Homeಮುಖಪುಟ'ರಾಜ್ಯ ಸರ್ಕಾರ ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು..?' ಶಂಭು ಗಡಿ ದಿಗ್ಬಂಧನಕ್ಕೆ ಹರ್ಯಾಣ ವಿರುದ್ಧ ಸುಪ್ರೀಂ ಆಕ್ರೋಶ

‘ರಾಜ್ಯ ಸರ್ಕಾರ ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು..?’ ಶಂಭು ಗಡಿ ದಿಗ್ಬಂಧನಕ್ಕೆ ಹರ್ಯಾಣ ವಿರುದ್ಧ ಸುಪ್ರೀಂ ಆಕ್ರೋಶ

- Advertisement -
- Advertisement -

ರಾಜ್ಯ ಸರ್ಕಾರ ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹರಿಯಾಣ ಸರ್ಕಾರವನ್ನು ಪ್ರಶ್ನಿಸಿದೆ. ಫೆಬ್ರವರಿ 13 ರಿಂದ ರೈತರು ಮೊಕ್ಕಾಂ ಹೂಡಿರುವ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಸ್ಥಾಪಿಸಲಾದ ಬ್ಯಾರಿಕೇಡಿಂಗ್ ಅನ್ನು ತೆಗೆದುಹಾಕುವಂತೆ ಕೋರ್ಟ್‌ ನಿರ್ದೇಶಿಸಿದೆ.

ಫೆಬ್ರವರಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಗೆ ತೆರಳುವುದಾಗಿ ಘೋಷಿಸಿದಾಗ ಹರಿಯಾಣ ಸರ್ಕಾರವು ಅಂಬಾಲಾ-ನವದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿತ್ತು. ಬೆಳೆಗಳಿಗೆ

ಏಳು ದಿನಗಳೊಳಗೆ ಹೆದ್ದಾರಿಯನ್ನು ತೆರೆಯುವಂತೆ ಜುಲೈ 10 ರ ಹೈಕೋರ್ಟ್‌ನ ಆದೇಶದ ವಿರುದ್ಧ ರಾಜ್ಯವು ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯಲ್ಲಿದೆ ಎಂದು ಹರಿಯಾಣ ಸರ್ಕಾರದ ವಕೀಲರು ಹೇಳಿದ ನಂತರ, ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಈ ಆದೇಶ ನೀಡಿದೆ.

ಫೆ.22 ರಂದು ಪಂಜಾಬ್-ಹರಿಯಾಣ ಶಂಭು ಗಡಿಯಲ್ಲಿ ಬೆಳೆಗಳಿಗೆ ಎಂಎಸ್‌ಪಿ ಕಾನೂನು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳ ಮೇಲೆ ಪ್ರತಿಭಟನಾ ನಿರತ ರೈತರ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಹೆದ್ದಾರಿಯಲ್ಲಿ ನಿಂತಿದ್ದವು.

“ರಾಜ್ಯವು ಹೆದ್ದಾರಿಯನ್ನು ಹೇಗೆ ನಿರ್ಬಂಧಿಸಬಹುದು? ಟ್ರಾಫಿಕ್ ನಿಯಂತ್ರಿಸುವುದು ಅದರ ಕರ್ತವ್ಯವಾಗಿದೆ. ನಾವು ಅದನ್ನು ತೆರೆಯುವಂತೆ ಸೂಚಿಸುತ್ತೇವೆ” ಎಂದು ನ್ಯಾಯವಾದಿ ಭೂಯಾನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ನ್ಯಾಯಪೀಠಕ್ಕೆ ತಿಳಿಸಿದ ನಂತರ ಹೇಳಿದರು.

ನ್ಯಾಯಮೂರ್ತಿ ಕಾಂತ್ ಅವರು ರಾಜ್ಯದ ಪರ ವಕೀಲರಿಗೆ, “ನೀವು ಹೈಕೋರ್ಟ್ ಆದೇಶವನ್ನು ಏಕೆ ಪ್ರಶ್ನಿಸಲು ಬಯಸುತ್ತೀರಿ? ರೈತರೂ ಈ ದೇಶದ ಪ್ರಜೆಗಳು. ಅವರಿಗೆ ಆಹಾರ ಮತ್ತು ಉತ್ತಮ ವೈದ್ಯಕೀಯ ಸೇವೆ ನೀಡಿ. ಅವರು ಬರುತ್ತಾರೆ, ಘೋಷಣೆಗಳನ್ನು ಕೂಗುತ್ತಾರೆ ಮತ್ತು ಹಿಂತಿರುಗುತ್ತಾರೆ” ವಾಗ್ದಂಡೆನೆ ನೀಡಿತು.

‘ಅವರು ರಸ್ತೆ ಮೂಲಕ ಪ್ರಯಾಣಿಸುತ್ತಾರೆ’ ಎಂದು ವಕೀಲರು ಉತ್ತರಿಸಿದರು. ‘ಹಾಗಾದರೆ, ಅವರೂ ಕಷ್ಟಗಳನ್ನು ಅನುಭವಿಸುತ್ತಿರಬೇಕು” ಎಂದು ಪೀಠ ಹೇಳಿತು.

ಬಾಕಿ ಉಳಿದಿರುವ ವಿಚಾರದಲ್ಲಿ ನಂತರದ ಬೆಳವಣಿಗೆಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರತಿಭಟನಾ ನಿರತ ರೈತರು ಮತ್ತು ಹರಿಯಾಣ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯ ಸಂದರ್ಭದಲ್ಲಿ ರೈತ ಶುಭಕರನ್ ಸಿಂಗ್ ಅವರ ಸಾವಿನ ತನಿಖೆಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವ ಮಾರ್ಚ್ 7 ರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹರಿಯಾಣ ಸರ್ಕಾರದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಏಪ್ರಿಲ್ 1 ರಂದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಫೆಬ್ರವರಿ 21 ರಂದು ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖಾನೌರಿಯಲ್ಲಿ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವನ್ನಪ್ಪಿದ್ದರು ಮತ್ತು ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಕೆಲವು ಪ್ರತಿಭಟನಾ ನಿರತ ರೈತರು ಗಡಿಯಲ್ಲಿ ನಿರ್ಮಿಸಲಾದ ಬ್ಯಾರಿಕೇಡ್‌ಗಳತ್ತ ಸಾಗಲು ಪ್ರಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ದೆಹಲಿಗೆ ಸಾಗುತ್ತಿದ್ದ ಮೆರವಣಿಗೆಯನ್ನು ತಡೆಯುವಾಗ ಈ ಘಟನೆ ಸಂಭವಿಸಿದೆ. ಜುಲೈ 10 ರಂದು, ಶಂಭು ಗಡಿಯಲ್ಲಿನ ತಡೆಗೋಡೆಯನ್ನು ಒಂದು ವಾರದೊಳಗೆ ತೆರವುಗೊಳಿಸುವಂತೆ ಹರ್ಯಾಣ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತು.

ಯಾವುದೇ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯ ಸರ್ಕಾರ ಕಾನೂನು ಪ್ರಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬಹುದು ಎಂದೂ ನ್ಯಾಯಾಲಯ ಹೇಳಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪಂಜಾಬ್ ಸರ್ಕಾರಕ್ಕೆ ಇದೇ ರೀತಿಯ ನಿರ್ದೇಶನವನ್ನು ನೀಡಿದ್ದು, ಅದರ ಬದಿಯಲ್ಲಿರುವ ಯಾವುದೇ ಬ್ಯಾರಿಕೇಡಿಂಗ್ ಅನ್ನು ಸಹ ತೆಗೆದುಹಾಕಬೇಕು ಎಂದು ಹೇಳಿದೆ.

ಇದನ್ನೂ ಓದಿ; ರೈತರು ಹರಿಯಾಣ ಪ್ರವೇಶಿಸುವುದನ್ನು ತಡೆಯಲು ಸಾಧ್ಯವಿಲ್ಲ : ಶಂಭು ಗಡಿ ತೆರೆಯುವಂತೆ ಆದೇಶಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...