Homeಮುಖಪುಟತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

ತೆಲಂಗಾಣ : ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ

- Advertisement -
- Advertisement -

ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯಲ್ಲಿ 27 ವರ್ಷದ ಆದಿವಾಸಿ ಮಹಿಳೆಯೊಬ್ಬರು ತನ್ನ ಗ್ರಾಮದಲ್ಲಿ ಮರಳು ಗಣಿಗಾರಿಕೆಯಲ್ಲಿ ತೊಡಗಿರುವ ಭೂಮಾಲೀಕರ ಕುಟುಂಬದಿಂದ ಲೈಂಗಿಕ ದೌರ್ಜನ್ಯ ಮತ್ತು ಚಿತ್ರ ಹಿಂಸೆಗೆ ಒಳಗಾಗಿದ್ದು, 15 ದಿನಗಳ ನಂತರ ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ನಿರ್ಮಲಮ್ಮ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಗೆ ಥಳಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಆಕೆಯ ಗುಪ್ತಾಂಗವನ್ನು ಸುಟ್ಟು ಚಿತ್ರಹಿಂಸೆ ನೀಡಲಾಗಿದೆ. ಆಕೆಯ ಪತಿಯನ್ನು ಬಂಧಿತ ದುಡಿಮೆಗೆ ಒಳಪಡಿಸಲಾಗಿದೆ.

ಮಹಿಳೆಯ ಸ್ವಂತ ಕುಟುಂಬದವರು ಕೂಡ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಬಲ ಕುಟುಂಬಕ್ಕೆ ಒಂದು ತುಂಡು ಭೂಮಿ ಬಿಟ್ಟು ಕೊಡಲು ನಿರಾಕರಿಸಿದ ಕಾರಣ ಮಹಿಳೆಯ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳು ತೆಲಂಗಾಣದ ಕುರುಬ ಬಿ.ಸಿ ಜಾತಿಯ ಗೊಲ್ಲ ಸಮುದಾಯದ ವೆಂಕಟೇಶಲು ಮತ್ತು ಶಿವಮ್ಮ ದಂಪತಿಗಳು ಮತ್ತು ನಿರ್ಮಲಮ್ಮನ ಸ್ವಂತ ಸಹೋದರಿ ಮತ್ತು ಸೋದರ ಮಾವ ಎಂದು ತಿಳಿದು ಬಂದಿದೆ. ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿರ್ಮಲಮ್ಮ ಮತ್ತು ಆಕೆಯ ಕುಟುಂಬ ಬೇಟೆಯಾಡುವುದು ಮತ್ತು ಜೀವನಾಧಾರಕ್ಕಾಗಿ ದೈನಂದಿನ ಕೂಲಿ ಕೆಲಸವನ್ನು ಅವಲಂಬಿಸಿರುವ ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ವರ್ಗೀಕರಿಸಿರುವ ಚೆಂಚು ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.

“ತುಂಡು ಭೂಮಿಯನ್ನು ಪ್ರಬಲ ಕುಟುಂಬಕ್ಕೆ ಬಿಟ್ಟು ಕೊಡಲು ನಿರಾಕರಿಸಿದ ಕಾರಣಕ್ಕೆ ನನಗೆ ಚಿತ್ರಹಿಂಸೆ ನೀಡಿದ್ದಾರೆ. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೂ, ನನ್ನ ಸುರಕ್ಷತೆಯ ಬಗ್ಗೆ ನನಗೆ ಭಯವಿದೆ. ನನಗೆ ಬೆದರಿಕೆ ಇದ್ದರೂ ಪೊಲೀಸರು ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ನಿರ್ಮಲಮ್ಮ ಹೇಳಿರುವುದಾಗಿ ನ್ಯೂಸ್ ಮಿನಿಟ್ ತಿಳಿಸಿದೆ.

ಸೆಕ್ಷನ್ 307 (ಕೊಲೆ ಯತ್ನ), 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ ಪ್ರಯೋಗ ), 376 (ಅತ್ಯಾಚಾರ) ಸೆಕ್ಷನ್ 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ಜನರು ಮಾಡಿದ ಕೃತ್ಯಗಳು) ಜೊತೆಗೆ ಎಸ್‌ಸಿ, ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ನಿರ್ಮಲಮ್ಮ ಹೇಳುವ ಪ್ರಕಾರ, “ಆರೋಪಿ ವೆಂಕಟೇಶಲು ಆಕೆಯ ಮಾವನಿಂದ ನಾಲ್ಕು ಎಕರೆ ಜಮೀನು ಖರೀದಿಸಿದ್ದ. ಆದರೆ, ಆತ ಮೊದಲು ಒಪ್ಪಿದ ಬೆಲೆಯ ಅರ್ಧಕ್ಕಿಂತ ಕಡಿಮೆ ಹಣ ನೀಡಿದ್ದ. ಇತ್ತೀಚೆಗೆ, ನಿರ್ಮಲಮ್ಮ ಮತ್ತು ಆಕೆಯ ಪತಿಗೆ ಸೇರಿದ ಎರಡು ಎಕರೆ ಜಮೀನು ಕೂಡ ತನಗೆ ಬಿಟ್ಟು ಕೊಡುವಂತೆ ವೆಂಕಟೇಶಲು ಒತ್ತಾಯಿಸಿದ್ದ. ನಿರ್ಮಲಮ್ಮನ ಪತಿ ಯಾದಯ್ಯ (ಹೆಸರು ಬದಲಾಯಿಸಲಾಗಿದೆ) ಜಮೀನು ಪತ್ರಕ್ಕೆ ಸಹಿ ಹಾಕಲು ಮುಂದಾದಾಗ ನಿರ್ಮಲಮ್ಮ ತಡೆದಿದ್ದರು. ಈ ಕಾರಣಕ್ಕೆ ಆಕೆಗೆ ಚಿತ್ರಹಿಂಸೆ ನೀಡಲಾಗಿದೆ.

ನಿರ್ಮಲಮ್ಮಗೆ ಚಿತ್ರಹಿಂಸೆ ನೀಡಿದ ಪ್ರಕರಣ ತನಿಖೆಯ ನಡುವೆ, ಇತ್ತೀಚೆಗೆ ಮರಣ ಹೊಂದಿದ ಆಕೆಯ ಮಾವನ ಸಮಾಧಿಯಿಂದ ಶವ ಮೇಲೆತ್ತಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ, ಜಮೀನು ಮಾರಾಟ ಮಾಡಿದ ಬಾಕಿ ಹಣ ಕೇಳಿದ್ದಕ್ಕೆ ವೆಂಕಟೇಶಲು ನಮ್ಮ ಕುಟುಂಬದೊಂದಿಗೆ ಜಗಳವಾಡಿ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂದು ನಿರ್ಮಲಮ್ಮನ ಪತಿಯ ಸಹೋದರ ಸತೀಶ್ (ಹೆಸರು ಬದಲಿಸಲಾಗಿದೆ) ಆರೋಪಿಸಿದ್ದಾರೆ. ಆ ಪ್ರಕರಣದಲ್ಲಿ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.

ಜಮೀನು ಬಿಟ್ಟು ಕೊಡಲು ನಿರಾಕರಿಸಿದ ಬಳಿಕ ನಿರ್ಮಲಮ್ಮ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ಅನುಭವಿಸಿದ್ದಾರೆ. ಮೊದಲು ಆಕೆ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ವೆಂಕಟೇಶಲು ಮತ್ತು ಶಿವಮ್ಮ ಜೊತೆಗೂಡಿ ನಿರ್ಮಲಮ್ಮಗೆ ಆಕೆಯ ಕುಟುಂಬದ ಹಲವರು ಗುಂಪು ಹಲ್ಲೆ ನಡೆಸಿ ಅವಮಾನಿಸಿದ್ದಾರೆ.

ಇದಾದ ಬಳಿಕವೂ ನಿರ್ಮಲಮ್ಮ ಭೂಮಿ ಬಿಟ್ಟು ಕೊಡಲು ನಿರಾಕರಿಸಿದ್ದರು. ಇದರಿಂದ ಕೋಪಗೊಂಡ ವೆಂಕಟೇಶಲು, ನಿರ್ಮಲಮ್ಮನ ಪತಿ ಯಾದಯ್ಯಗೆ 10 ದಿನಗಳ ಕಾಲ ತನ್ನ ಮರಳು ಗಣಿಯಲ್ಲಿ ಕೆಲಸ ಮಾಡುವಂತೆ ಒತ್ತಾಯಿಸಿದ್ದ. ಈ ವೇಳೆ ಯಾದಯ್ಯಗೆ ಮದ್ಯಪಾನ ಮಾಡಿಸಿ ಆಸ್ತಿ ಪತ್ರಕ್ಕೆ ಸಹಿ ಹಾಕಿಸಲು ಪ್ರಯತ್ನಿಸಿದ್ದ.

ಜೂನ್ 8 ರಂದು, ನಿರ್ಮಲಮ್ಮ ಅವರನ್ನು ವೆಂಕಟೇಶಲು ತನ್ನ ಜಮೀನಿಗೆ ಕರೆದೊಯ್ದು, ಅಲ್ಲಿ ಆಕೆಗೆ ಥಳಿಸಿದ್ದ. ಅಲ್ಲದೆ, ಆಕೆಯ ಗುಪ್ತಾಂಗವನ್ನು ಬೆಂಕಿಯಿಂದ ಸುಟ್ಟಿದ್ದ. ವೈದ್ಯಕೀಯ ವರದಿಗಳ ಪ್ರಕಾರ, ನಿರ್ಮಲಮ್ಮನ ಗುಪ್ತಾಂಗದಲ್ಲಿ ಸುಟ್ಟ ಗಾಯಗಳು ಕಂಡು ಬಂದಿವೆ ಎಂದು ನ್ಯೂಸ್ ಮಿನಿಟ್ ಹೇಳಿದೆ.

ಕೃಪೆ: ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಗುಜರಾತ್ : ನಕಲಿ ಟೋಲ್ ಪ್ಲಾಝಾ, ಸರ್ಕಾರಿ ಕಚೇರಿ ಬಳಿಕ ಈಗ ನಕಲಿ ಆಸ್ಪತ್ರೆ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...