Homeಕರ್ನಾಟಕಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ : ಸಚಿವ ಕೃಷ್ಣ ಬೈರೇಗೌಡ

ಕುಮ್ಕಿ ಜಮೀನು ಮಂಜೂರಾತಿ ಸಾಧ್ಯವಿಲ್ಲ, ಬಡವರ ಮನೆಗಳ ತೆರವೂ ಇಲ್ಲ : ಸಚಿವ ಕೃಷ್ಣ ಬೈರೇಗೌಡ

- Advertisement -
- Advertisement -

ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನಸಭಾ ಅಧಿವೇಶನದಲ್ಲಿ ಸೋಮವಾರ ಬಿಜೆಪಿ ನಾಯಕ ವಿ. ಸುನೀಲ್‌ ಕುಮಾರ್‌ ಕುಮ್ಕಿ ಜಮೀನಿನ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಶ್ನೆಯೊಂದನ್ನು ಮುಂದಿಟ್ಟರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕುಮ್ಕಿ ಜಮೀನಿನ ಸಮಸ್ಯೆ ಉಲ್ಬಣಿಸಿದ್ದು, ಸ್ವಾಧೀನದಲ್ಲಿರುವ ಕುಮ್ಕಿ ಜಮೀನಿನನ್ನು ಕಲಂ ನಮೂನೆ 53-57 ಹಾಗು 93 ಸಿಸಿ ಪ್ರಕಾರ ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ಸಚಿವರು “ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ. ಆಗುತ್ತೆ, ನೋಡೋಣ ಎಂದು ಜನರಿಗೆ ತಪ್ಪು ಮಾಹಿತಿ ಅಥವಾ ತಪ್ಪು ನಿರೀಕ್ಷೆಗಳನ್ನು ನೀಡಲು ನಾವು ಸಿದ್ದರಿಲ್ಲ. ಕಹಿಯಾದರೂ ಸತ್ಯವನ್ನು ಹೇಳಲೇಬೇಕು. ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ ಎಂಬುದೇ ಸತ್ಯ” ಎಂದರು.

“ಕುಮ್ಕಿ ಜನೀನನ್ನು ಮಂಜೂರು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಸಂಪುಟ ಉಪ ಸಮಿತಿ ಸಭೆ ರಚನೆ ಮಾಡಿತ್ತು. ಈ ಸಭೆ ದೀರ್ಘ ಚರ್ಚೆ ನಡೆಸಿದ ನಂತರ ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ ಎಂದು ಈ ವಿಚಾರವನ್ನೇ ಕೈಬಿಟ್ಟಿತ್ತು” ಎಂಬ ಮಾಹಿತಿಯನ್ನು ಸಚಿವರು ಸದನಕ್ಕೆ ತಿಳಿಸಿದರು.

ಮುಂದುವರೆದು, “ಕೆಎಲ್‌ಆರ್‌ ಆಕ್ಟ್‌ ರೂಲ್‌ 79ರ ಪ್ರಕಾರ ಕುಮ್ಕಿ ಪ್ರದೇಶವನ್ನು ಉಪಯೋಗ ಮಾಡಿಕೊಳ್ಳುವ ಹಕ್ಕನ್ನು ಜನರಿಗೆ ನೀಡಲಾಗಿದೆ. ಜಮೀನಿಗೆ ಹೊಂದಿಕೊಂಡಿರುವ ಕಾಡಿನ ಭಾಗದ ಉಪ ಉತ್ಪನ್ನಗಳನ್ನು ಬಳಕೆ ಮಾಡಿಕೊಳ್ಳುವ ಹಕ್ಕನ್ನು ನೀಡಲಾಗಿದೆ. ಆದರೆ, ಆ ಜಾಗಗಳನ್ನು ಮಂಜೂರು ಮಾಡಲಾಗುವುದಿಲ್ಲ ಎಂಬ ಅಂಶ ಕಾನೂನಿನಲ್ಲಿ ಸ್ಪಷ್ಟವಾಗಿದೆ. ಹೀಗಾಗಿ ಕುಮ್ಕಿ ಜಮೀನನ್ನು ಕನಿಷ್ಠ ಭೋಗ್ಯಕ್ಕೆ ನೀಡುವುದಾದರೂ ಸಾಧ್ಯವಿದೆಯಾ? ಎಂಬ ಬಗ್ಗೆ ಗಂಭೀರವಾಗಿ ಪರಿಶೀಲಿಸಲಾಗುವುದು” ಎಂದರು.

ಬಡವರ ಮನೆ ತೆರವು ಸಾಧ್ಯವಿಲ್ಲ

ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆ ಸಾಧ್ಯವಿಲ್ಲ ಎಂಬ ವಿಚಾರವನ್ನೂ ಸಚಿವ ಕೃಷ್ಣ ಬೈರೇಗೌಡ ಅವರು ಸದನದ ಗಮನಕ್ಕೆ ತಂದರು.

ಈ ಮಾತನಾಡಿದ ಸಚಿವರು, “ಕುಮ್ಕಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡಿರುವ ಬಡವರ ಬಗ್ಗೆ ವಿಶೇಷ ದೃಷ್ಟಿಯಿಂದ ನೋಡುವ ಅಗತ್ಯವಿದೆ. ಗೋಮಾಳ ಜಾಗದಲ್ಲಿ 94 ಸಿಸಿ ಪ್ರಕಾರ ಮಂಜೂರು ಮಾಡದಿದ್ದರೆ, ಖಂಡಿತ ನನ್ನ ಬಳಿ ಬನ್ನಿ ಗ್ರ್ಯಾಂಟ್‌ ಮಾಡಿ ಕೊಡುತ್ತೇನೆ. ಆದರೆ, ಕುಮ್ಕಿ ಜಮೀನನ್ನು ಮಂಜೂರು ಮಾಡುವುದು ಸಾಧ್ಯವಿಲ್ಲ. ಇದೇ ಸಂದರ್ಭದಲ್ಲಿ ಬಡವರ ಮನೆಯನ್ನೂ ತೆರವುಗೊಳಿಸಲಾಗದು. ಹಾಗಾಗಿ ಕಾನೂನಾತ್ಮಕವಾಗಿ ಸಕಾರಾತ್ಮಕವಾಗಿ ಮಾಡಬಹುದಾ? ಎಂದು ಪ್ರಾಮಾಣಿಕವಾಗಿ ವಿಚಾರ ಮಾಡುವೆ ಎಂದರು.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ : ಶಾಸಕ ಬಿ.ನಾಗೇಂದ್ರ 14 ದಿನ ನ್ಯಾಯಾಂಗ ಬಂಧನಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...