Homeಮುಖಪುಟಜಮೀನು ವಿವಾದ: ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!

ಜಮೀನು ವಿವಾದ: ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!

- Advertisement -
- Advertisement -

ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದವರ ವಿರುದ್ಧ ಪ್ರತಿಭಟಿಸಿದ ಇಬ್ಬರು ಮಹಿಳೆಯರ ಮೇಲೆ ಟಿಪ್ಪರ್ ಮೂಲಕ ಮಣ್ಣು ಸುರಿದು ಜೀವಂತ ಸಮಾಧಿಗೆ ಯತ್ನಿಸಿದ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.

ರೇವಾ ಜಿಲ್ಲೆಯ ಹಿನೌಟಾದಲ್ಲಿ ಎರಡು ಕುಟುಂಬಗಳ ನಡುವೆ ಜಮೀನು ಜಗಳ ನಡೆಯುತ್ತಿತ್ತು. ಒಂದು ಕಡೆಯ ಗುಂಪು ಜಮೀನಿನ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದರು. ಅದನ್ನು ಇನ್ನೊಂದು ಕಡೆಯ ಗುಂಪು ವಿರೋಧಿಸುತ್ತಿತ್ತು ಎಂದು ತಿಳಿದು ಬಂದಿದೆ.

ಆದರೂ, ಕಾಮಗಾರಿ ಮುಂದುವರೆಯುತ್ತಿತ್ತು. ಇದನ್ನು ವಿರೋಧಿಸಿ ಇನ್ನೊಂದು ಗುಂಪಿನ ಮಹಿಳೆಯರು ಜಮೀನಿನಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದರು. ಆಗ ಕಾಮಗಾರಿ ನಡೆಸುತ್ತಿದ್ದ ಗುಂಪಿನ ಆದೇಶದಂತೆ ಟಿಪ್ಪರ್‌ ಚಾಲಕ, ಕಲ್ಲು ಮಣ್ಣನ್ನು ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯರ ಮೇಲೆ ಸುರಿದು, ಜೀವಂತ ಸಮಾಧಿಗೆ ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಮಮತಾ ಪಾಂಡೆ ಹಾಗೂ ಆಶಾ ಪಾಂಡೆ ಎಂಬ ಇಬ್ಬರು ಮಹಿಳೆಯರು ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಾಣ ಮಾಡುವುದನ್ನು ವಿರೋಧಿಸಿದ್ದು, ಅವರು ಜೀವಂತ ಸಮಾಧಿ ಮಾಡಲು ಯತ್ನಿಸಲಾಗಿದೆ. ಒಬ್ಬರು ಮಹಿಳೆಯ ಸೊಂಟದವರೆಗೆ ಹಾಗೂ ಇನ್ನೊಬ್ಬರ ಕುತ್ತಿಗೆವರೆಗೆ ಮಣ್ಣು ಹಾಕಲಾಗಿತ್ತು. ಇದರಿಂದ ಒಬ್ಬರು ಪ್ರಜ್ಞೆ ತಪ್ಪಿದ್ದರು ಎಂದು ವರದಿಯಾಗಿದೆ.

ಟಿಪ್ಪರ್ ಚಾಲಕ ವಿಪಿನ್ ಪಾಂಡೆ ಎಂಬಾತನನ್ನು ಬಂಧಿಸಲಾಗಿದ್ದು, ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇನ್ನಿಬ್ಬರನ್ನು ಪೊಲೀಸರು ಹುಡುಕುತ್ತಿದ್ದು, ಎಲ್ಲಾ ಆರೋಪಿಗಳು ಸಂತ್ರಸ್ತರ ಸಂಬಂಧಿಕರು ಎಂದು ಹೇಳಿದ್ದಾರೆ.

ಘಟನೆಯ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿದ್ದು, ಟಿಪ್ಪರ್‌ನ ಹಿಂಭಾಗದಲ್ಲಿ ಮಣ್ಣಿನಡಿಯಿಂದ ಮಹಿಳೆಯರನ್ನು ರಕ್ಷಿಸುತ್ತಿರುವ ದೃಶ್ಯ ಅದರಲ್ಲಿದೆ.

ಆರೋಪಿಗಳು ಮೊದಲು ಮಹಿಳೆಯರ ಜೊತೆ ವಾಗ್ವಾದ ನಡೆಸಿ, ಹಲ್ಲೆ ಮಾಡಿದ್ದು ಬಳಿಕ ಟಿಪ್ಪರ್‌ನಿಂದ ಜಲ್ಲಿ, ಕಲ್ಲು ತುಂಬಿದ ಮಣ್ಣು ಸುರಿದಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೇವಾ ಜಿಲ್ಲೆಯ ಎಸ್ಪಿ ವಿವೇಕ್ ಸಿಂಗ್ “ಇದು ಎರಡು ಕಡೆಯ ಕುಟುಂಬಗಳ ಜಮೀನು ವಿವಾದ. ಒಂದು ಕಡೆಯವರು ರಸ್ತೆ ಮಾಡಲು ಬಯಸಿದ್ದರು. ಅದಕ್ಕಾಗಿ ಕಲ್ಲು ಮಣ್ಣು ತುಂಬಿಸುತ್ತಿದ್ದರು. ಆ ಸಂದರ್ಭ ಪ್ರತಿಭಟಿಸುತ್ತಿದ್ದ ಇನ್ನೊಂದು ಕಡೆಯ ಮಹಿಳೆಯರ ಮೇಲೆ ಕಲ್ಲು ಮಣ್ಣಿನ ರಾಶಿಯನ್ನು ಸುರಿದಿದ್ದಾರೆ. ಬಿಎನ್‌ಎಸ್‌ನ ಸೆಕ್ಷನ್ 110 ರ ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯರ ಪೈಕಿ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಬಿಜೆಪಿ ವಿರುದ್ದ ಕಾಂಗ್ರೆಸ್ ಕಿಡಿ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಬಿಜೆಪಿಯ ಜಂಗಲ್ ರಾಜ್, ಮಧ್ಯ ಪ್ರದೇಶದ ರೇವಾದಿಂದ ಮಾನವೀಯತೆ ತಲೆ ತಗ್ಗಿಸುವ ವಿಡಿಯೋವೊಂದು ಹೊರಬಿದ್ದಿದೆ. ಇಲ್ಲಿ ಜಮೀನು ವಿವಾದದಿಂದಾಗಿ ಇಬ್ಬರು ಮಹಿಳೆಯರನ್ನು ಜೀವಂತ ಸಮಾಧಿ ಮಾಡಲು ಪುಂಡರು ಯತ್ನಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಮತ್ತು ಮಹಿಳಾ ವಿರೋಧಿ ಚಿಂತನೆಗೆ ಈ ವಿಡಿಯೋ ಮತ್ತೊಂದು ಸಾಕ್ಷಿಯಾಗಿದೆ.ಮಹಿಳಾ ಸುರಕ್ಷತೆ ಮತ್ತು ಸಬಲೀಕರಣಕ್ಕೆ ಸಂಬಂಧಿಸಿದ ನರೇಂದ್ರ ಮೋದಿಯವರ ಎಲ್ಲಾ ಹೇಳಿಕೆಗಳು ಪೊಳ್ಳು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ. ದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ, ಆದರೆ ನರೇಂದ್ರ ಮೋದಿಯವರು ಮೌನವಾಗಿದ್ದಾರೆ” ಎಂದಿದೆ.

ಇದನ್ನೂ ಓದಿ : ಕನ್ವರ್ ಯಾತ್ರೆ | ಯುಪಿ ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ : ಇಂದು ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...