Homeಫ್ಯಾಕ್ಟ್‌ಚೆಕ್FACT CHECK : 'ಸ್ಟಾರ್' ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

- Advertisement -
- Advertisement -

“ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿಯಾಗಿದ್ದು, ಮಾರುಕಟ್ಟೆಯಲ್ಲಿ ಹರಿದಾಡುತ್ತಿವೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅನೇಕ ಎಕ್ಸ್‌ ಮತ್ತು ವಾಟ್ಸಾಪ್ ಬಳಕೆದಾರರು ಈ ಸುದ್ದಿ ನಿಜವೆಂದು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ಸ್ಟಾರ್ ಚಿಹ್ನೆಯಿರುವ 500 ರೂಪಾಯಿಯ ಕರೆನ್ಸಿ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಈ ಹಿಂದೆ ಇದೇ ರೀತಿಯ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆಗ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುವ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (ಪಿಐಬಿ) ಈ ಸಂದೇಶ ಸುಳ್ಳು ಎಂದು ಖಚಿತಪಡಿಸಿತ್ತು.

ಡಿಸೆಂಬರ್ 7, 2023ರಂದು ಪಿಐಬಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದ್ದ ಪೋಸ್ಟ್ ಕೆಳಗಿದೆ.

ಜುಲೈ 31, 2023ರಂದು ಹಿಂದೂಸ್ತಾನ್ ಟೈಮ್ಸ್ 500 ರೂ. ನೋಟುಗಳಲ್ಲಿ ಸ್ಟಾರ್‌ ಚಿಹ್ನೆ ಇರುವುದರ ಕುರಿತು ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ 500 ರೂ. ಕರೆನ್ಸಿ ನೋಟಿನಲ್ಲಿ ಸ್ಟಾರ್ ಚಿಹ್ನೆಯಿದ್ದರೆ ಭಯಪಡಬೇಡಿ. ಅದು ನಕಲಿ ಅಲ್ಲ ಎಂದು ಆರ್‌ಬಿಐ ಖಚಿತಪಡಿಸಿರುವುದಾಗಿ ಹೇಳಿತ್ತು.

ಇನ್ನು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕೂಡ 500 ರೂಪಾಯಿ ಹೊಸ ಕರೆನ್ಸಿ ನೋಟಿನ ಕುರಿತು ಮಾಹಿತಿಯಿದೆ.

ಡಿಸೆಂಬರ್ 16,2016ರಂದು ಹೊಸ 500 ರೂ. ಕರೆನ್ಸಿ ನೋಟುಗಳ ಕುರಿತು ಆರ್‌ಬಿಯ ಹೊರಡಿಸಿದ ಪತ್ರಿಕಾ ಪ್ರಕಟಣೆ ಇಂದಿಗೂ ಅದರ ವೆಬ್‌ಸೈಟ್‌ನಲ್ಲಿದೆ. ಪ್ರಕಟಣೆಯಲ್ಲಿ “ಆರ್‌ಬಿಐ ಶೀಘ್ರದಲ್ಲೇ ಮಹಾತ್ಮಾ ಗಾಂಧಿ (ಎಂ.ಜಿ) ಸರಣಿಯಲ್ಲಿ ರೂ. 500 ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ. ಈ ನೋಟಿನ ಎರಡೂ ನಂಬರ್‌ ಪ್ಯಾನೆಲ್‌ಗಳಲ್ಲಿ ‘E’ಎಂಬ ಇನ್‌ಸೆಟ್ ಅಕ್ಷರ ಇರಲಿದೆ. ಜೊತೆಗೆ‘*’ (ನಕ್ಷತ್ರ) ಗುರುತು ಕೂಡ ಇರಲಿದೆ. ಇದೇ ಮೊದಲ ಬಾರಿಗೆ ನಕ್ಷತ್ರ ಚಿಹ್ನೆಯೊಂದಿಗೆ 500 ರೂಪಾಯಿ ನೋಟುಗಳನ್ನು ಬಿಡುಗಡೆ ಮಾಡಲಾಗುತ್ತಿದೆ. 10, 20, 50 ಮತ್ತು 100 ರೂ. ಸರಣಿಯ ನಕ್ಷತ್ರ ಗುರುತು ಹೊಂದಿರುವ ನೋಟುಗಳು ಈಗಾಗಲೇ ಚಲಾವಣೆಯಲ್ಲಿವೆ. ನವೆಂಬರ್ 8, 2016 ರಂದು ಹೊರ ತರಲಾದ ಈ ನೋಟುಗಳು ಕಾನೂನು ಬದ್ಧವಾಗಿವೆ. ಅಲ್ಲದೆ, ಹೊಸ ನೋಟು ಆರ್‌ಬಿಐ ಗವರ್ನರ್ ಡಾ.ಉರ್ಜಿತ್ ಆರ್.ಪಟೇಲ್ ಅವರ ಸಹಿ ಮತ್ತು ಹಿಂಬದಿಯಲ್ಲಿ ಸ್ವಚ್ಛ ಭಾರತ ಲೋಗೋ ಹೊಂದಿರಲಿದೆ” ಎಂದು ಹೇಳಲಾಗಿದೆ.

ಆರ್‌ಬಿಐ ಅಧಿಕೃತ ಪ್ರಕಟಣೆಯಲ್ಲೇ ಹೊಸ 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳು ಸ್ಟಾರ್ ಅಥವಾ ನಕ್ಷತ್ರ ಚಿಹ್ನೆ ಹೊಂದಿರಲಿದೆ ಎಂದು ತಿಳಿಸಿದೆ. ಹಾಗಾಗಿ, ಸ್ಟಾರ್ ಗುರುತಿನ ನೋಟುಗಳು ನಕಲಿ ಎಂಬ ಸಂದೇಶ ಸುಳ್ಳು.

ಆದರೆ, ಅಸಲಿ ನೋಟಿನಂತೆಯೇ ಸ್ಟಾರ್‌ ಚಿಹ್ನೆಯಿರುವ ನಕಲಿ ನೋಟುಗಳು ಕೂಡ ಮಾರುಕಟ್ಟೆಯಲ್ಲಿ ಹರಿದಾಡುತ್ತಿರಬಹುದು. ನಕಲಿ ನೋಟು ದಂದೆಕೋರರು ಅಸಲಿ ನೋಟಿನಂತೆಯೇ ನಕಲಿ ನೋಟು ತಯಾರಿಸಿರಬಹುದು. ಹಾಗಾಗಿ, ನೋಟುಗಳನ್ನು ಪರಿಶೀಲಿಸಿ ಚಲಾಯಿಸುವುದು ಉತ್ತಮ.

ಇದನ್ನೂ ಓದಿ : FACT CHECK : ಸ್ವೀಡನ್‌ನಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುವ ರಸ್ತೆ ನಿರ್ಮಿಸಲಾಗಿದೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...