Homeಫ್ಯಾಕ್ಟ್‌ಚೆಕ್FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ...

FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಆರೋಪ ಮುಕ್ತರಾಗಿ ಹೊರ ಬರಲಿ ಎಂದು ಪತ್ನಿ ವಿಜಯಲಕ್ಷಿ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎಂದು ಕನ್ನಡದ ಕೆಲ ಮಾಧ್ಯಮಗಳು ವರದಿ ಮಾಡಿವೆ ಮತ್ತು ದರ್ಶನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಮುಖ್ಯವಾಹಿನಿ ಮಾಧ್ಯಮ ಝೀ ಕನ್ನಡ ಚಾನೆಲ್ ತನ್ನ ಡಿಜಿಟಲ್ ವೇದಿಕೆಗಳಲ್ಲಿ ಜುಲೈ 7ರಂದು ಈ ಕುರಿತು ಸುದ್ದಿ ಪ್ರಕಟಿಸಿತ್ತು.

“ವಿಜಯಲಕ್ಷ್ಮಿಯವರು ತಮ್ಮ ಪತಿಯನ್ನು ಜೈಲಿನಿಂದ ಹೊರ ಕರೆತರಲು ಶಕ್ತಿ ದೇವತೆಯ ಮೊರೆ ಹೋಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂನಲ್ಲಿರುವ ಶ್ರೀ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಬೇಟಿ ನೀಡಿದ ವಿಜಯಲಕ್ಷ್ಮಿ, ದರ್ಶನ್‌ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ಆಷಾಢ ಶನಿವಾರದಂದು ಪೂಜೆ ಮಾಡಿ ಅವರು, ತಮ್ಮ ಗಂಡನಿಗಾಗಿ ಪ್ರಾರ್ಥಿಸಿದ್ದಾರೆ” ಎಂದು ಸುದ್ದಿಯಲ್ಲಿ ಹೇಳಲಾಗಿತ್ತು.

ಡಿ ಬಾಸ್ ಕಲ್ಟ್ಸ್ ಅಫೀಷಿಯಲ್ (Dboss Cults Official) ಎಂಬ ಇನ್​ಸ್ಟಾಗ್ರಾಂ ಖಾತೆಯಲ್ಲಿ ಕೂಡ ಈ ಕುರಿತು ಫೋಟೋ ಹಂಚಿಕೊಳ್ಳಲಾಗಿದೆ. ಅದರಲ್ಲಿ, “ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಮೇಡಂ. ಬಾಸ್ ಬೇಗ ಈಚೆ ಬರ್ಲಿ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ಝೀ ಕನ್ನಡ ವಾಹಿನಿಯ ಡಿಜಿಟಲ್ ವೇದಿಕೆ ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳಲ್ಲಿ ಹಂಚಿಕೊಂಡಿರುವ ಸುದ್ದಿ ಇತ್ತೀಚಿನದ್ದಲ್ಲ. ಹಳೆಯ ಫೋಟೋ ಬಳಸಿ ಈಗ ಸುದ್ದಿ ಮಾಡಲಾಗಿದೆ ಎಂಬ ಮಾಹಿತಿ ದೊರೆತ ಹಿನ್ನೆಲೆ ನಾವು ಸುದ್ದಿಯ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಸುದ್ದಿಯಲ್ಲಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 7 ಜುಲೈ , 2023 ರಂದು ಲತಾ ಜೈಪ್ರಕಾಶ್ ಎಂಬವರು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡ ಫೋಟೋ ಲಭ್ಯವಾಗಿದೆ.

ಲತಾ ಅವರು ”ವಿಜಿ ಅತ್ತಿಗೆ”ಎಂದು ಬರೆದುಕೊಂಡು ಸುದ್ದಿಯಾಗಿರುವ ಪೋಟೋ ಹಂಚಿಕೊಂಡಿದ್ದರು. ಅದನ್ನು ಜುಲೈ 7, 2024ರಂದು ಫೇಸ್‌ಬುಕ್ ಮೆಮೋರಿಯಾಗಿ ತೋರಿಸಿತ್ತು. ವರ್ಷದ ಬಳಿಕ ಹಳೆಯ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಲತಾ ಜೈಪ್ರಕಾಶ್ ಅವರು “ಒಂದು ವರ್ಷವಾಯಿತು. ಆದರೆ, ಆದರೆ ಈ ಬಾರಿ ಉತ್ತಮ ಸ್ಥಿತಿಯಲ್ಲಿಲ್ಲ. ಈ ಪರಿಸ್ಥಿತಿಯಿಂದ ಹೊರ ಬರಲು ಅಮ್ಮ ಆಶಿರ್ವದಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅಮ್ಮ ನಿಮಗೆ ಹೆಚ್ಚು ಶಕ್ತಿ, ಧೈರ್ಯ ಮತ್ತು ಆಶಿರ್ವಾದ ನೀಡಲಿ ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ, ದರ್ಶನ್ ಮತ್ತು ವಿಜಯಲಕ್ಷ್ಮೀ ಬಂಡೆ ಮಕಾಳಾಮ್ಮ ದೇವರನ್ನ ಬಲವಾಗಿ ನಂಬುತ್ತಾರೆ. ಈ ಹಿಂದೆ ಅನೇಕ ಬಾರಿ ಇಲ್ಲಿಗೆ ತೆರಳಿದ್ದರು. ದೇವಸ್ಥಾನದ ಪೂಜಾರಿಯೊಬ್ಬರನ್ನ ಮನೆಗೆ ಕರೆಸಿ ತಡೆ ಒಡೆಸಿಕೊಳ್ಳುತ್ತಿದ್ದರು. ಆದರೆ, ಇದೀಗ ದರ್ಶನ್ ಬೇಗನೆ ಜೈಲಿನಿಂದ ಹೊರಬರಲೆಂದು ಬಂಡೆ ಮಹಾಕಾಳಿ ದೇಸ್ಥಾನಕ್ಕೆ ವಿಜಯಲಕ್ಷ್ಮೀ ತೆರಳಿದ್ದಾರೆ ಎನ್ನುವ ಸುದ್ದಿ ಸುಳ್ಳಾಗಿದೆ. ವಾಸ್ತವವಾಗಿ ಈಗ ವೈರಲ್ ಆಗುತ್ತಿರುವ ಚಿತ್ರ ಒಂದು ವರ್ಷದಷ್ಟು ಹಿಂದಿನದ್ದು.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...