Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...