Homeಕರ್ನಾಟಕಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌...

ಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ ಅಸಮಾಧಾನ

- Advertisement -
- Advertisement -

ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸುವ ಸಂಬಂಧ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜು.22) ಹೈಕೋರ್ಟ್‌ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ವಾಸುದೇವ್‌ ಭಗವಾನ್‌ ಸೂರ್ಯವಂಶಿ, ಆರನೇ ಆರೋಪಿ ಅಮಿತ್‌ ಬಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಕಲಬುರ್ಗಿ ಅವರ ಕೊಲೆಗೆ ಬಳಸಲಾದ ವಾಹನ ಕಳವು ಮಾಡಲಾದ ಆರೋಪ ಮಾತ್ರ ಅರ್ಜಿದಾರರ ಮೇಲಿದೆ. ಈ ಸಂಬಂಧ ಆರೋಪಿಗಳು ಕಳೆದ ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲೂ ಆರೋಪಿಗಳ ಪಾತ್ರವಿದೆ. ಈ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಆ ಕೆಲಸವಾಗಿಲ್ಲ. ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷ್ಯಗಳ ಪೈಕಿ ಕೇವಲ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಹೀಗಾಗಿ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು “ಕಳೆದ ಮಾರ್ಚ್‌ನಲ್ಲಿ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಪ್ರಾಸಿಕ್ಯೂಷನ್‌ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ಹೇಳಿತ್ತು. ಈಗ ಜುಲೈ ಅಂತ್ಯ ಸಮೀಪಿಸುತ್ತಿದ್ದು, ಇದುವರೆಗೂ ವಿಶೇಷ ನ್ಯಾಯಾಲಯವೇಕೆ ಸ್ಥಾಪನೆಯಾಗಿಲ್ಲ?” ಎಂದು ಪ್ರಶ್ನಿಸಿತು.

ಆಗ ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ಅವರು “ಹೈಕೋರ್ಟ್‌ನಲ್ಲಿ ಸಂಬಂಧಿತರ ಜೊತೆ ಅಡ್ವೊಕೇಟ್‌ ಜನರಲ್‌ ಮಾತುಕತೆ ನಡೆಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ಈ ವಿಚಾರದ ಬಗೆಗಿನ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದರು.

ಆಗ ಪೀಠವು “ವಿಶೇಷ ನ್ಯಾಯಾಲಯ ಆರಂಭಿಸಿ, ನ್ಯಾಯಾಧೀಶರನ್ನು ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದು ನಮಗೆ ಗೊತ್ತಿದೆ ಬಿಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ, ಅರುಣ್‌ ಶ್ಯಾಮ್‌ ಅವರು “2019ರ ಜುಲೈ 14ರಂದು ತನಿಖಾಧಿಕಾರಿ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದುವರೆಗೆ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ನಡೆದಿದೆ. ವಿಚಾರಣೆಯ ನೆಪದಲ್ಲಿ ದೀರ್ಘಕಾಲ ಆರೋಪಿಗಳನ್ನು ಜೈಲಿನಲ್ಲಿಡಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಗೌರಿ ಲಂಕೇಶ್‌ ಪ್ರಕರಣದಲ್ಲಿ ಈಗಾಗಲೇ ಕರ್ನಾಟಕ ಹೈಕೋರ್ಟ್‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ” ಎಂದರು.

ಆಗ ಎಸ್‌ಪಿಪಿ ಅಶೋಕ್‌ ನಾಯಕ್‌ ಅವರು “ಅರ್ಜಿದಾರರು ಕೊಲೆಯಂಥಹ ಹೀನ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸೂರ್ಯವಂಶಿಯು ಅನಿಲ್‌ ಜೊತೆ ಸೇರಿ ಎರಡನೇ ಆರೋಪಿಯ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಬೈಕ್‌ ಕಳವು ಮಾಡಿದ್ದಾನೆ. ಅದನ್ನು ಕೊಲೆ ಬಳಕೆ ಮಾಡಲಾಗಿದೆ” ಎಂದು ತಿಳಿಸಿದರು.

ಆಗ ಪೀಠವು “ಕಳವು ಮಾಡಿದ ಬೈಕ್‌ ಅನ್ನು ಕೊಲೆಗೆ ಬಳಸಲಾಗಿದೆ ಎಂಬ ಆರೋಪ ಹೊರತುಪಡಿಸಿ ಅರ್ಜಿದಾರರ ಮೇಲೆ ಇರುವ ನಿರ್ದಿಷ್ಟ ಮತ್ತು ಗುರುತರ ಆರೋಪವೇನು?” ಎಂದು ಎಸ್‌ಪಿಪಿಗೆ ಪ್ರಶ್ನಿಸಿತು.

ಆಗ ಎಸ್‌ಪಿಪಿಯವರು “ಪ್ರಕರಣದ ಮೆರಿಟ್‌ ಮೇಲೆ ವಾದಿಸಲು ಒಂದು ದಿನ ಕಾಲಾವಕಾಶ ನೀಡಬೇಕು” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮೆರಿಟ್‌ ಮೇಲೆ ವಾದಿಸಲು ಹೇಳುತ್ತಿಲ್ಲ. ಮೆರಿಟ್‌ ಮೇಲಿನ ವಾದ ಆಲಿಸುವುದು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಅದು ಹೈಕೋರ್ಟ್‌ ಕೆಲಸವಲ್ಲ. ಆರೋಪಪಟ್ಟಿ ಸಲ್ಲಿಸುವಾಗ ಸಂಗ್ರಹಿಸಿರುವ ದಾಖಲೆಯನ್ನು ಆಧರಿಸಿ, ಮೇಲ್ನೋಟಕ್ಕೆ ಪ್ರಕರಣವಿದೆ ಎಂದು ಸಾಬೀತುಪಡಿಸಿ” ಎಂದಿತು. ಅಂತಿಮವಾಗಿ ಎಸ್‌ಪಿಪಿ ಕೋರಿಕೆಯಂತೆ ಇಂದು (ಜು.23) ಮಧ್ಯಾಹ್ನಕ್ಕೆ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...