Homeಮುಖಪುಟಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

ಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

- Advertisement -
- Advertisement -

ಉದ್ಯಮಿ ಮುಕೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಧನಾತ್ಮಕ ಪ್ರಚಾರ ನಡೆಸಲು ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ (ಯೂಟ್ಯೂಬರ್) ಕಾವ್ಯ ಕರ್ನಾಟಕ್ ತಿಳಿಸಿದ್ದಾರೆ.

“ಅನಂತ್ ಅಂಬಾನಿಯ ಅದ್ದೂರಿ ಮದುವೆ ಭಾರತದ ಆರ್ಥಿಕತೆಯ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಅಥವಾ ಅರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಪ್ರಚಾರ ಪಡಿಸುವುದು ನನ್ನ ಕೆಲಸವಾಗಿತ್ತು. ಅಂಬಾನಿ ಕುಟುಂಬ ಕೊಟ್ಟ ಆಫರ್ ನನ್ನ ಸಾಮಾನ್ಯ ದರ ಮೂರು ಲಕ್ಷಕ್ಕಿಂತ ಕೊಂಚ ಹೆಚ್ಚೇ ಇತ್ತು. ನನ್ನ ಪೋಷಕರು ಕೂಡ ಒಪ್ಪಂದ ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೂ ನಾನು ತಿರಸ್ಕರಿಸಿದೆ” ಎಂದಿರುವ ಕಾವ್ಯ, ಅದಕ್ಕೆ ನಾಲ್ಕು ಕಾರಣಗಳನ್ನು ವಿವರಿಸಿದ್ದಾರೆ.

ಕಾರಣಗಳು ಹೀಗಿದೆ..

1. ವೈವಿದ್ಯತೆ ಮತ್ತು ವೈಯಕ್ತಿಕ ಬ್ರ್ಯಾಂಡ್ : ಎಲ್ಲರೂ ಹೇಳುವ ಅದೇ ವಿಷಯದ ಬಗ್ಗೆ ಮತ್ತೆ ಹೇಳುವುದು ನನಗೆ ಇಷ್ಟವಿರಲಿಲ್ಲ. ವೈವಿಧ್ಯತೆ ಮತ್ತು ಸ್ವಂತಿಕೆಯ ಮೇಲೆ ಬೆಳೆಯುವ ನನ್ನ ವಿಷಯದ ವಿಶಿಷ್ಟತೆ ಮತ್ತು ಮೌಲ್ಯವನ್ನು ಕಾಪಾಡಿಕೊಳ್ಳಲು ನಾನು ಬಯಸುತ್ತೇನೆ. ಅಂಬಾನಿಯವರ ವಿವಾಹದಂತಹ ಅತಿಯಾಗಿ ಪ್ರಚಾರಗೊಂಡ ವಿಷಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ನನ್ನ ಬ್ರ್ಯಾಂಡ್‌ನ ವಿಶಿಷ್ಟತೆಯನ್ನು ದುರ್ಬಲಗೊಳಿಸುತ್ತದೆ.

2. ಪ್ರೇಕ್ಷಕರ ನಂಬಿಕೆ : ಜಿಯೋ ಇಂಟರ್ನೆಟ್ ಶುಲ್ಕವನ್ನು ಹೆಚ್ಚಿಸಿರುವ ಈ ಸಮಯದಲ್ಲಿ, ಅಂಬಾನಿಯಂತಹ ಕಾರ್ಪೊರೇಟ್ ದೈತ್ಯರನ್ನು ಪ್ರಚಾರ ಮಾಡುವುದು ಪ್ರಾಮಾಣಿಕತೆಯಲ್ಲ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ. ನನ್ನ ಪ್ರೇಕ್ಷಕರು ವಿವೇಚನಾಶೀಲರಾಗಿದ್ದಾರೆ. ಅವರು ಪಾವತಿಸಿದ ಪ್ರಚಾರಗಳು ಮತ್ತು ನಿಜವಾದ ವಿಷಯದ ನಡುವೆ ವ್ಯತ್ಯಾಸವನ್ನು ಅರಿತವರು. ಹೀಗಾಗಿ, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

3. ನೈತಿಕ ಕಾಳಜಿಗಳು : ಜಾತಿ, ವರ್ಗ, ಲಿಂಗ ಮತ್ತು ಧರ್ಮದ ಕಾರಣದಿಂದಾಗಿ ಮದುವೆಗಳು ಹೆಚ್ಚಾಗಿ ರದ್ದುಗೊಳ್ಳುವ ದೇಶದಲ್ಲಿ, ಈ ಮಾನದಂಡಗಳಿಗೆ ಅನುಗುಣವಾಗಿ ನಡೆಯುವ ಉನ್ನತ ಮಟ್ಟದ ವಿವಾಹವನ್ನು ಪ್ರಚಾರ ಮಾಡುವುದು ನನ್ನ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಶಿಕ್ಷಣ ಮತ್ತು ಇತರ ಉತ್ತಮ ವಿಷಯಗಳನ್ನು ತಲುಪಿಸುವ ನಾನು ಮದುವೆಯ ಕುರಿತು ಪ್ರಚಾರ ಮಾಡುವುದು ತಪ್ಪುದಾರಿಗೆಳೆಯಬಹುದು. ಇದು ಫ್ಯಾಷನ್ ಅಥವಾ ಜೀವನಶೈಲಿಯ ಪ್ರಭಾವಿಗಳಿಗೆ ಹೆಚ್ಚು ಸೂಕ್ತವಾಗಿದೆ. ನಾನು ಈ ಹಿಂದೆ ಅಂಬಾನಿಯೊಂದಿಗೆ ಕೆಲಸ ಮಾಡುತ್ತಿದ್ದಾಗ, ವಂತರಾವನ್ನು ಪ್ರಚಾರ ಮಾಡುತ್ತಿದ್ದೆ. ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಹೇಳುವುದು ವಾಸ್ತವಿಕವಾಗಿ ಸರಿಯಲ್ಲ.

4. ವೈಯಕ್ತಿಕ ಸಮಗ್ರತೆ : ₹3.6 ಲಕ್ಷದ ವ್ಯವಹಾರವು ಲಾಭದಾಯಕವಾಗಿದೆ. ಆದರೂ, ನನ್ನ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೀರ್ಘಾವಧಿಯ ಪ್ರಯೋಜನಗಳು ಇಂತಹ ಅಲ್ಪಾವಧಿಯ ಆರ್ಥಿಕ ಲಾಭವನ್ನು ಮೀರಿದ್ದಾಗಿದೆ. ಸಮಗ್ರತೆಯು ನಿಷ್ಠಾವಂತ ಅನುಸರಣೆಯನ್ನು ನಿರ್ಮಿಸುತ್ತದೆ, ಅದು ಅಮೂಲ್ಯವಾಗಿದೆ.

ಈ ಮೇಲಿನ ನಾಲ್ಕು ಕಾರಣಗಳನ್ನು ಕಾವ್ಯ ಅವರು ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದಕ್ಕೆ ನೀಡಿದ್ದಾರೆ. ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದು ಸವಾಲಿನ ಸಂಗತಿಯಾಗಿದೆ. ಅದೃಷ್ಟವಶಾತ್, ನಾನು ನನ್ನ ವೃತ್ತಿಜೀವನದಲ್ಲಿ ಈ ಬಗ್ಗೆ ಆಯ್ಕೆಗಳನ್ನು ಮಾಡಬಹುದಾದ ಹಂತದಲ್ಲಿದ್ದೇನೆ. ಪ್ರತಿಯೊಬ್ಬರೂ ಇಲ್ಲ ಎಂದು ಹೇಳಬಾರದು. ಅದು ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ನಿರ್ಧಾರವಾಗಿದೆ ಎಂದಿದ್ದಾರೆ.

ಲಿಂಕ್ಡ್‌ ಇನ್‌ನಲ್ಲಿ ಕಾವ್ಯ ಹಾಕಿರುವ ಪೋಸ್ಟ್‌ಗೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ನಿರ್ಧಾರ ಎಂದಿದ್ದಾರೆ. ಕಾವ್ಯ ಅವರ ಪೋಸ್ಟ್‌ನಿಂದ ಅಂಬಾನಿ ಕುಟುಂಬ ಮದುವೆಯ ಬಗ್ಗೆ ಧನಾತ್ಮಕ ಪ್ರಚಾರ ಮಾಡಲೂ ಕೂಡ ಹಣ ಪಾವತಿಸಿದೆ ಎಂಬ ವಿಷಯವೊಂದು ಬಯಲಾಗಿದೆ.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ : ಕ್ಷಮಾದಾನ ರದ್ದು ಪ್ರಶ್ನಿಸಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....