Homeಫ್ಯಾಕ್ಟ್‌ಚೆಕ್FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು...

FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿ ಯುವಕನೋರ್ವ ಹಿಂದೂಗಳ ವಿವಾಹ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ” ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕ ಎಕ್ಸ್ ಬಳಕೆದಾರರು ಈ ವಿಡಿಯೋ ಪೋಸ್ಟ್ ಮಾಡಿ ‘ಫುಡ್ ಜಿಹಾದ್’ ಎಂದೆಲ್ಲ ಬರೆದುಕೊಂಡಿದ್ದಾರೆ.

ಸದಾ ಕೋಮುದ್ವೇಷದ ಸುಳ್ಳು ಸುದ್ದಿಗಳನ್ನು ಹರಡುವ ‘ಮಿಸ್ಟರ್ ಸಿನ್ಹಾ’ ಎಂಬ ಎಕ್ಸ್ ಬಳಕೆದಾರ ವಿಡಿಯೋ ಪೋಸ್ಟ್ ಮಾಡಿ ಅದನ್ನು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರಿಗೆ ಟ್ಯಾಗ್ ಮಾಡಿದ್ದು, “ನೀವಿದನ್ನು ತಿನ್ನುವಿರೇ? ಮೊದಲು ನೀವು ತಿಂದು ಬಳಿಕ ನಮಗೆ ತಿನ್ನಲು ಒತ್ತಾಯಿಸಿ ಎಂದು ಬರೆದುಕೊಂಡಿದ್ದಾರೆ. ವಿನೋದ್ ಎಂಬಾತ ‘ಸ್ಟ್ರಿಂಗ್’ ಎಂಬ ಎಕ್ಸ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ, “ತೆಲಂಗಾಣದ ವಾರಂಗಲ್ ನಲ್ಲಿ ಮುಸ್ಲಿಮರು ನಡೆಸುತ್ತಿರುವ ಹೊಟೇಲ್‌ನಲ್ಲಿ ಆಹಾರದ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿರುವುದು ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋವನ್ನು ಮೊದಲು ಸೂಕ್ಷ್ಮವಾಗಿ ಗಮನಿಸಿದ್ದೇವೆ. ವಿಡಿಯೋದಲ್ಲಿ ಮೊದಲು ಯುವಕ ಪಾತ್ರೆಗೆ ಮೂತ್ರ ಮಾಡಿದಂತೆ ಕಂಡರೂ, ಬಳಿಕ ಆತ ಬಾಟಲಿಯೊಂದರಿಂದ ಪಾತ್ರೆಗೆ ಏನೋ ಸುರಿಯುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಹಾಗಾಗಿ, ಯುವಕ ಪಾತ್ರೆಗೆ ಮೂತ್ರ ಮಾಡಿದ್ದಾನೆ ಎಂಬ ಆರೋಪ ಸುಳ್ಳು ಎಂಬುವುದು ನಮಗೆ ಗೊತ್ತಾಗಿದೆ.

ಈ ಬಗ್ಗೆ ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಈ ವಿಡಿಯೋ 2022ರಲ್ಲೂ ಸುಳ್ಳು ಸಂದೇಶದೊಂದಿಗೆ ವೈರಲ್ ಆಗಿತ್ತು ಎಂದು ತಿಳಿದು ಬಂದಿದೆ.

ಡಿಸೆಂಬರ್ 2022ರಲ್ಲಿ ಝೀ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸುದ್ದಿ ವೆಬ್‌ಸೈಟ್ “बंदे ने शादी के लिए बन रहे खाने में किया कुछ ऐसा, देखकर आएगी घिन” (ಯುವಕ ಗುಲಾಬ್ ಜಾಮೂನ್ ಪಾತ್ರೆಗೆ ಮೂತ್ರ ಮಾಡಿದ್ದಾನೆ) ಎಂಬ ಶೀರ್ಷಿಕೆಯಲ್ಲಿ ವಿಡಿಯೋ ಕುರಿತು ಸುದ್ದಿ ಪ್ರಕಟಿಸಿತ್ತು. ಪ್ರಸ್ತುತ ಆ ಸುದ್ದಿಯನ್ನು ಡಿಲಿಟ್ ಮಾಡಲಾಗಿದೆ.

ಅಸಲಿಗೆ @ashiq.billota ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ತಮಾಷೆಗಾಗಿ ಈ ವಿಡಿಯೋ ಪೋಸ್ಟ್ ಮಾಡಲಾಗಿತ್ತು. ಅದು ಬಳಿಕ ಎಲ್ಲೆಡೆ ವೈರಲ್ ಆಗಿದೆ. ಆದರೆ, ಈಗ ಆ ಇನ್‌ಸ್ಟಾಗ್ರಾಂ ಪೇಜ್‌ನಲ್ಲೂ ವಿಡಿಯೋ ಇಲ್ಲ, ಡಿಲಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಮುಸ್ಲಿಂ ಯುವಕ ಹಿಂದೂಗಳ ಮದುವೆ ಸಮಾರಂಭದ ಸಿಹಿ ತಿಂಡಿಯ ಪಾತ್ರೆಗೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳು ನಮಗೆ ಲಭ್ಯವಾಗಿಲ್ಲ. ವೈರಲ್ ವಿಡಿಯೋವನ್ನು ಮೊದಲು ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಂ ಪೇಜ್‌ ಮತ್ತು ಅದನ್ನು ಆಧಾರವಾಗಿಟ್ಟುಕೊಂಡು ಸುದ್ದಿ ಪ್ರಕಟಿಸಿದ್ದ ಝೀ ನ್ಯೂಸ್‌ನಲ್ಲೂ ಈಗ ವಿಡಿಯೋ ಇಲ್ಲ.

ಎಲ್ಲಾ ವಿಷಯಗಳಿಗೂ ಕೋಮು ಬಣ್ಣ ಬಳಿಯುವ ಕೆಲವೊಂದಿಷ್ಟು ಸಾಮಾಜಿಕ ಜಾಲತಾಣ ಬಳಕೆದಾರರು ನಮ್ಮಡೆಯಲ್ಲಿದ್ದಾರೆ. ಮುಖ್ಯವಾಗಿ ವಿಡಿಯೋಗಳನ್ನು ತಿರುಚಿ ಸುಳ್ಳು ಮಾಹಿತಿಯೊಂದಿಗೆ ಮುಸ್ಲಿಮರ ತಲೆಗೆ ಕಟ್ಟುವುದು ಕೆಲವರ ವಾಡಿಕೆಯಾಗಿದೆ. ಅಂಥವುಗಳಲ್ಲಿ ಈ ವಿಡಿಯೋ ಕೂಡ ಒಂದು.

ವೈರಲ್ ವಿಡಿಯೋ ಎಲ್ಲಿಯದ್ದು ಮತ್ತು ಮೂತ್ರ ಮಾಡಿದ್ದಾನೆ ಎಂದು ಆರೋಪಿಸಲಾದ ಯುವಕ ಮುಸ್ಲಿಂ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ, ಎಕ್ಸ್ ಬಳಕೆದಾರರು ಕೋಮುದ್ವೇಷ ಹರಡುವ ಸಲುವಾಗಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಇಬ್ಬರ ವಿರುದ್ದ ಪ್ರಕರಣ ದಾಖಲು 

ತಮಾಷೆಯ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಮಿಸ್ಟರ್ ಸಿನ್ಹಾ ಮತ್ತು ವಿನೋದ್ ಎಂಬ ಎಕ್ಸ್ ಬಳಕೆದಾರರ ವಿರುದ್ದ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ಬಲ ಪಂಥೀಯ ಸಾಮಾಜಿಕ ಜಾಲತಾಣದ ಪ್ರಭಾವಿ ಮಿಸ್ಟರ್ ಸಿನ್ಹಾ ಸದಾ ಸುಳ್ಳು, ಕೋಮುದ್ವೇಷಪೂರಿತ ಸುದ್ದಿಗಳನ್ನು ಹರಡುವುದರಲ್ಲಿ ಕುಖ್ಯಾತಿಯನ್ನು ಪಡೆದಿದ್ದಾನೆ.

ಇದನ್ನೂ ಓದಿ : FACT CHECK : 1951ರಲ್ಲಿ ಅಸ್ಸಾಂನಲ್ಲಿ ಶೇ.14ರಷ್ಟು ಮಾತ್ರ ಮುಸ್ಲಿಮರಿದ್ದರು ಎಂಬ ಸಿಎಂ ಶರ್ಮಾ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....