Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...