Homeಫ್ಯಾಕ್ಟ್‌ಚೆಕ್FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಭಾರತೀಯ ಸೇನೆಯ ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರಿಗೆ ಇತ್ತೀಚೆಗೆ ಮರಣೋತ್ತರವಾಗಿ ‘ಕೀರ್ತಿ ಚಕ್ರ’ ಪ್ರಧಾನ ಮಾಡಲಾಗಿದೆ. ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ತಮ್ಮ ಅತ್ತೆಯೊಂದಿಗೆ ಜುಲೈ 5, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನ್ಶುಮನ್ ಸಿಂಗ್ ಅವರ ಪತ್ನಿಯ ಕುರಿತು ಅನೇಕ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅನ್ಶುಮನ್ ಅವರ ಪೋಷಕರು, “ಸ್ಮೃತಿ ಸಿಂಗ್ ನಮ್ಮ ಮಗನ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ. ಸಶಸ್ತ್ರ ಪಡೆಗಳ ಪ್ರಸ್ತುತ ನೀತಿಯ ಅಡಿಯಲ್ಲಿ, ಸೈನಿಕನು ವಿವಾಹಿತನಾಗಿದ್ದರೆ, ಅವರ ಸಂಗಾತಿಯನ್ನು ‘ನೆಕ್ಸ್ಟ್ ಆಫ್ ಕಿನ್’ (NOK) ಎಂದು ಗುರುತಿಸಲಾಗುತ್ತದೆ. ಯೋಧ ಹುತಾತ್ಮರಾದರೆ ಪರಿಹಾರದ ಹಣವನ್ನು ಅವರ ಪತ್ನಿಗೆ ನೀಡಲಾಗುತ್ತದೆ. ಅನ್ಶುಮನ್ ಸಿಂಗ್ ಪೋಷಕರು “ನಮಗೆ ಮಗನೂ ಇಲ್ಲ, ಪರಿಹಾರನೂ ಇಲ್ಲ” ಎಂದು ಬೇಸರ ಹೊರ ಹಾಕಿದ್ದಾರೆ. ಸೇನೆಯ ನಿಯಮಗಳನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಅನ್ಶುಮನ್ ಸಿಂಗ್ ಅವರ ಪತ್ನಿಯ ವಿಡಿಯೋಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆಯೂ ನಡೆದಿದೆ. ಇವೆಲ್ಲದರ ಬಳಿಕ ಈಗ ಹೊಸತೊಂದು ಚರ್ಚೆ ಶುರುವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಹುತಾತ್ಮ ಯೋಧ ಅನ್ಶುಮನ್ ಸಿಂಗ್ ಅವರ ಪತ್ನಿಯದ್ದು ಎಂದು ಹೇಳಲಾಗಿದೆ. “ತಾಯಿ ದೇಶಕ್ಕಾಗಿ ತನ್ನ ಮಗನನ್ನು ಕಳೆದುಕೊಂಡರೆ, ಯೋಧನ ಪತ್ನಿ ಪರಿಹಾರದ ಹಣ ಮತ್ತು ಶೌರ್ಯ ಪದಕ ಪಡೆದುಕೊಂಡು, ಇಲ್ಲಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿದ್ದಾರೆ” ಎಂದು ವಿಡಿಯೋ ಜೊತೆ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವುದು ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಎನ್ನುವುದು ಸುಳ್ಳು.

ಶೌರ್ಯ ಪದಕ ಪಡೆದುಕೊಂಡಾಗಿನ ಸ್ಮೃತಿ ಸಿಂಗ್ ಅವರ ವಿಡಿಯೋ ಮತ್ತು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ಗಳು ಕೆಳಗಡೆಯಿದೆ. ಇಬ್ಬರು ಬೇರೆ ಬೇರೆ ಮಹಿಳೆಯರು ಎಂಬ ವ್ಯತ್ಯಾಸವನ್ನು ಗಮನಿಸಬಹುದು.

ವೈರಲ್ ವಿಡಿಯೋದ ಮೂಲ ತಿಳಿದುಕೊಳ್ಳಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ label_ilma ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ನಮಗೆ ವಿಡಿಯೋ ದೊರೆತಿದೆ. ವಿಡಿಯೋ ಕೆಳಗೆ “@reshsebu setting the perfect summer vibes in our Meadow Kota Doriya Saree” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಮೇಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಲಾದ ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿದ್ದೇವೆ. ಅದು ರೇಷ್ಮಾ ಸೆಬಾಸ್ಟಿಯನ್ ಎಂಬ ಬಳಕೆದಾರರಿಗೆ ಸೇರಿದೆ. ಇವರೂ ಕೂಡ ವೈರಲ್ ವಿಡಿಯೋವನ್ನು ಏಪ್ರಿಲ್ 24 ರಂದು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಸ್ಮೃತಿ ಸಿಂಗ್ ಹೆಸರಿನಲ್ಲಿ ವಿಡಿಯೋ ವೈರಲ್ ಆದ ಬಳಿಕ, ವಿಡಿಯೋದಲ್ಲಿರುವುದು ಸ್ಮೃತಿ ಸಿಂಗ್ ಅಲ್ಲ ಎಂದು ರೇಷ್ಮಾ ಸೆಬಾಸ್ಟಿಯನ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ತನ್ನ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಂಚುವ ಜನರು ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳ ವಿರುದ್ದ ನಾವು ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದೂ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಫ್ಯಾಶನ್ ಬ್ರ್ಯಾಂಡ್‌ ಒಂದರ ಜಾಹೀರಾತಿಗಾಗಿ ರೇಷ್ಮಾ ಸೆಬಾಸ್ಟಿಯನ್ ಎಂಬ ನಟಿ, ರೂಪದರ್ಶಿ ವಿಡಿಯೋ ಮಾಡಿದ್ದರು. ಆಕೆ ಹುತಾತ್ಮ ಯೋಧನ ಪತ್ನಿ ಸ್ಮೃತಿ ಸಿಂಗ್ ರೀತಿ ಕಾಣುತ್ತಿರುವುದರಿಂದ ಜನರು, ಯೋಧನ ಪತ್ನಿ ಸರ್ಕಾರದಿಂದ ಸಿಕ್ಕ ಪರಿಹಾರದ ಹಣ ಬಳಸಿಕೊಂಡು ಬಹಳ ಖುಷಿಯಾಗಿದ್ದಾರೆ ಎಂಬ ದಾಟಿಯಲ್ಲಿ ತಪ್ಪಾದ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...