Homeಮುಖಪುಟಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

ಅಂಬಾನಿ ಮದುವೆಯ ₹3.6 ಲಕ್ಷದ ಒಪ್ಪಂದ ಏಕೆ ತಿರಸ್ಕರಿಸಿದೆ? ನಾಲ್ಕು ಕಾರಣ ಕೊಟ್ಟ ಯೂಟ್ಯೂಬರ್

- Advertisement -
- Advertisement -

ಉದ್ಯಮಿ ಮುಕೇಶ್ ಅಂಬಾನಿಯ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಧನಾತ್ಮಕ ಪ್ರಚಾರ ನಡೆಸಲು ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ (ಯೂಟ್ಯೂಬರ್) ಕಾವ್ಯ ಕರ್ನಾಟಕ್ ತಿಳಿಸಿದ್ದಾರೆ.

“ಅನಂತ್ ಅಂಬಾನಿಯ ಅದ್ದೂರಿ ಮದುವೆ ಭಾರತದ ಆರ್ಥಿಕತೆಯ ಮೇಲೆ ಹೇಗೆ ಧನಾತ್ಮಕ ಪರಿಣಾಮ ಬೀರುತ್ತದೆ ಅಥವಾ ಅರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಪ್ರಚಾರ ಪಡಿಸುವುದು ನನ್ನ ಕೆಲಸವಾಗಿತ್ತು. ಅಂಬಾನಿ ಕುಟುಂಬ ಕೊಟ್ಟ ಆಫರ್ ನನ್ನ ಸಾಮಾನ್ಯ ದರ ಮೂರು ಲಕ್ಷಕ್ಕಿಂತ ಕೊಂಚ ಹೆಚ್ಚೇ ಇತ್ತು. ನನ್ನ ಪೋಷಕರು ಕೂಡ ಒಪ್ಪಂದ ಸ್ವೀಕರಿಸುವಂತೆ ಒತ್ತಾಯಿಸಿದ್ದರು. ಆದರೂ ನಾನು ತಿರಸ್ಕರಿಸಿದೆ” ಎಂದಿರುವ ಕಾವ್ಯ, ಅದಕ್ಕೆ ನಾಲ್ಕು ಕಾರಣಗಳನ್ನು ವಿವರಿಸಿದ್ದಾರೆ.

ಕಾರಣಗಳು ಹೀಗಿದೆ..

1. ವೈವಿದ್ಯತೆ ಮತ್ತು ವೈಯಕ್ತಿಕ ಬ್ರ್ಯಾಂಡ್ : ಎಲ್ಲರೂ ಹೇಳುವ ಅದೇ ವಿಷಯದ ಬಗ್ಗೆ ಮತ್ತೆ ಹೇಳುವುದು ನನಗೆ ಇಷ್ಟವಿರಲಿಲ್ಲ. ವೈವಿಧ್ಯತೆ ಮತ್ತು ಸ್ವಂತಿಕೆಯ ಮೇಲೆ ಬೆಳೆಯುವ ನನ್ನ ವಿಷಯದ ವಿಶಿಷ್ಟತೆ ಮತ್ತು ಮೌಲ್ಯವನ್ನು ಕಾಪಾಡಿಕೊಳ್ಳಲು ನಾನು ಬಯಸುತ್ತೇನೆ. ಅಂಬಾನಿಯವರ ವಿವಾಹದಂತಹ ಅತಿಯಾಗಿ ಪ್ರಚಾರಗೊಂಡ ವಿಷಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ನನ್ನ ಬ್ರ್ಯಾಂಡ್‌ನ ವಿಶಿಷ್ಟತೆಯನ್ನು ದುರ್ಬಲಗೊಳಿಸುತ್ತದೆ.

2. ಪ್ರೇಕ್ಷಕರ ನಂಬಿಕೆ : ಜಿಯೋ ಇಂಟರ್ನೆಟ್ ಶುಲ್ಕವನ್ನು ಹೆಚ್ಚಿಸಿರುವ ಈ ಸಮಯದಲ್ಲಿ, ಅಂಬಾನಿಯಂತಹ ಕಾರ್ಪೊರೇಟ್ ದೈತ್ಯರನ್ನು ಪ್ರಚಾರ ಮಾಡುವುದು ಪ್ರಾಮಾಣಿಕತೆಯಲ್ಲ. ಇದು ಜನರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ. ನನ್ನ ಪ್ರೇಕ್ಷಕರು ವಿವೇಚನಾಶೀಲರಾಗಿದ್ದಾರೆ. ಅವರು ಪಾವತಿಸಿದ ಪ್ರಚಾರಗಳು ಮತ್ತು ನಿಜವಾದ ವಿಷಯದ ನಡುವೆ ವ್ಯತ್ಯಾಸವನ್ನು ಅರಿತವರು. ಹೀಗಾಗಿ, ಅವರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

3. ನೈತಿಕ ಕಾಳಜಿಗಳು : ಜಾತಿ, ವರ್ಗ, ಲಿಂಗ ಮತ್ತು ಧರ್ಮದ ಕಾರಣದಿಂದಾಗಿ ಮದುವೆಗಳು ಹೆಚ್ಚಾಗಿ ರದ್ದುಗೊಳ್ಳುವ ದೇಶದಲ್ಲಿ, ಈ ಮಾನದಂಡಗಳಿಗೆ ಅನುಗುಣವಾಗಿ ನಡೆಯುವ ಉನ್ನತ ಮಟ್ಟದ ವಿವಾಹವನ್ನು ಪ್ರಚಾರ ಮಾಡುವುದು ನನ್ನ ಮೌಲ್ಯಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಶಿಕ್ಷಣ ಮತ್ತು ಇತರ ಉತ್ತಮ ವಿಷಯಗಳನ್ನು ತಲುಪಿಸುವ ನಾನು ಮದುವೆಯ ಕುರಿತು ಪ್ರಚಾರ ಮಾಡುವುದು ತಪ್ಪುದಾರಿಗೆಳೆಯಬಹುದು. ಇದು ಫ್ಯಾಷನ್ ಅಥವಾ ಜೀವನಶೈಲಿಯ ಪ್ರಭಾವಿಗಳಿಗೆ ಹೆಚ್ಚು ಸೂಕ್ತವಾಗಿದೆ. ನಾನು ಈ ಹಿಂದೆ ಅಂಬಾನಿಯೊಂದಿಗೆ ಕೆಲಸ ಮಾಡುತ್ತಿದ್ದಾಗ, ವಂತರಾವನ್ನು ಪ್ರಚಾರ ಮಾಡುತ್ತಿದ್ದೆ. ಮದುವೆಯು ಭಾರತೀಯ ಆರ್ಥಿಕತೆಯ ಮೇಲೆ ಧನಾತ್ಮಕ ಪರಿಣಾಮ ಬೀರಬಹುದು ಎಂದು ಹೇಳುವುದು ವಾಸ್ತವಿಕವಾಗಿ ಸರಿಯಲ್ಲ.

4. ವೈಯಕ್ತಿಕ ಸಮಗ್ರತೆ : ₹3.6 ಲಕ್ಷದ ವ್ಯವಹಾರವು ಲಾಭದಾಯಕವಾಗಿದೆ. ಆದರೂ, ನನ್ನ ಸಮಗ್ರತೆಯನ್ನು ಕಾಪಾಡಿಕೊಳ್ಳುವ ದೀರ್ಘಾವಧಿಯ ಪ್ರಯೋಜನಗಳು ಇಂತಹ ಅಲ್ಪಾವಧಿಯ ಆರ್ಥಿಕ ಲಾಭವನ್ನು ಮೀರಿದ್ದಾಗಿದೆ. ಸಮಗ್ರತೆಯು ನಿಷ್ಠಾವಂತ ಅನುಸರಣೆಯನ್ನು ನಿರ್ಮಿಸುತ್ತದೆ, ಅದು ಅಮೂಲ್ಯವಾಗಿದೆ.

ಈ ಮೇಲಿನ ನಾಲ್ಕು ಕಾರಣಗಳನ್ನು ಕಾವ್ಯ ಅವರು ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದಕ್ಕೆ ನೀಡಿದ್ದಾರೆ. ದೊಡ್ಡ ಮೊತ್ತದ ಒಪ್ಪಂದ ತಿರಸ್ಕರಿಸುವುದು ಸವಾಲಿನ ಸಂಗತಿಯಾಗಿದೆ. ಅದೃಷ್ಟವಶಾತ್, ನಾನು ನನ್ನ ವೃತ್ತಿಜೀವನದಲ್ಲಿ ಈ ಬಗ್ಗೆ ಆಯ್ಕೆಗಳನ್ನು ಮಾಡಬಹುದಾದ ಹಂತದಲ್ಲಿದ್ದೇನೆ. ಪ್ರತಿಯೊಬ್ಬರೂ ಇಲ್ಲ ಎಂದು ಹೇಳಬಾರದು. ಅದು ವೈಯಕ್ತಿಕ ಸಂದರ್ಭಗಳ ಆಧಾರದ ಮೇಲೆ ನಿರ್ಧಾರವಾಗಿದೆ ಎಂದಿದ್ದಾರೆ.

ಲಿಂಕ್ಡ್‌ ಇನ್‌ನಲ್ಲಿ ಕಾವ್ಯ ಹಾಕಿರುವ ಪೋಸ್ಟ್‌ಗೆ ಹಲವಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಳ್ಳೆಯ ನಿರ್ಧಾರ ಎಂದಿದ್ದಾರೆ. ಕಾವ್ಯ ಅವರ ಪೋಸ್ಟ್‌ನಿಂದ ಅಂಬಾನಿ ಕುಟುಂಬ ಮದುವೆಯ ಬಗ್ಗೆ ಧನಾತ್ಮಕ ಪ್ರಚಾರ ಮಾಡಲೂ ಕೂಡ ಹಣ ಪಾವತಿಸಿದೆ ಎಂಬ ವಿಷಯವೊಂದು ಬಯಲಾಗಿದೆ.

ಇದನ್ನೂ ಓದಿ : ಬಿಲ್ಕಿಸ್ ಬಾನು ಪ್ರಕರಣ : ಕ್ಷಮಾದಾನ ರದ್ದು ಪ್ರಶ್ನಿಸಿದ್ದ ಅಪರಾಧಿಗಳ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...