Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...