Homeಮುಖಪುಟಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ...

ಕನ್ವರ್ ಯಾತ್ರೆ ಮಾರ್ಗದ ಹೋಟೆಲ್‌ಗಳು ಮಾಲೀಕ, ಸಿಬ್ಬಂದಿಯ ಹೆಸರು ಪ್ರದರ್ಶಿಸಬೇಕು: ಆಕ್ರೋಶಕ್ಕೆ ಕಾರಣವಾದ ಯುಪಿ ಪೊಲೀಸರ ಆದೇಶ

- Advertisement -
- Advertisement -

ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿ ಬರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಗಳು, ಅವುಗಳ ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಝಪ್ಫರ್‌ನಗರ ಜಿಲ್ಲೆಯ ಅಧಿಕಾರಿಗಳು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಝಪ್ಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಹೇಳಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

“ಆರೋಪ ಪ್ರತ್ಯಾರೋಪಗಳು ಕೇಳಿ ಬರಬಾರದು. ಕಾನೂನು ಸುವ್ಯವಸ್ಥೆ ಹದೆಗೆಡಬಾರದು ಎಂಬ ಕಾರಣಕ್ಕೆ ಈ ಆದೇಶ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ.

2023ರಲ್ಲಿ, ಮುಝಪ್ಫರ್‌ನಗರದ ಆಶ್ರಮದ ಅರ್ಚಕ ಯಶ್ವೀರ್ ಮಹಾರಾಜ್, “ಮುಸ್ಲಿಂ ಹೋಟೆಲ್, ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದ್ದರು” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಜುಲೈ 16ರಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ ಅರ್ಚಕ ಯಶ್ವೀರ್ ಮಹಾರಾಜ್ “ಜೂನ್ 24 ರಂದು, ಮುಝಫ್ಫರ್‌ನಗರ ಡಿಎಂ, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳು ಸ್ವಾಮಿ ಯಶ್ವೀರ್ ಮಹಾರಾಜ್ ಅವರಿಗೆ ಸಭೆಯಲ್ಲಿ ಭರವಸೆ ನೀಡಿದ್ದು, ಎಲ್ಲಾ ಮುಸ್ಲಿಮರು ತಮ್ಮ ಹೋಟೆಲ್‌, ಢಾಬಾ, ಚಹಾ-ಸಿಹಿ ಅಂಗಡಿಗಳು, ಹಣ್ಣು ಮತ್ತು ತರಕಾರಿ ಗಾಡಿಗಳಲ್ಲಿ ತಮ್ಮ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಪ್ರದರ್ಶಿಸಲಿದ್ದಾರೆ ಎಂದು ಹೇಳಿದ್ದಾರೆ. ಹೆಸರು ಪ್ರದರ್ಶಿಸದ ವ್ಯವಹಾರಗಳ ಬಗ್ಗೆ ದಯವಿಟ್ಟು ನಮಗೆ ತಿಳಿಸಿ, ನಾವು ಪೊಲೀಸರಿಗೆ ಮಾಹಿತಿ ನೀಡುತ್ತೇವೆ. ಜೈ ಸನಾತನ ಧರ್ಮ” ಎಂದಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಮುಝಪ್ಫರ್‌ನಗರ ಶಾಸಕ ಹಾಗೂ ಸಚಿವ ಕಪಿಲ್ ದೇವ್ ಅಗರ್‌ವಾಲ್ ಒಂದು ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದರು. “ಯಾತ್ರೆ ಸಾಗುವ ದಾರಿಯಲ್ಲಿ ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಮ್ಮ ಆಕ್ಷೇಪವೇನೂ ಇಲ್ಲವಾದರೂ, ಘರ್ಷಣೆ ತಪ್ಪಿಸುವುದಕ್ಕಾಗಿ ಅವರು ತಮ್ಮ ಅಂಗಡಿಗಳಿಗೆ ಹಿಂದೂ ದೇವರ ಅಥವಾ ದೇವತೆಗಳ ಹೆಸರುಗಳನ್ನು ಇಡಬಾರದು” ಎಂದು ಹೇಳಿದ್ದರು.

ಮುಝಫ್ಫರ್‌ನಗರ ಜಿಲ್ಲಾ ಆಡಳಿತ ಮತ್ತು ಪೊಲೀಸರ ಆದೇಶಕ್ಕೆ ವಿರೋಧ ವ್ಯಕ್ತವಾಗಿದೆ. “ಉತ್ತರಪ್ರದೇಶ ಪೊಲೀಸರ ಈ ಆದೇಶವು ವರ್ಣಭೇದ ನೀತಿ ಹಾಗೂ ನಾಝಿ ಜರ್ಮನಿಯ ಯಹೂದಿ ಉದ್ಯಮಗಳ ಬಹಿಷ್ಕಾರಕ್ಕೆ ಸಮವಾಗಿದೆ” ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಬಣ್ಣಿಸಿದ್ದಾರೆ.

“ಮಾಲೀಕರು ಮತ್ತು ಸಿಬ್ಬಂದಿಯ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಆಹಾರ ಪದಾರ್ಥಗಳನ್ನು ಮಾರುವ ಹೊಟೇಲ್‌ಗಳಿಗೆ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’ ವಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂಥ ಆದೇಶಗಳನ್ನು ತರಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

“ನಿರ್ದಿಷ್ಟ ಧಾರ್ಮಿಕ ಮೆರವಣಿಗೆಯೊಂದು ಸಾಗುವ ದಾರಿಯಲ್ಲಿ ಇರುವ ಎಲ್ಲಾ ಅಂಗಡಿಗಳು, ಹೊಟೇಲ್‌ಗಳು ಮತ್ತು ವಾಹನಗಳು ಕೂಡ ತಮ್ಮ ಮಾಲೀಕರ ಹೆಸರುಗಳನ್ನು ಎದ್ದು ಕಾಣುವಂತೆ ಮತ್ತು ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂಬುದಾಗಿ ಉತ್ತರ ಪ್ರದೇಶದ ಮುಝಫ್ಫರ್‌ನಗರ ಪೊಲೀಸರು ಆದೇಶ ನೀಡಿದ್ದಾರೆ. ಯಾಕೆ? ನಾಝಿ ಕಾಲದ ಜರ್ಮನಿಯಲ್ಲೂ, ಅವರು ನಿರ್ದಿಷ್ಟ ಅಂಗಡಿಗಳು ಮತ್ತು ಮನೆಗಳ ಮೇಲೆ ಗುರುತುಗಳನ್ನು ಮಾಡುತ್ತಿದ್ದರು” ಎಂದು ಖ್ಯಾತ ಚಿತ್ರಕತೆ ಲೇಖಕ ಹಾಗೂ ಹಾಡು ರಚನೆಕಾರ ಜಾವೇದ್ ಅಖ್ತರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಾರೆ.

ವಾರ್ಷಿಕ ಕನ್ವರ್ ತೀರ್ಥಯಾತ್ರೆಯ ಸಮಯದಲ್ಲಿ, ಶಿವನ ಭಕ್ತರು ಹರಿದ್ವಾರದ ಬಳಿ ಗಂಗಾ ನದಿಯಿಂದ ನೀರು ಸಂಗ್ರಹಿಸಿ ಅದನ್ನು ತಮ್ಮ ಊರುಗಳಿಗೆ ಕೊಂಡೊಯ್ಯುತ್ತಾರೆ.

ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಮಧ್ಯ ಪ್ರದೇಶದ ವಿವಿಧ ಭಾಗಗಳಿಂದ ಉತ್ತರಾಖಂಡಕ್ಕೆ ಆಗಮಿಸುವ ಕನ್ವರಿಗಳು ಗಂಗಾ ನದಿಯಿಂದ ನೀರು ಸಂಗ್ರಹಿಸಿ ಹಿಂದಿರುಗುತ್ತಾರೆ.

ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ : ರೈತರ ದಿಲ್ಲಿ ಚಲೋ ತಡೆದಿದ್ದ ಪೊಲೀಸ್ ಅಧಿಕಾರಿಗಳನ್ನು ಶೌರ್ಯ ಪದಕಕ್ಕೆ ಶಿಫಾರಸು ಮಾಡಿದ ಹರಿಯಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...