Homeಮುಖಪುಟದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಅಧ್ಯಕ್ಷರೂ ಆಗಿರುವ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ತಮ್ಮ ವಿವೇಚನೆ ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಕಿಡಿಕಾರಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿಯಲು ಲೆ. ಗವರ್ನರ್‌ ಅನುಮತಿಸಿದ್ದಕ್ಕೆ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ತಮ್ಮ ಪಾತ್ರ ಮುಚ್ಚಿಡಲು ಲೆ. ಗವರ್ನರ್‌ ಯತ್ನಿಸಿದ್ದನ್ನು ಖಂಡಿಸಿತು. ಮರ ಕಡಿಯಲು ತಾನು ನಿರ್ದೇಶನ ನೀಡಿದ್ದಾಗಿ ವಿಚಾರಣೆಯ ಮೊದಲ ದಿನವೇ ಲೆ. ಗವರ್ನರ್‌ ತಿಳಿಸಬೇಕಿತ್ತು ಎಂದು ಪೀಠ ಹೇಳಿದೆ.

ಮೊದಲ ದಿನವೇ ಲೆ. ಗವರ್ನರ್‌ ನಿರ್ದೇಶನ ನೀಡಿದ್ದಾರೆ ಎಂಬುವುದನ್ನು ನಮಗೆ ತಿಳಿಸಬೇಕಿತ್ತು. ಮೂರು ದಿನ ಆ ವಿಷಯ ಮುಚ್ಚಿಡಲಾಯಿತು. ಅಲ್ಲದೆ ಲೆ. ಗವರ್ನರ್‌ ಸಕ್ಸೇನಾ ಅವರು ತಮ್ಮನ್ನು ತಾವೇ ನ್ಯಾಯಾಲಯ ಎಂದು ಭಾವಿಸಿದಂತಿದೆ ಎಂದು ನ್ಯಾಯಾಲಯ ಕಿಡಿಕಾರಿದೆ. ಲೆ. ಗವರ್ನರ್‌ ಸೇರಿದಂತೆ ಎಲ್ಲರೂ ಪ್ರಕರಣದಲ್ಲಿ ತಪ್ಪು ಮಾಡಿದ್ದು, ನ್ಯಾಯಾಲಯಕ್ಕೆ ಸ್ಪಷ್ಟೀಕರಣ ನೀಡುವ ಬದಲು ಕೃತ್ಯವನ್ನು ಮುಚ್ಚಿಡಲು ಮುಂದಾಗಿದ್ದಾರೆ ಎಂದಿದೆ.

ಈ ಬೆಳವಣಿಗೆಗಳು ವಿಷಾದಕರ ಎಂದಿರುವ ನ್ಯಾಯಾಲಯ ಲೆ. ಗವರ್ನರ್‌ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದ ಅವರ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಇದೇ ವೇಳೆ ಮರ ಕಡಿಯಲು ಅನುಮತಿಸಲಾಗದು ಎಂದು ಲೆ. ಗವರ್ನರ್‌ಗೆ ತಿಳಿಸಲಾಗಿತ್ತೇ ಎಂಬ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಡಿಡಿಎ ಅಧಿಕಾರಿಗಳು ತನಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಅಲ್ಲದೆ ಲೆ. ಗವರ್ನರ್‌ ಅಣತಿಯಂತೆ ಮರ ಕಡಿಯಲು ನಿರ್ಧರಿಸಲಾಗಿತ್ತೇ ಅಥವಾ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲಾಗಿತ್ತೆ ಎಂಬುದನ್ನು ವಿವರಿಸುವಂತೆಯೂ ಡಿಡಿಎಗೆ ಅದು ನಿರ್ದೇಶಿಸಿದೆ.

ಯಾರ ಸೂಚನೆಯ ಮೇರೆಗೆ ಅವರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿಸುವಂತೆ ಮರ ಕಡಿದಿದ್ದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ವಿವರಿಸಬೇಕು ಎಂದು ಕೂಡ ಪೀಠ ತಾಕೀತು ಮಾಡಿದೆ.

ಇದನ್ನೂ ಓದಿ : ಉಪ ಚುನಾವಣೆ : 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಿಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...