Homeಮುಖಪುಟಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: 'ಹುಸಿ ಮಣ್ಣಿನ' ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

ಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: ‘ಹುಸಿ ಮಣ್ಣಿನ’ ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

- Advertisement -
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 120×120 ಅಡಿ ಹೋರ್ಡಿಂಗ್ ಅಳವಡಿಸಿದ್ದ ಸ್ಥಳದಲ್ಲಿ ಹುಸಿ ಮಣ್ಣು (ಮೃದುವಾದ ಮಣ್ಣು) ಇದೆ ಎಂದು ಅಲ್ಲಿ ಕಾಮಗಾರಿ ಡನೆಸುವಾಗಲೇ ಕೆಲಸಗಾರರು ಎಚ್ಚರಿಸಿದ್ದರು. ಆದರೆ, ಇದನ್ನು ನಿರ್ಲಕ್ಷಿಸಲಾಗಿದೆ. ಹದಿನಾರು ತಿಂಗಳ ನಂತರ, ಬೃಹತ್ ಜಾಹೀರಾತು ಫಲಕವು ಚಂಡಮಾರುತದ ಸಮಯದಲ್ಲಿ ಕುಸಿದುಬಿದ್ದು, 17 ಜನರು ಸಾವನ್ನಪ್ಪಿ, 74 ಮಂದಿ ಗಾಯಗೊಂಡಿದ್ದರು.

ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಲಾದ 3,299 ಪುಟಗಳ ಆರೋಪಪಟ್ಟಿಯಲ್ಲಿ, ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡವು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ), ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಉನ್ನತ ಅಧಿಕಾರಿಗಳ ಶಾಮೀಲಾಗಿರುವ ಆರೋಪವನ್ನೂ ಎತ್ತಿ ತೋರಿಸಿದೆ.

ಚಾರ್ಜ್‌ಶೀಟ್ ಪ್ರಕಾರ, ಮರವೊಂದು ಬಿದ್ದಾಗ ಬೃಹತ್ ಜಾಹೀರಾತು ಫಲಕವನ್ನು ಅಳವಡಿಸಲು ಜಾಗ ಅಗೆಯುವಾಗ ಕಾಂಗಾರಿ ನಿರ್ವಾಹಕರು ಮೃದುವಾದ ಮಣ್ಣು ಇರುವುದನ್ನು ಗ್ರಹಿಸಿದ್ದರು. ಮಣ್ಣಿನ ಪರಿಶೀಲನೆಯನ್ನು ಶಿಫಾರಸು ಮಾಡಿದರು, ಇದರಿಂದಾಗಿ ಬೃಹತ್ ರಚನೆಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟಡದ ಯೋಜನೆಗಳನ್ನು ಸರಿಹೊಂದಿಸಬಹುದು, ಈ ಪರಿಶೀಲನೆಗೆ 15 ದಿನಗಳು ಬೇಕಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಆದರೆ, ಇಗೋ ಮೀಡಿಯಾ ನಿರ್ದೇಶಕ ಭವೇಶ್ ಭಿಂಡೆ ಮತ್ತು ಮಾಜಿ ನಿರ್ದೇಶಕಿ ಜಾಹ್ನವಿ ಮರಾಠೆ ಅವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದರು ಮತ್ತು ಮಣ್ಣು ತಪಾಸಣೆ ಮಾಡದೆ ಮುಂದುವರೆದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಆಪಾದಿತ ನಿರ್ಲಕ್ಷ್ಯವು ಚಂಡಮಾರುತದ ಸಮಯದಲ್ಲಿ ಅಕ್ರಮ ಜಾಹೀರಾತು ಫಲಕ ಕುಸಿಯಲು ಒಂದು ಕಾರಣವೆಂದು ಪರಿಗಣಿಸಬಹುದು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಹೇಳಿಕೆಗಳನ್ನು ಒಳಗೊಂಡಿರುವ 100 ಕ್ಕೂ ಹೆಚ್ಚು ಸಾಕ್ಷಿಗಳಲ್ಲಿ ಮಣ್ಣು ಅಗೆಯುವ ಆಪರೇಟರ್ ಕೂಡ ಸೇರಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಐಪಿಎಸ್ ಅಧಿಕಾರಿ ಕ್ವೈಸರ್ ಖಾಲಿದ್ ವಿರುದ್ಧ ಗಂಭೀರ ಆರೋಪಗಳಿವೆ, ಖಾಲಿದ್ ಮಾಜಿ ಜಿಆರ್‌ಪಿ ಕಮಿಷನರ್ ಮತ್ತು ಅವರ ಅಧಿಕಾರಾವಧಿಯಲ್ಲಿ ಹೋರ್ಡಿಂಗ್‌ಗೆ ಅನುಮೋದನೆ ನೀಡಲಾಯಿತು. ಬಿಎಂಸಿ ಪರವಾನಗಿ ಇನ್ಸ್‌ಪೆಕ್ಟರ್ ಸುನೀಲ್ ದಳವಿ. ಹೋರ್ಡಿಂಗ್ ಬಂದ ಪ್ಲಾಟ್ ಅನ್ನು ಜಿಆರ್‌ಪಿಗೆ ಗುತ್ತಿಗೆ ನೀಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಯಿಲ್ಲದೆ ಇಗೋ ಮೀಡಿಯಾಗೆ ಹೋರ್ಡಿಂಗ್ ನೀಡಲು ಖಾಲಿದ್ ಕಾನೂನಿನ ಲೋಪವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಅಕ್ರಮ ಸಂಗ್ರಹಣೆ ಕುರಿತು ಇಗೋ ಮೀಡಿಯಾ ಸಂಸ್ಥೆಗೆ ದಳವಿ ನೋಟಿಸ್ ಜಾರಿ ಮಾಡಿದರಾದರೂ ನಂತರ ಹಿಂಪಡೆದಿದ್ದಾರೆ. ಭಿಂಡೆಯವರೊಂದಿಗಿನ ಅವರ ನಿರಂತರ ಸಂಪರ್ಕವು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದನ್ನೂ ಓದಿ; ಜೈಲಿನಲ್ಲೆ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ಎಎಪಿಯಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...