪರ್ಣಾ ನಡೆಸಿಕೊಟ್ಟಿದ್ದರು. ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡದಲ್ಲಿ ಬರುವ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

1984ರಲ್ಲಿ ತೆರೆಕಂಡಿದ್ದ ಪುಟ್ಟಣ್ಣ ಕಣಗಾಲ್‌ ಅವರ ‘ಮಸಣದ ಹೂವು’ಚಿತ್ರದಲ್ಲಿ ಖ್ಯಾತ ನಟ ದಿವಂಗತ ಅಂಬರೀಶ್ ಹಾಗೂ ಜಯಂತಿ ಅವರ ಜೊತೆಗೆ ನಟಿಸುವ ಮೂಲಕ ಅಪರ್ಣಾ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಇನ್ಸ್‌ಪೆಕ್ಟರ್‌ ವಿಕ್ರಮ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು. ಆ ಬಳಿಕ 1989ರಲ್ಲಿ ನಿರೂಪಕಿಯಾಗಿ ಟಿವಿ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದವರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. 1998ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

2013ರಲ್ಲಿ ಬಿಗ್‌ಬಾಸ್‌ ಕನ್ನಡದ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕೂಡ ಭಾಗವಹಿಸಿದ್ದರು. 2015ರಲ್ಲಿ ಸೃಜನ್‌ ಲೋಕೇಶ್‌ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್‌’ ಕಾರ್ಯಕ್ರಮದಲ್ಲಿ ವರಲಕ್ಷ್ಮೀ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದರು.

ಸಿಎಂ ಸಂತಾಪ :

“ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...