Homeಫ್ಯಾಕ್ಟ್‌ಚೆಕ್FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

FACT CHECK: ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳ ಜೊತೆಗೆ ಸಂವಾದ ನಡೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಸಿಬ್ಬಂದಿ ಕೊರತೆಯಿಂದಾಗಿ ಅಸಮರ್ಪಕ ವಿಶ್ರಾಂತಿ ವ್ಯವಸ್ಥೆಯಿದೆ ಎಂದು ಹೇಳಿಕೊಂಡಿದ್ದ ರೈಲ್ವೆ ಲೋಕೋ ಪೈಲಟ್‌ಗಳನ್ನು ಜುಲೈ 5,2024ರಂದು ಭೇಟಿಯಾಗಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅವರ ಸಮಸ್ಯೆ ಆಲಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ.

“ಲೋಕೋ ಪೈಲಟ್‌ಗಳು ಎಂದು ಹೇಳಿ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಹಾಕಿರುವ ಫೋಟೋ ಪರಿಶೀಲಿಸಿದಾಗ ಅದರಲ್ಲಿ ರೈಲ್ವೆ ನೌಕರರು ಮತ್ತು ಲೋಕೋ ಪೈಲಟ್‌ಗಳು ಇಲ್ಲ ಎಂದು ರೈಲ್ವೆ ದೃಢಪಡಿಸಿದೆ. ಎಲ್ಲರೂ ವೇಷ ಹಾಕಿ ಬಂದವರು. ಅವರ ವಿರುದ್ದ ಪ್ರಕರಣ ದಾಖಲಾಗಿದೆ. ಭಾರತವನ್ನು ಯಾವ ರೀತಿಯಲ್ಲಾದರೂ ನಾಶಪಡಿಸುವುದು ರಾಹುಲ್ ಗಾಂಧಿಯ ಉದ್ದೇಶ ಎಂಬುವುದು ಇದರಿಂದ ಸ್ಪಷ್ಟವಾಗಿದೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.


ಹಾಗಾದರೆ, ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಕಲಿ ಲೋಕೋ ಪೈಲಟ್‌ಗಳ ಜೊತೆಯಾ? ಎಂಬುವುದನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ನಮ್ಮ ಪರಿಶೀಲನೆಯಲ್ಲಿ ರಾಹುಲ್ ಗಾಂಧಿಯವರು ಭೇಟಿಯಾಗಿ ಮಾತುಕತೆ ನಡೆಸಿರುವುದು ನಿಜವಾದ ಲೋಕೋ ಪೈಲಟ್‌ಗಳ ಜೊತೆಯೇ ಎಂಬುವುದು ಗೊತ್ತಾಗಿದೆ.

ರಾಹುಲ್ ಗಾಂಧಿ ದೆಹಲಿಯಲ್ಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದರು. ಆದರೆ, ಅವರಲ್ಲಿ ದೆಹಲಿ ವಿಭಾಗದವರು ಮಾತ್ರ ಇರಲಿಲ್ಲ. ದೇಶದ ವಿವಿಧ ಭಾಗಗಳಿಂದ ಆಗಮಿಸಿದವರು ಇದ್ದರು. ಈ ಕುರಿತು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ನಾನುಗೌರಿ.ಕಾಂ ಜುಲೈ 6ರಂದು ಸುದ್ದಿ ಪ್ರಕಟಿಸಿತ್ತು.

ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದ ಬಗ್ಗೆ ಉತ್ತರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ದೀಪಕ್ ಕುಮಾರ್ ಅವರು “ರಾಹುಲ್ ಗಾಂಧಿ ಜೊತೆ ಸಂವಹನ ನಡೆಸಿದ ಲೋಕೋ ಪೈಲಟ್‌ಗಳು ‘ಹೊರಗಿನವರು’ ದೆಹಲಿ ವಿಭಾಗದವರಲ್ಲ ಎಂದು ಹೇಳಿದ್ದರು. ಈ ಹೇಳಿಕೆಯಿಂದ ರಾಹುಲ್ ಗಾಂಧಿ ಭೇಟಿಯಾಗಿದ್ದು ಲೋಕೋ ಪೈಲಟ್‌ಗಳನ್ನೇ ಎಂಬುವುದು ದೃಢಪಟ್ಟಿದೆ.

“ರಾಹುಲ್ ಗಾಂಧಿ ದೆಹಲಿಯಿಂದ ಬಂದವರೊಂದಿಗೆ ಮಾತ್ರವಲ್ಲದೆ ವಿವಿಧ ರೈಲು ವಿಭಾಗಗಳ ಲೋಕೋ ಪೈಲಟ್‌ಗಳೊಂದಿಗೆ ಸಂವಾದ ನಡೆಸಿದ್ದಾರೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅಖಿಲ ಭಾರತ ಲೊಕೋ ರನ್ನಿಂಗ್ ಸ್ಟಾಫ್ ಅಸೋಸಿಯೇಶನ್‌ನ ದಕ್ಷಿಣ ವಲಯದ ಅಧ್ಯಕ್ಷ ಆರ್ ಕುಮರೇಶನ್ ಸುದ್ಧಿ ಸಂಸ್ಥೆಯಾದ ಪಿಟಿಐಗೆ ತಿಳಿಸಿದ್ದರು. ಇದು ಕೂಡ ರಾಹುಲ್ ಗಾಂಧಿ ಭೇಟಿಯಾಗಿದ್ದು ನಿಜವಾದ ಲೋಕೋ ಪೈಲಟ್‌ಗಳನ್ನು ಎಂಬುವುದು ಖಚಿತಪಡಿಸಿದೆ.

ರಾಹುಲ್ ಗಾಂಧಿಯವರು ಲೋಕೋ ಪೈಲೆಟ್‌ಗಳ ಜೊತೆಗೆ ನಡೆಸಿದ ಸಂವಾದವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ಅದನ್ನು ಈ ಕೆಳಗೆ ನೋಡಬಹುದಾಗಿದೆ.

ಇನ್ನು ರಾಹುಲ್ ಗಾಂಧಿಯವರ ಜೊತೆ ಸಂವಾದ ನಡೆಸಲು ಲೋಕೋ ಪೈಲಟ್‌ಗಳ ರೀತಿ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ಈ ಕುರಿತು ಎಲ್ಲಿಯೂ ವರದಿಯಾಗಿಲ್ಲ. ರಾಹುಲ್ ಗಾಂಧಿ ನಿಜವಾದ ಲೋಕೋ ಪೈಲಟ್‌ಗಳ ಜೊತೆ ಸಂವಾದ ನಡೆಸಿರುವಾಗ ಲೋಕೋ ಪೈಲಟ್‌ಗಳು ವೇಷ ಹಾಕಿ ಬರುವುದು, ಪ್ರಕರಣ ದಾಖಲಿಸುವ ಪ್ರಮೇಯವೇ ಬರುವುದಿಲ್ಲ.

ಒಟ್ಟಿನಲ್ಲಿ ರಾಹುಲ್ ಗಾಂಧಿ ನಕಲಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿದ್ದಾರೆ. ಪೈಲಟ್‌ಗಳಂತೆ ವೇಷ ಹಾಕಿ ಬಂದವರ ವಿರುದ್ದ ಪ್ರಕರಣ ದಾಖಲಾಗಿದೆ ಎಂಬುವುದು ಸುಳ್ಳು. ರಾಹುಲ್ ಗಾಂಧಿ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿರುವ ಕುರಿತು ನಾನುಗೌರಿ.ಕಾಂ ಪ್ರಕಟಿಸಿದ ವರದಿಯ ಲಿಂಕ್ ಕೆಳಗಿದೆ.

ರೈಲ್ವೆ ಲೋಕೋ ಪೈಲಟ್‌ಗಳನ್ನು ಭೇಟಿಯಾಗಿ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...