Homeಫ್ಯಾಕ್ಟ್‌ಚೆಕ್FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಜುಲೈ 5,2024ರಂದು ಭೇಟಿಯಾಗಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

“ಲೋಕೋ ಪೈಲಟ್‌ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ ಪೈಲಟ್‌ಗಳು ಇಲ್ಲ ಎಂದು ರೈಲ್ವೆ ದೃಢಪಡಿಸಿದೆ. ಎಲ್ಲರೂ ವೇಷ ಹಾಕಿ ಬಂದವರು. ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಭಾರತವನ್ನು ಯಾವ ರೀತಿಯಲ್ಲಾದರೂ ನಾಶಪಡಿಸುವುದು ರಾಹುಲ್ ಗಾಂಧಿಯ ಉದ್ದೇಶ ಎಂಬುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.


ಹಾಗಾದರೆ, ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಕಲಿ ಲೋಕೋ ಪೈಲಟ್‌ಗಳ ಜೊತೆಯಾ? ಎಂಬುವುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ನಮ್ಮ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವಾದ ಲೋಕೋ ಪೈಲಟ್‌ಗಳ ಜೊತೆಯೇ ಎಂಬುವುದು ಗೊತ್ತಾಗಿದೆ.

ರಾಹುಲ್ ಗಾಂಧಿ ದೆಹಲಿಯಲ್ಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಆದರೆ, ಅವರಲ್ಲಿ ದೆಹಲಿ ವಿಭಾಗದವರು ಮಾತ್ರ ಇರಲಿಲ್ಲ. ದೇಶದ ವಿವಿಧ ಭಾಗಗಳಿಂದ ಆಗಮಿಸಿದವರು ಇದ್ದರು. ಈ ಕುರಿತು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ನಾನುಗೌರಿ.ಕಾಂ ಜುಲೈ 6ರಂದು ಸುದ್ದಿ ಪ್ರಕಟಿಸಿತ್ತು.

ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದ ಬಗ್ಗೆ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ದೀಪಕ್ ಕುಮಾರ್ ಅವರು “ರಾಹುಲ್ ಗಾಂಧಿ ಜೊತೆ ಸಂವಹನ ನಡೆಸಿದ ಲೋಕೋ ಪೈಲಟ್‌ಗಳು ‘ಹೊರಗಿನವರು’ ದೆಹಲಿ ವಿಭಾಗದವರಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಗಾಂಧಿ ಭೇಟಿಯಾಗಿದ್ದು ಲೋಕೋ ಪೈಲಟ್‌ಗಳನ್ನೇ ಎಂಬುವುದು ದೃಢಪಟ್ಟಿದೆ.

“ರಾಹುಲ್ ಗಾಂಧಿ ದೆಹಲಿಯಿಂದ ಬಂದವರೊಂದಿಗೆ ಮಾತ್ರವಲ್ಲದೆ ವಿವಿಧ ರೈಲು ವಿಭಾಗಗಳ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅಖಿಲ ಭಾರತ ಲೊಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್‌ನ ದಕ್ಷಿಣ ವಲಯದ ಅಧ್ಯಕ್ಷ ಆರ್ ಕುಮರೇಶನ್ ಸುದ್ಧಿ ಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದರು. ಇದು ಕೂಡ ರಾಹುಲ್ ಗಾಂಧಿ ಭೇಟಿಯಾಗಿದ್ದು ನಿಜವಾದ ಲೋಕೋ ಪೈಲಟ್‌ಗಳನ್ನು ಎಂಬುವುದು ಖಚಿತಪಡಿಸಿದೆ.

ರಾಹುಲ್ ಗಾಂಧಿಯವರು ಲೋಕೋ ಪೈಲೆಟ್‌ಗಳ ಜೊತೆಗೆ ನಡೆಸಿದ ಸಂವಾದವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ಈ ಕೆಳಗೆ ನೋಡಬಹುದಾಗಿದೆ.

ಇನ್ನು ರಾಹುಲ್ ಗಾಂಧಿಯವರ ಜೊತೆ ಸಂವಾದ ನಡೆಸಲು ಲೋಕೋ ಪೈಲಟ್‌ಗಳ ರೀತಿ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ಈ ಕುರಿತು ಎಲ್ಲಿಯೂ ವರದಿಯಾಗಿಲ್ಲ. ರಾಹುಲ್ ಗಾಂಧಿ ನಿಜವಾದ ಲೋಕೋ ಪೈಲಟ್‌ಗಳ ಜೊತೆ ಸಂವಾದ ನಡೆಸಿರುವಾಗ ಲೋಕೋ ಪೈಲಟ್‌ಗಳು ವೇಷ ಹಾಕಿ ಬರುವುದು, ಪ್ರಕರಣ ದಾಖಲಿಸುವ ಪ್ರಮೇಯವೇ ಬರುವುದಿಲ್ಲ.

ಒಟ್ಟಿನಲ್ಲಿ ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಪೈಲಟ್‌ಗಳಂತೆ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿರುವ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...