Homeಮುಖಪುಟಡೆಹ್ರಾಡೂನ್‌: ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆ ಮೇಲೆ ಹಿಂದುತ್ವವಾದಿಗಳ ಗುಂಪಿನಿಂದ ದಾಳಿ

ಡೆಹ್ರಾಡೂನ್‌: ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆ ಮೇಲೆ ಹಿಂದುತ್ವವಾದಿಗಳ ಗುಂಪಿನಿಂದ ದಾಳಿ

- Advertisement -
- Advertisement -

ಡೆಹ್ರಾಡೂನ್‌ನಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯೊಂದಕ್ಕೆ ಹಿಂದುತ್ವವಾದಿಗಳ ಗುಂಪೊಂದು ನುಗ್ಗಿ, ಅಲ್ಲಿದ್ದವರ ಮೇಲೆ ಹಲ್ಲೆ ನಡೆಸಿ ಮೆನೆ ಧ್ವಂಸ ಮಾಡಿರುವ ವಿಡಿಯೋಗಳು ಜಾಲತಾಣದಲ್ಲಿ ವೂರಲ್ ಆಗಿದ್ದು, ಜುಲೈ 14 ರಂದು ಪಾದ್ರಿ ರಾಜೇಶ್ ಭೂಮಿ ಅವರ ನಿವಾಸದಲ್ಲಿ ಭಾನುವಾರ ಬೆಳಗಿನ ಪ್ರಾರ್ಥನಾ ಅವಧಿಯಲ್ಲಿ ದಾಳಿ ನಡೆದಿದೆ.

ವರದಿಗಳ ಪ್ರಕಾರ, ದಾಳಿಕೋರರು, ದೇವೇಂದ್ರ ದೋಭಾಲ್ ಮತ್ತು ಹಿಂದುತ್ವ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಇತರರು ಬಲವಂತವಾಗಿ ಮನೆಗೆ ಪ್ರವೇಶಿಸಿದ್ದಾರೆ. ಅಲ್ಲಿದ್ದವರು ಬಲವಂತದ ಮತಾಂತರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ, ಪ್ರಾರ್ಥನಾ ಕೊಠಡಿ ಮತ್ತು ಮಲಗುವ ಕೋಣೆಯನ್ನು ಧ್ವಂಸಗೊಳಿಸಲು ಮುಂದಾಗಿದ್ದಾರೆ. ಅವರು ಕ್ರಿಶ್ಚಿಯನ್ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಸಹ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಭೆಯಲ್ಲಿದ್ದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರ ಮೇಲೆ ಹಲ್ಲೆ ನಡೆಸಲಾಗಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು ಬೆದರಿಕೆ ಮತ್ತು ಹಿಂಸಾಚಾರಕ್ಕೆ ಒಳಗಾದ ಚಿಕ್ಕ ಮಕ್ಕಳು ಸೇರಿದಂತೆ ಕುಟುಂಬಗಳನ್ನು ಆಘಾತಕ್ಕೀಡು ಮಾಡಿದೆ.

“ಅವರು ಮಕ್ಕಳೊಂದಿಗೂ ಅನುಚಿತವಾಗಿ ವರ್ತಿಸಿದರು. ಅವರು ತಮ್ಮ ತಲೆಯ ಮೇಲೆ ಹೊಡೆದರು ಮತ್ತು ನೀವು ಈ ಪ್ರಾರ್ಥನೆಯಲ್ಲಿ ಏಕೆ ಭಾಗವಹಿಸುತ್ತೀರಿ ಎಂದು ಕೇಳಿದರು. ಭವಿಷ್ಯದಲ್ಲಿ ಭಾನುವಾರದ ಪ್ರಾರ್ಥನೆಯಲ್ಲಿ ಎಂದಿಗೂ ಪಾಲ್ಗೊಳ್ಳಬೇಡಿ ಎಂದು ಅವರು ಅವರಿಗೆ ಹೇಳಿದರು” ಎಂದು ಹರಿದ್ವಾರದಲ್ಲಿ ಉಪಾಹಾರ ಗೃಹವನ್ನು ಹೊಂದಿರುವ ಪಾದ್ರಿ ರಾಜೇಶ್ ಭೂಮಿ ಹೇಳಿದರು.

ನೆಹರು ಕಾಲೋನಿ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತವಾಗಿ ನೋವುಂಟು ಮಾಡುವುದು, ಗಲಭೆ, ಆಸ್ತಿ ನಾಶ, ಅತಿಕ್ರಮಣ ಮತ್ತು ಧಾರ್ಮಿಕ ಭಾವನೆಗಳ ಉದ್ದೇಶಪೂರ್ವಕ ಆಕ್ರೋಶ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯ ತೀವ್ರತೆಯ ಹೊರತಾಗಿಯೂ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎನ್ನಲಾಗಿದೆ.

ನೆಹರು ಕಾಲೋನಿ ಪೊಲೀಸ್ ಠಾಣೆಯ ತನಿಖಾಧಿಕಾರಿ ಸತ್ಬೀರ್ ಸಿಂಗ್ ಮಾತನಾಡಿ, “ಮನೆಯಲ್ಲಿ ಯಾವುದೇ ಧಾರ್ಮಿಕ ಮತಾಂತರ ನಡೆಯುತ್ತಿಲ್ಲ. ಹಿಂದುತ್ವ ಸಂಘಟನೆಗಳ ಜನರು ಕುಟುಂಬ ಸದಸ್ಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಮತ್ತು ಅವರ ಮನೆಯನ್ನು ಧ್ವಂಸ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ಪುರುಷರ ಗುಂಪೊಂದು ಕೋಣೆಯೊಂದರಲ್ಲಿ ವೇದಿಕೆ ಮತ್ತು ಸಂಗೀತ ಉಪಕರಣಗಳನ್ನು ಧ್ವಂಸಗೊಳಿಸುವುದನ್ನು ಮತ್ತು ಹಲ್ಲೆಯಲ್ಲಿ ತೊಡಗಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ.

ಈ ಘಟನೆಯು ಆಕ್ರೋಶವನ್ನು ಹುಟ್ಟುಹಾಕಿದ್ದು, ಧಾರ್ಮಿಕ ಅಸಹಿಷ್ಣುತೆ ಮತ್ತು ಪ್ರದೇಶದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ತನಿಖೆ ನಡೆಯುತ್ತಿದ್ದು, ಶೀಘ್ರವೇ ದೋಷಾರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ. ಈ ಘಟನೆಯನ್ನು ವರದಿ ಮಾಡದಿರುವುದಕ್ಕೆ ನೆಟ್ಟಿಗರು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.

“ಡೆಹ್ರಾಡೂನ್‌ನಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಯ ಮೇಲೆ ಹಿಂದುತ್ವದ ಗುಂಪು ದಾಳಿ ಮಾಡಿದೆ. ಹಿಂದುತ್ವವಾದಿಗಳ ಗುಂಪೊಂದು ಮನೆಗೆ ನುಗ್ಗಿ ಮಹಿಳೆಯರೂ ಸೇರಿದಂತೆ ಒಳಗಿದ್ದವರ ಮೇಲೆ ಹಲ್ಲೆ ನಡೆಸಿ, ಬಲವಂತವಾಗಿ ಮನೆಯೊಳಗೆ ನುಗ್ಗಿ ಕ್ರೈಸ್ತ ಶಿಲುಬೆ, ಪ್ರಾರ್ಥನಾ ಕೊಠಡಿ ಮತ್ತು ಬೆಡ್ ರೂಂ ಧ್ವಂಸ ಮಾಡಿ, ಕ್ರೈಸ್ತ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಎಲ್ಲರನ್ನೂ ಬಲವಂತದ ಆರೋಪ ಮಾಡಿದರು” ಎಂದು ಆಲ್ಟ್‌ ನ್ಯೂಸ್ ಸಂಸ್ಥಾಪಕ ಮಹಮದ್ ಝುಬೇರ್ ಎಕ್ಸ್‌ನಲ್ಲಿ ವಿಡಯೊ ಜೊತೆಗೆ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಆಂಧ್ರಪ್ರದೇಶ: ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...