Homeಕರ್ನಾಟಕಇಡಿ-ಸಿಬಿಐ ಕಿರುಕುಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಇಡಿ-ಸಿಬಿಐ ಕಿರುಕುಳ ಖಂಡಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರಿಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು, ಸಂಪುಟ ಸಚಿವರು ಸೋಮವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳದಂತಹ ಕೇಂದ್ರೀಯ ಸಂಸ್ಥೆಗಳು ತಮ್ಮ ಹೇಳಿಕೆಗಳಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ಹೇಳುವಂತೆ ಸರ್ಕಾರಿ ಅಧಿಕಾರಿಗಳನ್ನು ಒತ್ತಾಯಿಸುತ್ತಿವೆ ಎಂದು ಪಕ್ಷ ಆರೋಪಿಸಿದೆ. ವಾಲ್ಮೀಕಿ ಹಗರಣದ ತನಿಖೆ ವೇಳೆ ಮುಖ್ಯಮಂತ್ರಿ ಹೆಸರನ್ನು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೂರು ದಾಖಲಿಸಿದ ನಂತರ ಪಕ್ಷವು ಪ್ರತಿಭಟನೆ ನಡೆಸಿತು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, “ಸಿಎಂ ಮತ್ತು ಸಚಿವರ ಹೆಸರು ಹೇಳುವಂತೆ ಅಧಿಕಾರಿಯೊಬ್ಬರಿಗೆ ಇಡಿ ಬಲವಂತ ಮಾಡಿರುವುದು ದುರದೃಷ್ಟಕರ. ಪ್ರಕರಣದ ಬಗ್ಗೆ ಎಸ್‌ಐಟಿ ರಚನೆ ಮಾಡಲಾಗಿದ್ದು, ಕ್ರಮ ಕೈಗೊಳ್ಳುತ್ತೇವೆ ಮತ್ತು ಸಚಿವರು ಶಾಮೀಲಾದರೆ ನಾವು ಅವರನ್ನು ಬಿಡುವುದಿಲ್ಲ. ಇದರ ವಿರುದ್ಧ ಪ್ರತಿಭಟಿಸುವುದು ನಮ್ಮ ಬದ್ಧ ಕರ್ತವ್ಯವಾಗಿದೆ. ಏಕೆಂದರೆ, ಇಡಿ ಅಧಿಕಾರಿಗಳು ಯಾರನ್ನೂ ಹೆಸರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ದೇಶವು ತಿಳಿದಿರಬೇಕು. ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತದೆ. ಶಿವಕುಮಾರ್ ಕೂಡ ಕೇಂದ್ರದ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ ಮತ್ತು ಸಿಬಿಐ ಕಿರುಕುಳ ನೀಡುತ್ತಿದೆ” ಎಂದು ಆರೋಪಿಸಿದರು.

ಕೇಂದ್ರೀಯ ಸಂಸ್ಥೆಗಳು ಸಿಎಂ ಮತ್ತು ಉಪ ಮುಖ್ಯಮಂತ್ರಿ ವಿರುದ್ಧ ಸ್ಕ್ರಿಪ್ಟೆಡ್ ತನಿಖೆ ನಡೆಸುತ್ತಿವೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ಮೇಲೆ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದೆ. ಇಡಿ ಅಧಿಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳು ತಾವು ಭಾಗಿಯಾಗದ ಹಗರಣಗಳಲ್ಲಿ ಸಿಎಂ ಮತ್ತು ಉಪ ಮುಖ್ಯಮಂತ್ರಿ ಹೆಸರಿಸುವಂತೆ ಒತ್ತಡ ಹೇರುತ್ತಿದ್ದಾರೆ. ನಾವು ಅಧಿಕಾರಿಗಳ ಕಾರ್ಯವೈಖರಿ ಅಥವಾ ತನಿಖೆಯನ್ನು ಪ್ರಶ್ನಿಸುತ್ತಿಲ್ಲ. ಆದರೆ, ನೀವು ಅವರ ಹೆಸರಿಸಲು ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಿಎಂ ಬಂಧಿಸಲು ಕೇಂದ್ರದಿಂದ ಪ್ರಯತ್ನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಆರೋಪ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೈನ್ ಅವರನ್ನು ರಾಜಕೀಯ ದ್ವೇಷದ ಕಾರಣಕ್ಕೆ ಬಂಧಿಸಿದ ಹಾಗೆ ಸಿದ್ದರಾಮಯ್ಯ ಅವರನ್ನೂ ಸಹ ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದಕ್ಕಾಗಿ ತನ್ನ ಇ.ಡಿ ಸಂಸ್ಥೆಯನ್ನು ಬಳಸಿಕೊಳ್ಳುವಂತಹ ಅಸಂವಿಧಾನಿಕ ಕೆಲಸವನ್ನು ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಕರ್ನಾಟಕದಲ್ಲಿ ಪ್ರಣಾಳಿಕೆಗಳನ್ನು ನೀಡಿ, ಅದಕ್ಕೆ ತಕ್ಕದಾಗಿ ನುಡಿದಂತೆ ನಡೆಯುವ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ವೈಯಕ್ತಿಕ ಹಿತಾಸಕ್ತಿಗಳೇ ವಿಜೃಂಭಿಸುತ್ತಾ, ಸರ್ಕಾರ ಎಂದರೆ ಯಾರೋ ಕೆಲವರಿಗೆ ಇರುವ ಅನುಕೂಲದ ವ್ಯವಸ್ಥೆ ಎಂಬಂತಾಗಿರುವ ಕಾಲದಲ್ಲಿ; ಸರ್ಕಾರ ಎಂದರೆ ಜನರಿಗಾಗಿ ಇರುವ ವ್ಯವಸ್ಥೆ ಎಂದು ಕೆಲಸ ಮಾಡುತ್ತಿರುವ ಸಿದ್ದರಾಮಯ್ಯ ಅವರ ವಿರುದ್ಧ ಇಡಿ ಮೂಲಕ ಸಂಚು ಮಾಡುತ್ತಿರುವ ಕೇಂದ್ರ ಸರ್ಕಾರದ್ದು ಹೇಡಿಗಳ ನಡೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇಂತಹ ಕುತಂತ್ರಗಳಿಂದ ಕೇಂದ್ರ ಸರ್ಕಾರವು ರಾಜ್ಯ ಜನರ ವಿರೋಧ ಎದುರಿಸುತ್ತದೆಯೇ ವಿನಃ, ಅದರಿಂದ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಸಾಧ್ಯವಿಲ್ಲ. ಅಷ್ಟಕ್ಕೂ ದೊಡ್ಡ ಜನಬೆಂಬಲದ ಸಹಕಾರದಿಂದ ಮುಖ್ಯಮಂತ್ರಿಯಾಗಿ ಜನಪರವಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅಂತಹ ಜನಪ್ರಿಯ ಮುಖ್ಯಮಂತ್ರಿಯನ್ನು ಇಡಿ ದುರ್ಬಳಕೆ ಸಂಚಿನಿಂದ ಬಂಧಿಸುವ ಹುನ್ನಾರವನ್ನು ಸಹಿಸಲಾದೀತೇ” ಎಂದು ಅವರು ಪ್ರಶ್ನಿಸಿದ್ದಾರೆ.

“ಜನವಿರೋಧಿಗಳಾದ ಈ ಭ್ರಷ್ಟ ಬಿಜೆಪಿಯವರಿಗೇ ಇಷ್ಟೊಂದು ಧೈರ್ಯ, ಭಂಡತನ ಇರಬೇಕಾದರೆ, ಜನಪರವಾಗಿ ಚಿಂತಿಸಿ ಅವರ ಬದುಕಿಗೆ ನೇರವಾಗಿ ಸಹಾಯ ಮಾಡುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿರುವ ನಮಗೆ ಇನ್ನೆಷ್ಟು ಧೈರ್ಯ ವಿಶ್ವಾಸ ಇರಬೇಡ, ಅಲ್ಲವೇ” ಎಂದಿದ್ದಾರೆ.

ಇದನ್ನೂ ಓದಿ; ಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...