Homeಮುಖಪುಟಜಮೀನು ವಿವಾದ: ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!

ಜಮೀನು ವಿವಾದ: ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!

- Advertisement -
- Advertisement -

ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ರೇವಾ ಜಿಲ್ಲೆಯ ಹಿನೌಟಾದಲ್ಲಿ ಎರಡು ಕುಟುಂಬಗಳ ನಡುವೆ ಜಮೀನು ಜಗಳ ನಡೆಯುತ್ತಿತ್ತು. ಒಂದು ಕಡೆಯ ಗುಂಪು ಜಮೀನಿನ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದರು. ಅದನ್ನು ಇನ್ನೊಂದು ಕಡೆಯ ಗುಂಪು ವಿರೋಧಿಸುತ್ತಿತ್ತು ಎಂದು ತಿಳಿದು ಬಂದಿದೆ.

ಆದರೂ, ಕಾಮಗಾರಿ ಮುಂದುವರೆಯುತ್ತಿತ್ತು. ಇದನ್ನು ವಿರೋಧಿಸಿ ಇನ್ನೊಂದು ಗುಂಪಿನ ಮಹಿಳೆಯರು ಜಮೀನಿನಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದರು. ಆಗ ಕಾಮಗಾರಿ ನಡೆಸುತ್ತಿದ್ದ ಗುಂಪಿನ ಆದೇಶದಂತೆ ಟಿಪ್ಪರ್‌ ಚಾಲಕ, ಕಲ್ಲು ಮಣ್ಣನ್ನು ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಮೇಲೆ ಸುರಿದು, ಜೀವಂತ ಸಮಾಧಿಗೆ ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮಮತಾ ಪಾಂಡೆ ಹಾಗೂ ಆಶಾ ಪಾಂಡೆ ಎಂಬ ಇಬ್ಬರು ಮಹಿಳೆಯರು ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವುದನ್ನು ವಿರೋಧಿಸಿದ್ದು, ಅವರು ಜೀವಂತ ಸಮಾಧಿ ಮಾಡಲು ಯತ್ನಿಸಲಾಗಿದೆ. ಒಬ್ಬರು ಮಹಿಳೆಯ ಸೊಂಟದವರೆಗೆ ಹಾಗೂ ಇನ್ನೊಬ್ಬರ ಕುತ್ತಿಗೆವರೆಗೆ ಮಣ್ಣು ಹಾಕಲಾಗಿತ್ತು. ಇದರಿಂದ ಒಬ್ಬರು ಪ್ರಜ್ಞೆ ತಪ್ಪಿದ್ದರು ಎಂದು ವರದಿಯಾಗಿದೆ.

ಟಿಪ್ಪರ್ ಚಾಲಕ ವಿಪಿನ್ ಪಾಂಡೆ ಎಂಬಾತನನ್ನು ಬಂಧಿಸಲಾಗಿದ್ದು, ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಪೊಲೀಸರು ಹುಡುಕುತ್ತಿದ್ದು, ಎಲ್ಲಾ ಆರೋಪಿಗಳು ಸಂತ್ರಸ್ತರ ಸಂಬಂಧಿಕರು ಎಂದು ಹೇಳಿದ್ದಾರೆ.

ಘಟನೆಯ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದ್ದು, ಟಿಪ್ಪರ್‌ನ ಹಿಂಭಾಗದಲ್ಲಿ ಮಣ್ಣಿನಡಿಯಿಂದ ಮಹಿಳೆಯರನ್ನು ರಕ್ಷಿಸುತ್ತಿರುವ ದೃಶ್ಯ ಅದರಲ್ಲಿದೆ.

ಆರೋಪಿಗಳು ಮೊದಲು ಮಹಿಳೆಯರ ಜೊತೆ ವಾಗ್ವಾದ ನಡೆಸಿ, ಹಲ್ಲೆ ಮಾಡಿದ್ದು ಬಳಿಕ ಟಿಪ್ಪರ್‌ನಿಂದ ಜಲ್ಲಿ, ಕಲ್ಲು ತುಂಬಿದ ಮಣ್ಣು ಸುರಿದಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೇವಾ ಜಿಲ್ಲೆಯ ಎಸ್ಪಿ ವಿವೇಕ್ ಸಿಂಗ್ “ಇದು ಎರಡು ಕಡೆಯ ಕುಟುಂಬಗಳ ಜಮೀನು ವಿವಾದ. ಒಂದು ಕಡೆಯವರು ರಸ್ತೆ ಮಾಡಲು ಬಯಸಿದ್ದರು. ಅದಕ್ಕಾಗಿ ಕಲ್ಲು ಮಣ್ಣು ತುಂಬಿಸುತ್ತಿದ್ದರು. ಆ ಸಂದರ್ಭ ಪ್ರತಿಭಟಿಸುತ್ತಿದ್ದ ಇನ್ನೊಂದು ಕಡೆಯ ಮಹಿಳೆಯರ ಮೇಲೆ ಕಲ್ಲು ಮಣ್ಣಿನ ರಾಶಿಯನ್ನು ಸುರಿದಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 110 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯರ ಪೈಕಿ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಬಿಜೆಪಿಯ ಜಂಗಲ್ ರಾಜ್, ಮಧ್ಯ ಪ್ರದೇಶದ ರೇವಾದಿಂದ ಮಾನವೀಯತೆ ತಲೆ ತಗ್ಗಿಸುವ ವಿಡಿಯೋವೊಂದು ಹೊರಬಿದ್ದಿದೆ. ಇಲ್ಲಿ ಜಮೀನು ವಿವಾದದಿಂದಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಪುಂಡರು ಯತ್ನಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಮಹಿಳಾ ವಿರೋಧಿ ಚಿಂತನೆಗೆ ಈ ವಿಡಿಯೋ ಮತ್ತೊಂದು ಸಾಕ್ಷಿಯಾಗಿದೆ.ಮಹಿಳಾ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ನರೇಂದ್ರ ಮೋದಿಯವರ ಎಲ್ಲಾ ಹೇಳಿಕೆಗಳು ಪೊಳ್ಳು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ, ಆದರೆ ನರೇಂದ್ರ ಮೋದಿಯವರು ಮೌನವಾಗಿದ್ದಾರೆ” ಎಂದಿದೆ.

ಇದನ್ನೂ ಓದಿ : ಕನ್ವರ್ ಯಾತ್ರೆ | ಯುಪಿ ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ : ಇಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...