Homeಮುಖಪುಟಉತ್ತರ ಪ್ರದೇಶ: ದಲಿತ ಬಾಲಕನಿಗೆ ಬಲವಂತವಾಗಿ ಮೂತ್ರ ಕುಡಿಸಿ ಥಳಿಸಿದ ಯುವಕರ ಗುಂಪು

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಬಲವಂತವಾಗಿ ಮೂತ್ರ ಕುಡಿಸಿ ಥಳಿಸಿದ ಯುವಕರ ಗುಂಪು

- Advertisement -
- Advertisement -

ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ದಲಿತ ಅಪ್ರಾಪ್ತ ಬಾಲಕನಿಗೆ ಮೂತ್ರ ಕುಡಿಸುವಂತೆ ಒತ್ತಾಯಿಸಿದ ಮೂವರು ಯುವಕರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 15 ವರ್ಷ ವಯಸ್ಸಿನ ಸಂತ್ರತ್ರಸ್ತ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದು, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೌಂಡ್ ಮಿಕ್ಸರ್ ಮತ್ತು ಆಡಿಯೊ ಸಿಸ್ಟಮ್‌ಗಳನ್ನು ಅಳವಡಿಸುತ್ತಿದ್ದ ಎನ್ನಲಾಗಿದೆ.

ಮಂಗಳವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮದ್ಯದ ಅಮಲಿನಲ್ಲಿದ್ದ ಕಿಶನ್ ತಿವಾರಿ, ದಿಲೀಪ್ ಮಿಶ್ರಾ ಮತ್ತು ಸತ್ಯಂ ತಿವಾರಿ ಎಂಬುವರು ಆತನನ್ನು ಅಡ್ಡಗಟ್ಟಿದ್ದಾರೆ. ದಿಲೀಪ್ ಮಿಶ್ರಾ ಮದ್ಯದ ಬಾಟಲಿಯಲ್ಲಿ ಮೂತ್ರ ವಿಸರ್ಜನೆ ಮಾಡಿ, ಸತ್ಯಂ ಮತ್ತು ಕಿಶನ್ ಹುಡುಗನನ್ನು ಕೆಳಕ್ಕೆ ಬೀಳಿಸಿ ಬಾಟಲಿಯಿಂದ ಬಲವಂತವಾಗಿ ಬಾಲಕನಿಗೆ ಮೂತ್ರ ಕಿಡಿಸಲು ಒತ್ತಾಯಿಸಿದ್ದಾರೆ.

ಆರೋಪಿಗಳು ತಮ್ಮ ಮನೆಯಲ್ಲಿ ಕಾರ್ಯಕ್ರಮಕ್ಕಾಗಿ ಸ್ಥಾಪಿಸಿದ ಆಡಿಯೊ ಸಿಸ್ಟಮ್‌ಗೆ ಹೆಚ್ಚುವರಿ ಶುಲ್ಕ ವಿಧಿಸಿದ್ದ ಬಾಲಕನ ಕುಟುಂಬದ ಮೇಲೆ ಕೋಪಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

“ಆರೋಪಿಗಳು ಅಪ್ರಾಪ್ತನೊಂದಿಗೆ ಅನುಚಿತವಾಗಿ ವರ್ತಿಸಿ ಥಳಿಸಿದ್ದಾರೆ. ಅವರಲ್ಲಿ ಒಬ್ಬಾತ ಇಡೀ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾನೆ” ಎಂದು ಗಿಲೌಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹಿಮಾ ನಾಥ್ ಉಪಾಧ್ಯಾಯ ಹೇಳಿದರು.

ಬಾಲಕ ಮನೆಗೆ ಬಂದು ತನ್ನ ಅಣ್ಣನಿಗೆ ನಡೆದ ಘಟನೆ ಬಗ್ಗೆ ಹೇಳಿದ ಮರುದಿನ, ಆತನ ಪೋಷಕರು ಮತ್ತು ಸಹೋದರ ಪೊಲೀಸರಿಗೆ ದೂರು ನೀಡಿದ್ದರು.

ಪ್ರತ್ಯಕ್ಷದರ್ಶಿಗಳ ಮಾಹಿತಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಆಧರಿಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಬಾಲಕ ಮತ್ತು ಅವನ ಕುಟುಂಬವು ಗ್ರಾಮದಲ್ಲಿ ಡಿಜೆ ನಡೆಸುತ್ತಿದ್ದರು ಮತ್ತು ಭಾರಿ ಮೊತ್ತವನ್ನು ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾರಂಭವೊಂದರಲ್ಲಿ, ಜನರೇಟರ್‌ನಲ್ಲಿ ಇಂಧನ ಕೊರತೆಯನ್ನು ಉಲ್ಲೇಖಿಸಿ ಸಂತ್ರಸ್ತರ ಡಿಜೆ ನಿಲ್ಲಿಸಿದ್ದನು, ಇದು ಅವರ ನಡುವಿನ ದ್ವೇಷವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...