Homeಕರ್ನಾಟಕರೈತನಿಗೆ ಅವಮಾನ: ಏಳು ದಿನಗಳ ಕಾಲ ಜಿಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

ರೈತನಿಗೆ ಅವಮಾನ: ಏಳು ದಿನಗಳ ಕಾಲ ಜಿಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನಿಸಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಅನ್ನು ಏಳು ದಿನಗಳ ಕಾಲ ಮುಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಇಂದು (ಜುಲೈ 18) ಸದನದಲ್ಲಿ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ ಮಾಡಿರುವ ವಿಚಾರ ಚರ್ಚೆಗೆ ಕಾರಣವಾಯಿತು. ಜಿಟಿ ಮಾಲ್ ಒಳಗೆ ಪಂಚೆ ಉಟ್ಟ ರೈತನನ್ನು ಬಿಡದೆ ಅವಮಾನಿಸಿದ ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್ ಅವರು ಕೋಪಗೊಂಡರು. “ರೈತನಿಗೆ ಅವಮಾನ ಮಾಡಿದವನು ಎಷ್ಟೇ ದೊಡ್ಡವನಿರಲಿ, ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, “ಎಲ್ಲಾ ಮಾಲ್‌ಗಳಿಗೂ ಒಂದೇ ನಿಯಮ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ. ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್‌ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ” ಎಂದು ಒತ್ತಾಯಿಸಿದರು.

ಶಾಸಕ ಪ್ರಕಾಶ್ ಕೋಳಿವಾಡ ಕೂಡ ಎದ್ದು ನಿಂತು, “ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು” ಎಂದು ಆಗ್ರಹಿಸಿದರು.

ಸಚಿವ ಬೈರತಿ ಸುರೇಶ್ ಧ್ವನಿಗೂಡಿಸಿ, “ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡುತ್ತಾರೆ. ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡುತ್ತಾರೆ. ಆದರೆ, ಬೇರೆಯವರಿಗೆ ಆ ನಿಯಮ ಇಲ್ವಾ? ಎಂದು ಪ್ರಶ್ನಿಸಿದರು.

“ಏಳು ದಿನಗಳ ಕಾಲ‌ ಮಾಲ್ ಮುಚ್ಚಿಸುತ್ತೇವೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರದ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದರು.

ಕಾಂಗ್ರೆಸ್ ಸದಸ್ಯ ಅಶೋಕ್ ಪಟ್ಟಣ ಮಾತನಾಡಿ, ರಾಜ್ಯದ ಎಲ್ಲ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ನಿಯಮ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುಸಿದವರಿಗೆ ಪ್ರವೇಶ ಕೊಡಬೇಕು” ಎಂದರು.

ಘಟನೆಯ ಹಿನ್ನೆಲೆ : ಬೆಂಗಳೂರಿನ ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿರುವ ಜಿಟಿ ಮಾಲ್‌ನಲ್ಲಿ ಹಾವೇರಿ ಮೂಲದ ರೈತರೊಬ್ಬರನ್ನು ಅವಮಾನಿಸಿದ ಘಟನೆ ಜುಲೈ 16 ರಂದು ನಡೆದಿದೆ. ವಿಜಯನಗರದ ನಿವಾಸಿ ನಾಗರಾಜ್‌ ತಂದೆ ಹಾವೇರಿಯವರಾಗಿದ್ದು, ಬೆಂಗಳೂರಿಗೆ ಬಂದಾಗ ಸಿನಿಮಾ ತೋರಿಸಲೆಂದು ಜಿಟಿ ಮಾಲ್‌ಗೆ ಕರೆದುಕೊಂಡು ಹೋಗಿದ್ದರು. ಸಿನಿಮಾ ಥಿಯೇಟರ್‌ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ತಪಾಸಣೆ ನಡೆಸುವ ಭದ್ರತಾ ಸಿಬ್ಬಂದಿ, ರೈತ ಪಂಚೆ ಉಟ್ಟಿರುವ ಕಾರಣಕ್ಕೆ ಥಿಯೇಟರ್ ಒಳಗೆ ಬಿಟ್ಟಿರಲಿಲ್ಲ. ಈ ಘಟನೆ ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಆಂಧ್ರಪ್ರದೇಶ: ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...