Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...