Homeಕರ್ನಾಟಕಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣ ಹಿಂಪಡೆಯಲು ಆಗ್ರಹ

- Advertisement -
- Advertisement -

ದಲಿತರಿಗೆ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅನ್ಯಾಯ ಸರಿಪಡಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಒಕ್ಕೂಟದ ಪ್ರಮುಖರು “ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು ಮತ್ತು ಇತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿ ಸರ್ವಾಧಿಕಾರ ಸ್ಥಾಪಿಸಲು ಹೊರಟಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ಸೋಲಿಸದೆ ದಲಿತರಿಗೆ ಬೇರೆ ದಾರಿಯೇ ಇರಲಿಲ್ಲ. ಹಾಗಾಗಿ, ರಾಜ್ಯ, ರಾಷ್ಟ್ರದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲು ದಲಿತರು ಅನಿವಾರ್ಯವಾಗಿ ಕಾಂಗ್ರೆಸ್‌ ಪಕ್ಷದೊಂದಿಗೆ ನಿಲ್ಲಬೇಕಾಯಿತು. ಬಹಿರಂಗವಾಗಿಯೇ ದಲಿತ ಸಂಘಟನೆಗಳು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ಸರ್ಕಾರ ರಚಿಸುವಲ್ಲಿ ಸಫಲವಾಯಿತು ಎಂದು ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್, ದಲಿತರ ಕೆಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಹೆಜ್ಜೆ ಇಟ್ಟಿತಾದರೂ, ಕೆಲವೇ ದಿನಗಳಲ್ಲಿ ಭ್ರಮನಿರಸನ ಉಂಟು ಮಾಡಿದೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಂಡು ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಒಕ್ಕೂಟ ಅಸಮಾಧಾನ ಹೊರ ಹಾಕಿದೆ.

ಬ್ಯಾಕ್‌ಲಾಗ್ ನೇಮಕಾತಿಯಿಂದ ಹಿಡಿದು, ಇತ್ತೀಚಿನ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವವರೆಗೂ ಸರ್ಕಾರ ವಂಚನೆ ಮುಂದುವರೆಸಿದೆ. ಬ್ಯಾಕ್‌ಲಾಗ್ ಹುದ್ದೆ ತುಂಬುತ್ತಿಲ್ಲ, ದಲಿತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅಡಚಣೆ ಮಾಡುತ್ತಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ತರುತ್ತಿಲ್ಲ. ಈ ಕುರಿತು ದಲಿತ ಜನಸಮೂಹದಲ್ಲಿ ತೀವ್ರ ಅಸಮಾಧಾನ ಮೂಡಿದ್ದು, ಕಾಂಗ್ರೆಸ್ ವಿರುದ್ದ ತಿರುಗಿ ಬೀಳುವ ಹಂತಕ್ಕೆ ಬಂದು ಮುಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡೆಯನ್ನು ನಾವು ಸಹಿಸುವುದಿಲ್ಲ. ದಲಿತರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಬೃಹತ್ ಹೋರಾಟ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಎಚ್ಚರಿಸಿದೆ.

ಒಕ್ಕೂಟದ ಹಕ್ಕೋತ್ತಾಯಗಳು

  1. ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು.

2. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಯಾವುದೇ ಕಾರಣಕ್ಕೂ ಇತರೆ ಯೋಜನೆಗಳಿಗೆ ಬಳಸಬಾರದು. ಈಗಾಗಲೇ ಗ್ಯಾರಂಟಿ ಯೋಜನೆಗೆ ಬಳಸಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು. ಕಳೆದ ಸಾಲಿನ 11 ಸಾವಿರ ಕೋಟಿ ರೂ. ಮತ್ತು ಈ ಸಾಲಿನ 14 ಸಾವಿರ ಕೋಟಿ ರೂ. ಹಣವನ್ನು ಈ ಕೂಡಲೇ ಹಿಂಪಡೆಯಬೇಕು.

3. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಯೋಜನೆಗಳ ಜಾರಿಗೆ ಕೂಡಲೇ ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸಬೇಕು.

4. ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ ರೋಸ್ಟರ್ ಪದ್ದತಿಗನುಗುಣವಾಗಿ ಮೀಸಲಾತಿ ನೀಡಬೇಕು

5. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕೆ ವಿಧಿಸಿರುವ ಆದಾಯ ಹಾಗೂ ಅಂಕಗಳ ಮಿತಿಯನ್ನು ರದ್ದುಗೊಳಿಸಿ, ಈ ಹಿಂದೆ ನಿಗದಿಪಡಿಸಿದಂತೆ ಮರು ಜಾರಿಗೊಳಿಸಬೇಕು.

6. ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡುತ್ತಿರುವ ಎಲ್ಲಾ ಅನುದಾನಗಳ ನಿರ್ವಹಣೆ ಮತ್ತು ಪರಿವೀಕ್ಷಣೆ ಮಾಡಲು ಸ್ವತಂತ್ರ ಕಾವಲು ಸಮಿತಿ ನೇಮಿಸಬೇಕು ಹಾಗೂ ಅದಕ್ಕೆ ನ್ಯಾಯಾಂಗ ಅಧಿಕಾರ ನೀಡಬೇಕು.

7. ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಚಿಸುವ ದಲಿತ ವಿದ್ಯಾರ್ಥಿಗಳಿಗೆ ‘ಪ್ರಬುದ್ದ ಯೋಜನೆ’ ಮೂಲಕ ನೀಡುತ್ತಿರುವ ನಿರ್ವಹಣ ವೆಚ್ಚದ ಮಿತಿಯನ್ನು ಸಡಿಲಗೊಳಿಸಿ, ವಾಸ್ತವ ವೆಚ್ಚವನ್ನು ನೀಡಬೇಕು. ಈ ಹಿಂದಿನಂತೆ ಎರಡು ಕೋಟಿಗಳವರೆಗೆ ನೀಡುತ್ತಿರುವ ಅನುದಾನವನ್ನು ಮುಂದುವರೆಸಬೇಕು.

8. ವಿದೇಶದಲ್ಲಿ ಪಿಹೆಚ್‌ಡಿ ಪದವಿ ಪಡೆಯಲು ನೀಡುತ್ತಿದ್ದ ಧನ ಸಹಾಯ ರದ್ದುಗೊಳಿಸಿರುವುದನ್ನು ಕೂಡಲೇ ಹಿಂಪಡೆದು, ಹಿಂದಿ ಪದ್ದತಿಯನ್ನು ಮುಂದುವರೆಸಬೇಕು.

9. ವಸತಿ ಶಾಲೆಗಳ ಪ್ರವೇಶಕ್ಕೆ ನಿಗದಿಪಡಿಸಿರುವ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಿ ಸಾಮಾಜಿಕ ಹಾಗೂ ಅರ್ಥಿಕ ಮಾನದಂಡದ ಮೇಲೆ ಪ್ರವೇಶಾತಿ ನೀಡಬೇಕು.

ಇದನ್ನೂ ಓದಿ : ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...