Homeಮುಖಪುಟಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ...

ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

- Advertisement -
- Advertisement -

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ತನ್ನ ಪುತ್ರನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ತಮ್ಮ ಇಡೀ ಕುಟಂಬ ಮತ್ತು ದಲಿತ ಸಮುದಾಯದ ಹಲವು ಮಂದಿ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ ಎಂದು ಕಾಂಗ್ರೆಸ್‌ನ ಜುನಾಗಢ ನಗರ ಎಸ್‌ಸಿ, ಎಸ್‌ಟಿ ಘಟಕದ ಅಧ್ಯಕ್ಷ ರಾಜೇಶ್ ಸೋಲಂಕಿ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ರಾಜೀನಾಮೆ ಪಡೆದು, ಅವರ ಪತಿಯನ್ನು ಬಂಧಿಸಬೇಕು ಎಂದು ರಾಜೇಶ್ ಸೋಲಂಕಿ ಆಗ್ರಹಿಸಿದ್ದಾರೆ. ರಾಜೇಶ್ ಅವರು ದಲಿತ ಸಮುದಾಯದ ಅನೌಪಚಾರಿಕ ಸಮಘಟನೆಯಾದ ಜುನಾಗಢ ಜಿಲ್ಲಾ ಅನುಸೂಚಿತ ಜಾತಿ ಸಮಾಜದ ಮುಖ್ಯಸ್ಥರೂ ಆಗಿದ್ದಾರೆ. ರಾಜೇಶ್ ಅವರ ಮಗ ಸಂಜಯ್ ಸೋಲಂಕಿ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕ ನ್ಯಾಷನಲ್ ಸ್ಟೂಡೆಂಡ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ)ನ ನಾಯಕರಾಗಿದ್ದಾರೆ.

ಸಂಜಯ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗೊಂಡಾಲ್ ಬಿಜೆಪಿ ಶಾಸಕಿ ಗೀತಾಬಾ ಜಡೇಜಾ ಅವರ ಪುತ್ರ ಜ್ಯೋತಿರಾದಿತ್ಯಸಿಂಹ ಅಲಿಯಾಸ್ ಗಣೇಶ್ ಅನ್ನು ಬಂಧಿಸಲಾಗಿದೆ.

ಬುಧವಾರ, ರಾಜೇಶ್ ಸೋಲಂಕಿ ಅವರು ಜುನಾಗಢ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮತಾಂತರಕ್ಕೆ ರಾಜ್ಯ ಸರ್ಕಾರದ ಅನುಮತಿ ಪಡೆಯಲು ಅರ್ಜಿ ನಮೂನೆ ಪಡೆದುಕೊಂಡಿದ್ದಾರೆ. ಗೀತಾಬಾ ಮತ್ತು ಆಕೆಯ ಪತಿ ಜಯರಾಜ್‌ಸಿಂಹ ಜಡೇಜಾ ವಿರುದ್ಧ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಾನು ಮತ್ತು ಸೋಲಂಕಿ ಕುಟುಂಬದ ಸುಮಾರು 150 ಸದಸ್ಯರು ಇಸ್ಲಾಂಗೆ ಮತಾಂತರಗೊಳ್ಳುವುದಾಗಿ ಜುಲೈ 6 ರಂದು ರಾಜೇಶ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಮೇ 30 ಮತ್ತು 31ರ ಮಧ್ಯರಾತ್ರಿಯಲ್ಲಿ ಸಂಜಯ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 15 ರೊಳಗೆ ಬಿಜೆಪಿಯು ಗೀತಾಬಾ ಅವರ ರಾಜೀನಾಮೆ ಪಡೆಯಬೇಕು ಮತ್ತು ಐಪಿಸಿ ಸೆಕ್ಷನ್ 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಜಯರಾಜ್‌ಸಿಂಹ ಅವರನ್ನು ಬಂಧಿಸಬೇಕು ಎಂದು ರಾಜೇಶ್ ಒತ್ತಾಯಿಸಿದ್ದಾರೆ.

ಮೇ 31 ರಂದು ಡ್ರೈವಿಂಗ್ ವಿಚಾರದಲ್ಲಿ ವಾಗ್ವಾದ ನಡೆದ ನಂತರ ಶಾಸಕರ ಪುತ್ರ ಜ್ಯೋತಿರಾದಿತ್ಯಸಿಂಹ ಮತ್ತು ಇತರರು ಜುನಾಗಢದಿಂದ ತನ್ನನ್ನು ಅಪಹರಿಸಿದ್ದರು ಎಂದು ಸಂಜಯ್ ನೀಡಿರುವ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿಗಳು ತನ್ನನ್ನು ರಾಜ್‌ಕೋಟ್ ಜಿಲ್ಲೆಯ ಗೊಂಡಾಲ್‌ಗೆ ಕರೆದೊಯ್ದು, ಪಿಸ್ತೂಲ್ ತೋರಿಸಿ ಬೆದರಿಸಿ, ಬಟ್ಟೆ ಬಿಚ್ಚಿ, ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ ಎಂದು ಸಂಜಯ್ ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಜ್ಯೋತಿರಾದಿತ್ಯಸಿಂಹ ಮತ್ತು ಇತರ 10 ಜನರನ್ನು ಕೊಲೆ ಯತ್ನದ ಆರೋಪ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಬಂಧಿಸಿದ್ದಾರೆ. ಎಲ್ಲಾ ಆರೋಪಿಗಳು ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೂರು ಬಾರಿ ಗೊಂಡಾಲ್‌ನ ಶಾಸಕರಾಗಿದ್ದ ಜ್ಯೋತಿರಾದಿತ್ಯಸಿಂಹ ಅವರ ತಂದೆ ಜಯರಾಜ್‌ಸಿಂಹ ಕೂಡ ಸಂಜಯ್‌ನನ್ನು ಅಪಹರಿಸಿ ಹಲ್ಲೆ ನಡೆಸಿದ ಸಂಚಿನ ಭಾಗವಾಗಿದ್ದರು ಎಂದು ಸಂಜಯ್ ತಂದೆ ರಾಜೇಶ್ ಆರೋಪಿಸಿದ್ದಾರೆ.

“ಕಳೆದ 25 ವರ್ಷಗಳಿಂದ ಬಿಜೆಪಿ ಗುಜರಾತ್‌ನಲ್ಲಿ ಆಡಳಿತ ನಡೆಸುತ್ತಿದ್ದು, ಈ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಸುಮಾರು 5,000 ಪ್ರಕರಣಗಳು ದಾಖಲಾಗಿವೆ. ಉನಾ ದೌರ್ಜನ್ಯದ ಸಂತ್ರಸ್ತರಿಗೆ ಎಂಟು ವರ್ಷ ಕಳೆದರೂ ನ್ಯಾಯ ಸಿಕ್ಕಿಲ್ಲ. ನಾಗರಿಕರನ್ನು ರಕ್ಷಿಸುವುದು ಗುಜರಾತ್ ಸರ್ಕಾರದ ಕರ್ತವ್ಯ. ಹಾಲಿ ಶಾಸಕಿ ಮತ್ತು ಮಾಜಿ ಶಾಸಕನ ಮಗ ನನ್ನ ಮಗನನ್ನು ಅಪಹರಿಸಿದ್ದಾರೆ” ಎಂದು ರಾಜೇಶ್ ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಮಾಧ್ಯಮಗಳಿಗೆ ಹೇಳಿದ್ದಾರೆ.

“ಆಗಸ್ಟ್ 15 ರವರೆಗೆ ಸರ್ಕಾರ ಮತ್ತು ಬಿಜೆಪಿಗೆ ಸಮಯ ನೀಡಿದ್ದೇವೆ. ಸರ್ಕಾರ ಮತ್ತು ಬಿಜೆಪಿ ನಮ್ಮ ಮಾತುಗಳನ್ನು ಕೇಳದಿದ್ದರೆ ಮತ್ತು ನಮ್ಮ ಬೇಡಿಕೆಗಳನ್ನು ಒಪ್ಪದಿದ್ದರೆ, ಗಾಂಧಿನಗರಕ್ಕೆ ಬೃಹತ್ ರ್‍ಯಾಲಿ ನಡೆಸುತ್ತೇವೆ. ದಲಿತರಿಗೆ ನ್ಯಾಯ ಕೊಡಿಸುವಂತೆ ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಬಿಜೆಪಿ ಅಧ್ಯಕ್ಷರಿಗೆ ಮನವಿ ಸಲ್ಲಿಸುತ್ತೇವೆ. ಆ ನಂತರವೂ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ಇಸ್ಲಾಂಗೆ ಮತಾಂತರಗೊಳ್ಳುತ್ತೇವೆ” ಎಂದು ರಾಜೇಶ್ ತಿಳಿಸಿದ್ದಾರೆ.

ಇದನ್ನೂ ಓದಿ : ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...