Homeಮುಖಪುಟಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

ಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಆಡಳಿತವು, ಕನ್ವರ್ ಯಾತ್ರಾ 2024 ಮಾರ್ಗದಲ್ಲಿನ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಪುರಾತನ ನಗರದಲ್ಲಿರುವ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಇದೇ ರೀತಿಯ ಆದೇಶ ನೀಡಿದ ನಂತರ ಈ ನಿರ್ದೇಶನ ಬಂದಿದೆ.

ಕಾರ್ಪೊರೇಷನ್ ಆದೇಶವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ  ₹2,000 ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ ₹5,000 ದಂಡ ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ (ಜುಲೈ 20) ತಿಳಿಸಿದ್ದಾರೆ. ಈ ಆದೇಶವು ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ ಮತ್ತು ಮುಸ್ಲಿಂ ಅಂಗಡಿ ಮಾಲೀಕರನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಮೇಯರ್ ಹೇಳಿದ್ದಾರೆ.

ಸೆಪ್ಟೆಂಬರ್ 26, 2002 ರಂದು ಅಂಗಡಿಯವರು ತಮ್ಮ ಹೆಸರನ್ನು ಪ್ರದರ್ಶಿಸಲು ಉಜ್ಜಯಿನಿಯ ಮೇಯರ್-ಇನ್-ಕೌನ್ಸಿಲ್ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ, ನಂತರ, ಕಾರ್ಪೊರೇಷನ್ ಹೌಸ್ ಅದನ್ನು ಆಕ್ಷೇಪಣೆಗಳು ಮತ್ತು ಔಪಚಾರಿಕತೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ತತ್ವಾಲ್ ಹೇಳಿದರು.

“ಎಲ್ಲಾ ವಿಧಿವಿಧಾನಗಳು ಈಗಾಗಲೇ ಪೂರ್ಣಗೊಂಡಿವೆ. ಆರಂಭದಲ್ಲಿ ನಾಮಫಲಕಗಳು ಒಂದೇ ಗಾತ್ರ ಮತ್ತು ಬಣ್ಣದಲ್ಲಿ ಇರಬೇಕಾಗಿದ್ದರಿಂದ ಅನುಷ್ಠಾನವು ವಿಳಂಬವಾಯಿತು. ಈಗ ನಾವು ಈ ನಿಯಮಗಳನ್ನು ಸಡಿಲಿಸಿದ್ದೇವೆ. ಅಂಗಡಿಕಾರರ ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರದರ್ಶಿಸಿದರೆ ಸಾಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕ್ರಮವು ‘ಮಧ್ಯಪ್ರದೇಶ ಶಾಪ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ ಅಥವಾ ಗುಮಾಸ್ತಾ ಪರವಾನಗಿಗೆ’ಮಸಂಬಂಧಿಸಿದೆ ಎನ್ನಲಾಗಿದ್ದು, ಇದು ಗ್ರಾಹಕರ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು.

“ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರವಾಗಿದೆ. ಜನರು ಧಾರ್ಮಿಕ ಆಸ್ಥೆ (ನಂಬಿಕೆ)ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅವರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಪರಿಹಾರ ಪಡೆಯಲು ಅವರು ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದು ಸಹಾಯ ಮಾಡುತ್ತದೆ” ಎಂದು ಮೇಯರ್ ಹೇಳಿದರು.

ಕುಂಭಮೇಳ

ಉಜ್ಜಯಿನಿಯು 2028 ರಲ್ಲಿ ಸಿಂಹಸ್ಥ (ಕುಂಭ) ಮೇಳವನ್ನು ಆಯೋಜಿಸಲಿದೆ, ಇದು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹತ್ವದ ಧಾರ್ಮಿಕ ಜಾತ್ರೆಯಾಗಿದೆ. ಈ ಕ್ರಮವು ಉತ್ತರ ಪ್ರದೇಶದಲ್ಲಿ ಇತ್ತೀಚಿನ ನಿರ್ದೇಶನವನ್ನು ಪ್ರತಿಬಿಂಬಿಸುತ್ತದೆ. ಅಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ತಿನಿಸುಗಳ ಮಾರಾಟಗಾರರ ಮಾಲೀಕರ ಹೆಸರನ್ನು ಪ್ರದರ್ಶಿಸಲು ಕೇಳಲಾಯಿತು.

ಉತ್ತರ ಪ್ರದೇಶ ಸರ್ಕಾರವು ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಈ ಆದೇಶವನ್ನು ವಿಸ್ತರಿಸಿದೆ. ಆದರೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ರಾಜ್ಯದಲ್ಲಿ ಈಗಾಗಲೇ ಇದೇ ರೀತಿಯ ಸೂಚನೆಗಳು ಜಾರಿಯಲ್ಲಿವೆ ಎಂದು ಹೇಳಿದರು. ಈ ಆದೇಶವು ವಿರೋಧ ಪಕ್ಷಗಳು ಮತ್ತು ಆಡಳಿತ ಮೈತ್ರಿಕೂಟದ ಕೆಲವು ಸದಸ್ಯರಿಂದ ಟೀಕೆಗಳನ್ನು ಎದುರಿಸಿದೆ, ಇದು ಮುಸ್ಲಿಂ ವ್ಯಾಪಾರಿಗಳನ್ನು ಗುರಿಯಾಗಿಸುತ್ತದೆ ಎಂದು ವಾದಿಸುತ್ತಾರೆ.

ಇದನ್ನೂ ಓದಿ; ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...