Homeಫ್ಯಾಕ್ಟ್‌ಚೆಕ್FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ...

FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ ಇಲ್ಲಿದೆ

- Advertisement -
- Advertisement -

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ನಿಂತಿರುವಂತೆ ತೋರುವ ಕಪ್ಪು ಬಿಳುಪಿನ (Black and white) ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸರ್ವೇಶ್ ಕುಟ್ಲೆಹರಿಯ ಎಂಬ ಫೇಸ್‌ಬುಕ್ ಬಳಕೆದಾರ ಜುಲೈ 12ರಂದು ಈ ಫೋಟೋ ಹಂಚಿಕೊಂಡಿದ್ದು “8,500 ರೂ. ಕಟಾ ಕಟ್‌ ಟಕಾ ಟಕ್ ಸಿಗಲಿದೆ ಎಂದು ಹೇಳಲಾದ ವ್ಯಕ್ತಿಯ ಪೋಸ್ಟ್ 20 ಸಾವಿರಕ್ಕೂ ಹೆಚ್ಚು ಲೈಕ್ಸ್‌ಗಳು ಮತ್ತು 5,900 ಶೇರ್‌ಗಳನ್ನು ಪಡೆದುಕೊಂಡಿದೆ ಎಂದು ಬರೆದುಕೊಂಡಿದ್ದಾರೆ.

ಅನೇಕ ಎಕ್ಸ್‌ ಮತ್ತು ಫೇಸ್‌ಬುಕ್ ಬಳಕೆದಾರರು ಇದೇ ಬರಹದೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಹಾಗಾದರೆ ವೈರಲ್ ಫೋಟೋದಲ್ಲಿರುವ ಮಹಿಳೆ ನಿಜವಾಗ್ಲೂ ಸೋನಿಯಾ ಗಾಂಧಿಯ? ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ಫೋಟೋಗೆ ಪೋಸ್‌ಗೆ ಕೊಟ್ರಾ? ಎಂದು ಪರಿಶೀಲಿಸೋನ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಕೆಳಗೆ ಎರಡ ಭಾಗದಲ್ಲಿ ‘ರಿಮಾರ್ಕರ್’ (Remarker)ಎಂಬ ವಾಟರ್ ಮಾರ್ಕ್ ಇರುವುದನ್ನು ನಾವು ಗಮನಿಸಿದ್ದೇವೆ. ರಿಮಾರ್ಕರ್ ಕುರಿತು ನಾವು ಗೂಗಲ್ ಮೂಲಕ ಮಾಹಿತಿ ಹುಡುಕಿದಾಗ ಅದೊಂದು ಕೃತಕ ಬುದ್ದಿಮತ್ತೆ (Artificial intelligence) ಟೂಲ್ ಎಂಬುವುದು ಗೊತ್ತಾಗಿದೆ. ಈ ಎಐ ಟೂಲ್ ಯಾವುದಾದರು ಫೋಟೋದಲ್ಲಿ ವ್ಯಕ್ತಿಗಳ ಮುಖವನ್ನು ಬದಲಿ ಮತ್ತೊಬ್ಬರ ಮುಖ ಜೋಡಿಸಲು ಅನುವು ಮಾಡುತ್ತದೆ. ಹಾಗಾಗಿ, ಸೋನಿಯಾ ಗಾಂಧಿಯವರ ಫೋಟೋವನ್ನು ಎಐ ಮೂಲಕ ಸೃಷ್ಟಿಸಿರುವುದು ನಮಗೆ ಗೊತ್ತಾಗಿದೆ.

ಇನ್ನು ವೈರಲ್ ಫೋಟೋದ ಮೂಲ ಹುಡುಕಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ತಂಬ್ಲರ್‌ನಲ್ಲಿ 2013ರಲ್ಲಿ ವೈರಲ್ ಫೋಟೋದ ರೀತಿಯ ಪೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಆದರೆ, ಅಲ್ಲಿ ಸೋನಿಯಾ ಗಾಂಧಿಯ ಬದಲು ಮತ್ತೊಬ್ಬರು ಮಹಿಳೆಯ ಫೋಟೋ ಇದೆ. ಫೋಟೋಗೆ “Ghazale Photographed By Farzad Sarfarazi, 2012” ಎಂದು ಕ್ಯಾಪ್ಶನ್ ಕೊಡಲಾಗಿದೆ. ಫೋಟೋದ ಕೆಳಗೆ ಬಲ ಭಾಗದಲ್ಲಿ ವಾಟರ್ ಮಾರ್ಕ್‌ ಕೂಡ ಇದೆ.

ತಂಬ್ಲರ್‌ನಲ್ಲಿ ನಮಗೆ ಲಭ್ಯವಾಗಿರುವ ಫೋಟೋವನ್ನು ಅನೇಕರು ವಿವಿಧ ಸಂದರ್ಭಗಳಲ್ಲಿ ಹಂಚಿಕೊಂಡಿದ್ದು, ಫರ್ಝಾದ್ ಸರ್ಫರಾಝಿ ಅವರ ಫೋಟೋ ಎಂದು ತಿಳಿಸಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ, ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿರುವಂತೆ ಕಾಣುವ ಫೋಟೋ ರಿಮಾರ್ಕರ್ ಎಂಬ ಎಐ ಟೂಲ್ ಬಳಸಿ ಎಡಿಟ್ ಮಾಡಿರುವಂತದ್ದು. ಬೇರೊಬ್ಬ ಮಹಿಳೆಯ ಫೋಟೋದ ಮುಖ ಬದಲಾಯಿಸಿ ಸೋನಿಯಾ ಗಾಂಧಿಯವರ ಮುಖ ಕೂರಿಸಿರುವುದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...