Homeಮುಖಪುಟಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: 'ಹುಸಿ ಮಣ್ಣಿನ' ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

ಮುಂಬೈ ಹೋರ್ಡಿಂಗ್ ಕುಸಿತ ಪ್ರಕರಣ: ‘ಹುಸಿ ಮಣ್ಣಿನ’ ಎಚ್ಚರಿಕೆ ನಿರ್ಲಕ್ಷಿಸಿದ್ದ ಮಾಲೀಕರು

- Advertisement -
- Advertisement -

ಮುಂಬೈನ ಘಾಟ್‌ಕೋಪರ್‌ನಲ್ಲಿ 120×120 ಅಡಿ ಹೋರ್ಡಿಂಗ್ ಅಳವಡಿಸಿದ್ದ ಸ್ಥಳದಲ್ಲಿ ಹುಸಿ ಮಣ್ಣು (ಮೃದುವಾದ ಮಣ್ಣು) ಇದೆ ಎಂದು ಅಲ್ಲಿ ಕಾಮಗಾರಿ ಡನೆಸುವಾಗಲೇ ಕೆಲಸಗಾರರು ಎಚ್ಚರಿಸಿದ್ದರು. ಆದರೆ, ಇದನ್ನು ನಿರ್ಲಕ್ಷಿಸಲಾಗಿದೆ. ಹದಿನಾರು ತಿಂಗಳ ನಂತರ, ಬೃಹತ್ ಜಾಹೀರಾತು ಫಲಕವು ಚಂಡಮಾರುತದ ಸಮಯದಲ್ಲಿ ಕುಸಿದುಬಿದ್ದು, 17 ಜನರು ಸಾವನ್ನಪ್ಪಿ, 74 ಮಂದಿ ಗಾಯಗೊಂಡಿದ್ದರು.

ಮುಂಬೈ ನ್ಯಾಯಾಲಯಕ್ಕೆ ಸಲ್ಲಿಸಲಾದ 3,299 ಪುಟಗಳ ಆರೋಪಪಟ್ಟಿಯಲ್ಲಿ, ಮುಂಬೈ ಅಪರಾಧ ವಿಭಾಗದ ವಿಶೇಷ ತನಿಖಾ ತಂಡವು ಸರ್ಕಾರಿ ರೈಲ್ವೇ ಪೊಲೀಸ್ (ಜಿಆರ್‌ಪಿ), ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮತ್ತು ಇಗೋ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿನ ಉನ್ನತ ಅಧಿಕಾರಿಗಳ ಶಾಮೀಲಾಗಿರುವ ಆರೋಪವನ್ನೂ ಎತ್ತಿ ತೋರಿಸಿದೆ.

ಚಾರ್ಜ್‌ಶೀಟ್ ಪ್ರಕಾರ, ಮರವೊಂದು ಬಿದ್ದಾಗ ಬೃಹತ್ ಜಾಹೀರಾತು ಫಲಕವನ್ನು ಅಳವಡಿಸಲು ಜಾಗ ಅಗೆಯುವಾಗ ಕಾಂಗಾರಿ ನಿರ್ವಾಹಕರು ಮೃದುವಾದ ಮಣ್ಣು ಇರುವುದನ್ನು ಗ್ರಹಿಸಿದ್ದರು. ಮಣ್ಣಿನ ಪರಿಶೀಲನೆಯನ್ನು ಶಿಫಾರಸು ಮಾಡಿದರು, ಇದರಿಂದಾಗಿ ಬೃಹತ್ ರಚನೆಯ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಕಟ್ಟಡದ ಯೋಜನೆಗಳನ್ನು ಸರಿಹೊಂದಿಸಬಹುದು, ಈ ಪರಿಶೀಲನೆಗೆ 15 ದಿನಗಳು ಬೇಕಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ.

ಆದರೆ, ಇಗೋ ಮೀಡಿಯಾ ನಿರ್ದೇಶಕ ಭವೇಶ್ ಭಿಂಡೆ ಮತ್ತು ಮಾಜಿ ನಿರ್ದೇಶಕಿ ಜಾಹ್ನವಿ ಮರಾಠೆ ಅವರಿಗೆ ಕಾಯುವ ತಾಳ್ಮೆ ಇರಲಿಲ್ಲ. ಅವರು ಎಚ್ಚರಿಕೆಯನ್ನು ನಿರ್ಲಕ್ಷಿಸಿದರು ಮತ್ತು ಮಣ್ಣು ತಪಾಸಣೆ ಮಾಡದೆ ಮುಂದುವರೆದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಆಪಾದಿತ ನಿರ್ಲಕ್ಷ್ಯವು ಚಂಡಮಾರುತದ ಸಮಯದಲ್ಲಿ ಅಕ್ರಮ ಜಾಹೀರಾತು ಫಲಕ ಕುಸಿಯಲು ಒಂದು ಕಾರಣವೆಂದು ಪರಿಗಣಿಸಬಹುದು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಹೇಳಿಕೆಗಳನ್ನು ಒಳಗೊಂಡಿರುವ 100 ಕ್ಕೂ ಹೆಚ್ಚು ಸಾಕ್ಷಿಗಳಲ್ಲಿ ಮಣ್ಣು ಅಗೆಯುವ ಆಪರೇಟರ್ ಕೂಡ ಸೇರಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಐಪಿಎಸ್ ಅಧಿಕಾರಿ ಕ್ವೈಸರ್ ಖಾಲಿದ್ ವಿರುದ್ಧ ಗಂಭೀರ ಆರೋಪಗಳಿವೆ, ಖಾಲಿದ್ ಮಾಜಿ ಜಿಆರ್‌ಪಿ ಕಮಿಷನರ್ ಮತ್ತು ಅವರ ಅಧಿಕಾರಾವಧಿಯಲ್ಲಿ ಹೋರ್ಡಿಂಗ್‌ಗೆ ಅನುಮೋದನೆ ನೀಡಲಾಯಿತು. ಬಿಎಂಸಿ ಪರವಾನಗಿ ಇನ್ಸ್‌ಪೆಕ್ಟರ್ ಸುನೀಲ್ ದಳವಿ. ಹೋರ್ಡಿಂಗ್ ಬಂದ ಪ್ಲಾಟ್ ಅನ್ನು ಜಿಆರ್‌ಪಿಗೆ ಗುತ್ತಿಗೆ ನೀಡಲಾಗಿದೆ ಮತ್ತು ಟೆಂಡರ್ ಪ್ರಕ್ರಿಯೆಯಿಲ್ಲದೆ ಇಗೋ ಮೀಡಿಯಾಗೆ ಹೋರ್ಡಿಂಗ್ ನೀಡಲು ಖಾಲಿದ್ ಕಾನೂನಿನ ಲೋಪವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಅವರನ್ನು ಅಮಾನತು ಮಾಡಲಾಗಿದೆ. ಮತ್ತೊಂದೆಡೆ ಅಕ್ರಮ ಸಂಗ್ರಹಣೆ ಕುರಿತು ಇಗೋ ಮೀಡಿಯಾ ಸಂಸ್ಥೆಗೆ ದಳವಿ ನೋಟಿಸ್ ಜಾರಿ ಮಾಡಿದರಾದರೂ ನಂತರ ಹಿಂಪಡೆದಿದ್ದಾರೆ. ಭಿಂಡೆಯವರೊಂದಿಗಿನ ಅವರ ನಿರಂತರ ಸಂಪರ್ಕವು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದನ್ನೂ ಓದಿ; ಜೈಲಿನಲ್ಲೆ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಸಂಚು ರೂಪಿಸಿದೆ: ಎಎಪಿಯಿಂದ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...