Homeಫ್ಯಾಕ್ಟ್‌ಚೆಕ್FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು...

FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿ ಯುವಕನೋರ್ವ ಹಿಂದೂಗಳ ವಿವಾಹ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕ ಎಕ್ಸ್ ಬಳಕೆದಾರರು ಈ ವಿಡಿಯೋ ಪೋಸ್ಟ್ ಮಾಡಿ ‘ಫುಡ್ ಜಿಹಾದ್’ ಎಂದೆಲ್ಲ ಬರೆದುಕೊಂಡಿದ್ದಾರೆ.

ಸದಾ ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹರಡುವ ‘ಮಿಸ್ಟರ್ ಸಿನ್ಹಾ’ ಎಂಬ ಎಕ್ಸ್ ಬಳಕೆದಾರ ವಿಡಿಯೋ ಪೋಸ್ಟ್ ಮಾಡಿ ಅದನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರಿಗೆ ಟ್ಯಾಗ್ ಮಾಡಿದ್ದು, “ನೀವಿದನ್ನು ತಿನ್ನುವಿರೇ? ಮೊದಲು ನೀವು ತಿಂದು ಬಳಿಕ ನಮಗೆ ತಿನ್ನಲು ಒತ್ತಾಯಿಸಿ ಎಂದು ಬರೆದುಕೊಂಡಿದ್ದಾರೆ. ವಿನೋದ್ ಎಂಬಾತ ‘ಸ್ಟ್ರಿಂಗ್’ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, “ತೆಲಂಗಾಣದ ವಾರಂಗಲ್ ನಲ್ಲಿ ಮುಸ್ಲಿಮರು ನಡೆಸುತ್ತಿರುವ ಹೊಟೇಲ್‌ನಲ್ಲಿ ಆಹಾರದ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿರುವುದು ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋವನ್ನು ಮೊದಲು ಸೂಕ್ಷ್ಮವಾಗಿ ಗಮನಿಸಿದ್ದೇವೆ. ವಿಡಿಯೋದಲ್ಲಿ ಮೊದಲು ಯುವಕ ಪಾತ್ರೆಗೆ ಮೂತ್ರ ಮಾಡಿದಂತೆ ಕಂಡರೂ, ಬಳಿಕ ಆತ ಬಾಟಲಿಯೊಂದರಿಂದ ಪಾತ್ರೆಗೆ ಏನೋ ಸುರಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ, ಯುವಕ ಪಾತ್ರೆಗೆ ಮೂತ್ರ ಮಾಡಿದ್ದಾನೆ ಎಂಬ ಆರೋಪ ಸುಳ್ಳು ಎಂಬುವುದು ನಮಗೆ ಗೊತ್ತಾಗಿದೆ.

ಈ ಬಗ್ಗೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಈ ವಿಡಿಯೋ 2022ರಲ್ಲೂ ಸುಳ್ಳು ಸಂದೇಶದೊಂದಿಗೆ ವೈರಲ್ ಆಗಿತ್ತು ಎಂದು ತಿಳಿದು ಬಂದಿದೆ.

ಡಿಸೆಂಬರ್ 2022ರಲ್ಲಿ ಝೀ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸುದ್ದಿ ವೆಬ್‌ಸೈಟ್ “बंदे ने शादी के लिए बन रहे खाने में किया कुछ ऐसा, देखकर आएगी घिन” (ಯುವಕ ಗುಲಾಬ್ ಜಾಮೂನ್ ಪಾತ್ರೆಗೆ ಮೂತ್ರ ಮಾಡಿದ್ದಾನೆ) ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಪ್ರಸ್ತುತ ಆ ಸುದ್ದಿಯನ್ನು ಡಿಲಿಟ್ ಮಾಡಲಾಗಿದೆ.

ಅಸಲಿಗೆ @ashiq.billota ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮಾಷೆಗಾಗಿ ಈ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದು ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆದರೆ, ಈಗ ಆ ಇನ್‌ಸ್ಟಾಗ್ರಾಂ ಪೇಜ್‌ನಲ್ಲೂ ವಿಡಿಯೋ ಇಲ್ಲ, ಡಿಲಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳು ನಮಗೆ ಲಭ್ಯವಾಗಿಲ್ಲ. ವೈರಲ್ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಂ ಪೇಜ್‌ ಮತ್ತು ಅದನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್‌ನಲ್ಲೂ ಈಗ ವಿಡಿಯೋ ಇಲ್ಲ.

ಎಲ್ಲಾ ವಿಷಯಗಳಿಗೂ ಕೋಮು ಬಣ್ಣ ಬಳಿಯುವ ಕೆಲವೊಂದಿಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ನಮ್ಮಡೆಯಲ್ಲಿದ್ದಾರೆ. ಮುಖ್ಯವಾಗಿ ವಿಡಿಯೋಗಳನ್ನು ತಿರುಚಿ ಸುಳ್ಳು ಮಾಹಿತಿಯೊಂದಿಗೆ ಮುಸ್ಲಿಮರ ತಲೆಗೆ ಕಟ್ಟುವುದು ಕೆಲವರ ವಾಡಿಕೆಯಾಗಿದೆ. ಅಂಥವುಗಳಲ್ಲಿ ಈ ವಿಡಿಯೋ ಕೂಡ ಒಂದು.

ವೈರಲ್ ವಿಡಿಯೋ ಎಲ್ಲಿಯದ್ದು ಮತ್ತು ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾದ ಯುವಕ ಮುಸ್ಲಿಂ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಎಕ್ಸ್ ಬಳಕೆದಾರರು ಕೋಮುದ್ವೇಷ ಹರಡುವ ಸಲುವಾಗಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರಕರಣ ದಾಖಲು 

ತಮಾಷೆಯ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಮಿಸ್ಟರ್ ಸಿನ್ಹಾ ಮತ್ತು ವಿನೋದ್ ಎಂಬ ಎಕ್ಸ್ ಬಳಕೆದಾರರ ವಿರುದ್ದ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಬಲ ಪಂಥೀಯ ಸಾಮಾಜಿಕ ಜಾಲತಾಣದ ಪ್ರಭಾವಿ ಮಿಸ್ಟರ್ ಸಿನ್ಹಾ ಸದಾ ಸುಳ್ಳು, ಕೋಮುದ್ವೇಷಪೂರಿತ ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿಯನ್ನು ಪಡೆದಿದ್ದಾನೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...