Homeಮುಖಪುಟಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

ಐಷಾರಾಮಿ ಕಾರು ಕಳುಹಿಸದ್ದಕ್ಕೆ ರಾಜ್ಯಪಾಲರ ಪುತ್ರನಿಂದ ಹಲ್ಲೆ: ಒಡಿಶಾ ರಾಜಭವನ ಸಿಬ್ಬಂದಿ ಆರೋಪ

- Advertisement -
- Advertisement -

ಪುರಿ ರೈಲು ನಿಲ್ದಾಣದಿಂದ ಕರೆದುಕೊಂಡು ಬರಲು ಐಷಾರಾಮಿ ಕಾರುಗಳನ್ನು ಕಳುಹಿಸದ ಕಾರಣಕ್ಕೆ ಒಡಿಶಾ ರಾಜ್ಯಪಾಲರ ಪುತ್ರ ತನ್ನ ಮೇಲೆ ಹಲ್ಲೆ ನಡೆಸಿರುವುದಾಗಿ ಒಡಿಶಾ ರಾಜಭವನದ ಸಿಬ್ಬಂದಿಯೊಬ್ಬರು ಆರೋಪಿಸಿದ್ದಾರೆ.

ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಹಲ್ಲೆ ನಡೆಸಿರುವುದಾಗಿ ಅಧಿಕಾರಿ ಬೈಕುಂಠ ಪ್ರಧಾನ್ ತಿಳಿಸಿದ್ದಾರೆ.

ಬೈಕುಂಠ ಪ್ರಧಾನ್ ರಾಜಭವನದಲ್ಲಿ ರಾಜ್ಯಪಾಲರ ಸಚಿವಾಲಯದ ಗೃಹ ವಿಭಾಗದ ಸಹಾಯಕ ವಿಭಾಗ ಅಧಿಕಾರಿಯಾಗಿದ್ದಾರೆ. ಪುರಿಯ ರಾಜಭವನ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯ ಮೇಲ್ವಿಚಾರಣೆಗೆ ತನ್ನನ್ನು ನಿಯೋಜಿಸಿದ್ದ ಸಂದರ್ಭದ, ಜುಲೈ 7ರಂದು ರಾತ್ರಿ ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಲಲಿತ್ ಕುಮಾರ್ ಮತ್ತು ಇತರ ಐವರು ತನಗೆ ಕಪಾಳಮೋಕ್ಷ ಮಾಡಿ, ಹೊಡೆದು, ಒದ್ದಿದ್ದಾರೆ ಎಂದು ಆರೋಪಿಸಿದ್ದಾರೆ.

ಜುಲೈ 10ರಂದು ಪ್ರಧಾನ್ ಅವರು ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರನ್ನು ಸಲ್ಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ಪಡೆಯಲು ರಾಜಭವನದ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿ ಸಾಸ್ವತ್ ಮಿಶ್ರಾ ಅವರಿಗೆ ಕರೆಮಾಡಿ, ಸಂದೇಶ ಕಳುಹಿಸಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೂರಿನಲ್ಲಿ, “ಪುರಿಯ ರಾಜಭವನದ ಉಸ್ತುವಾರಿಯಾಗಿರುವ ನಾನು ಜುಲೈ 7-8ರಂದು ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಯ ಸಿದ್ಧತೆಯನ್ನು ಮೇಲ್ವಿಚಾರಣೆ ಮಾಡಲು ಜುಲೈ 5ರಿಂದ ಭುವನೇಶ್ವರದ ರಾಜಭವನದಲ್ಲಿದ್ದೆ. ಜುಲೈ 7ರಂದು ರಾತ್ರಿ 11.45 ರ ಸುಮಾರಿಗೆ ಕಚೇರಿ ಕೊಠಡಿಯಲ್ಲಿ ಕುಳಿತಿದ್ದಾಗ, ರಾಜ್ಯಪಾಲರ ವೈಯಕ್ತಿಕ ಅಡುಗೆಯವರು ಬಂದು ಕುಮಾರ್ ಅವರನ್ನು ತಕ್ಷಣ ನೋಡಬೇಕೆಂದು ಹೇಳಿದರು” ಎಂದು ತಿಳಿಸಿದ್ದಾರೆ.

“ಕುಮಾರ್ ನನ್ನನ್ನು ನೋಡಿದ ತಕ್ಷಣ ನಿಂದಿಸಲು ಆರಂಭಿಸಿದರು. ಆಕ್ಷೇಪಾರ್ಹವಾದ ಭಾಷೆ ಬಳಸಿದರು. ನಾನು ಆಕ್ಷೇಪಿಸಿದಾಗ ನನಗೆ ಕಪಾಳಮೋಕ್ಷ ಮಾಡಿದ್ದಾರೆ. ನಾನು ಕೋಣೆಯಿಂದ ಹೊರಗೆ ಓಡಿ ಅನೆಕ್ಸ್‌ನ ಹಿಂದೆ ಅಡಗಿಕೊಂಡಿದ್ದೆ. ಆದರೆ, ಕುಮಾರ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳು ನನ್ನನ್ನು ಪತ್ತೆ ಹೆಚ್ಚಿ ಲಿಫ್ಟ್ ಮೂಲಕ ಕೋಣೆಗೆ ಎಳೆದೊಯ್ದಿದ್ದಾರೆ” ಎಂದು ಪ್ರಧಾನ್ ಆರೋಪಿಸಿದ್ದಾರೆ.

“ಭದ್ರತಾ ಸಿಬ್ಬಂದಿ ಮತ್ತು ಅಲ್ಲಿದ್ದ ಇತರರು ಈ ಘಟನೆಗೆ ಸಾಕ್ಷಿಯಾಗಿದ್ದಾರೆ. ಕುಮಾರ್ ನನಗೆ ಮತ್ತೆ ಕಪಾಳಮೋಕ್ಷ ಮಾಡಿದರು. ನನ್ನ ಮುಖದ ಮೇಲೆ ಗುದ್ದಿದರು. ನನ್ನ ದೇಹದ ಪ್ರತಿಯೊಂದು ಭಾಗಕ್ಕೂ ಒದ್ದಿದ್ದಾರೆ. ನನ್ನ ಎಡ ಪಾದವನ್ನು ತಿರುಚಿದರು. ನನ್ನನ್ನು ಕೊಂದರೆ ಯಾರೂ ನನ್ನನ್ನು ಉಳಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು” ಎಂದು ಹೇಳಿದ್ದಾರೆ.

“ಈ ಬಗ್ಗೆ ಜುಲೈ 8ರಂದು ಸಂಜೆ 4.30ಕ್ಕೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಮೌಖಿಕವಾಗಿ ವಿವರಿಸಿದ್ದು, ಜುಲೈ 10ರಂದು ಪತ್ರವನ್ನು ಮೇಲ್ ಮಾಡಿದ್ದೇನೆ” ಎಂದು ಪ್ರಧಾನ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಶುಕ್ರವಾರ ಭುವನೇಶ್ವರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಧಾನ್ ಅವರ ಪತ್ನಿ ಸಯೋಜ್, “ಜುಲೈ 11ರಂದು ಸೀ ಬೀಚ್ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆವು. ಆದರೆ ನಮ್ಮ ದೂರು ಸ್ವೀಕರಿಸಿಲ್ಲ. ಆದ್ದರಿಂದ, ನಾವು ದೂರನ್ನು ಪೊಲೀಸರಿಗೆ ಮೇಲ್ ಮಾಡಿದ್ದೇವೆ” ಎಂದು ಹೇಳಿದರು.

ಪುರಿ ರೈಲ್ವೆ ನಿಲ್ದಾಣದಲ್ಲಿ ತಮ್ಮನ್ನು ಬರಮಾಡಿಕೊಳ್ಳಲು ಎರಡು ಐಷಾರಾಮಿ ವಾಹನಗಳನ್ನು ಕಳುಹಿಸದಿರುವುದಕ್ಕೆ ಪ್ರಧಾನ್ ಮೇಲೆ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನ್ನ ಪಾದರಕ್ಷೆಯನ್ನು ನೆಕ್ಕಲು ಕುಮಾರ್ ಹೇಳಿದ್ದಾರೆ ಎಂದೂ ಕೂಡಾ ದೂರಿನಲ್ಲಿ ಆರೋಪಿಸಲಾಗಿದೆ. ಇನ್ನು ಪುರಿ ಪೊಲೀಸ್ ವರಿಷ್ಠಾಧಿಕಾರಿ ಪಿನಾಕ್ ಮಿಶ್ರಾ ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

“ನನ್ನ ಪತಿಯನ್ನು ರಾಷ್ಟ್ರಪತಿಗಳ ಕರ್ತವ್ಯಕ್ಕಾಗಿ ನಿಯೋಜಿಸಲಾಗಿದೆ. ರಾಜ್ಯಪಾಲರ ಮಗನ ಸೇವೆಗಾಗಿ ಅಲ್ಲ” ಎಂದು ಸಯೋಜ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಧಾನ್ ಅವರು ಜುಲೈ 10 ರಂದು ರಾಜ್ಯಪಾಲರು ಮತ್ತು ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಈ ವೇಳೆ ಅವರ ನಡವಳಿಕೆಯನ್ನೇ ಬದಲಾಯಿಕೊಳ್ಳಲು ಸೂಚಿಸಿದ್ದಾರೆ. 2019 ರಲ್ಲಿ ಎಎಸ್‌ಒ ಕೆಲಸಕ್ಕೆ ನೇಮಕ ಆಗುವ ಮುನ್ನ ಪ್ರಧಾನ್ ಸುಮಾರು 20 ವರ್ಷಗಳ ಕಾಲ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಿದ್ದಾರೆ ಎಂದು ಸಯೋಜ್ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ವರದಿ ಹಂಚಿಕೊಂಡಿರುವ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, “ಈ ಪ್ರಕರಣದಲ್ಲಿ ಯಾರು ಕ್ರಮ ಕೈಗೊಳ್ಳಲಿದ್ದಾರೆ? ಮೋದಿ ಈ ರಾಜ್ಯಪಾಲರನ್ನು ವಜಾಗೊಳಿಸಬಹುದೇ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಹಲ್ಲೆ ಪ್ರಕರಣ | ಬಿಜೆಪಿ ಶಾಸಕಿ, ಅವರ ಪತಿ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಕುಟುಂಬ ಸಮೇತ ಇಸ್ಲಾಂ ಧರ್ಮ ಸ್ವೀಕರಿಸುತ್ತೇವೆ : ಕಾಂಗ್ರೆಸ್ ದಲಿತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...