Homeಮುಖಪುಟಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಘೋಷಣೆ ಮಾಡಿದ್ದಾರೆ. ಎರಡೂ ರಾಜ್ಯಗಳ ಆಡಳಿತ ಪಕ್ಷಗಳು ಪ್ರಸ್ತುತ ಎನ್‌ಡಿಎ ಸರ್ಕಾರದ ಮಿತ್ರಪಕ್ಷಗಳಾಗಿವೆ.

ಜೆಡಿಯು ಆಡಳಿತವಿರುವ ಬಿಹಾರಕ್ಕೆ ಸರ್ಕಾರವು ಹಲವಾರು ಮೂಲಸೌಕರ್ಯ ಯೋಜನೆಗಳನ್ನು ಮೀಸಲಿಡುವುದರೊಂದಿಗೆ ಬಿಹಾರಕ್ಕೆ ಉತ್ತಮ ಆರ್ಥೀಕ ನೆರವು ಸಿಗುವ ಸಾಧ್ಯತೆ ಇದೆ. ಬಿಹಾರದ ವಿವಿಧ ರಸ್ತೆ ಯೋಜನೆಗಳಿಗೆ ಬಜೆಟ್‌ನಲ್ಲಿ ₹20,000 ಕೋಟಿ ನೀಡಲಾಗಿದೆ.

ಪಾಟ್ನಾ-ಪೂರ್ಣಿಯಾ, ಬಕ್ಸರ್-ಭಾಗಲ್ಪುರ್ ಮತ್ತು ಬೋಧಗಯಾ-ರಾಜ್ಗೀರ್-ವೈಶಾಲಿ-ದರ್ಭಾಂಗ ಎಕ್ಸ್‌ಪ್ರೆಸ್‌ವೇ ಮತ್ತು ಬಕ್ಸಾರ್‌ನಲ್ಲಿ ಗಂಗಾ ನದಿಯ ಮೇಲೆ ಹೆಚ್ಚುವರಿ ಎರಡು-ಪಥದ ಸೇತುವೆ ಸೇರಿದಂತೆ, ರಾಜ್ಯದಲ್ಲಿ ವಿಮಾನ ನಿಲ್ದಾಣಗಳು, ವೈದ್ಯಕೀಯ ಕಾಲೇಜುಗಳು ಮತ್ತು ಕ್ರೀಡಾ ಮೂಲಸೌಕರ್ಯಗಳನ್ನು ಸ್ಥಾಪಿಸಲು ಕೇಂದ್ರವು ಯೋಜಿಸಿದೆ. ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ನೆರವಿನ ಮೂಲಕ ಬಿಹಾರಕ್ಕೆ ಹಣಕಾಸಿನ ನೆರವು ವ್ಯವಸ್ಥೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

“ಅಮೃತಸರ-ಕೋಲ್ಕತ್ತಾ ಕೈಗಾರಿಕಾ ಕಾರಿಡಾರ್‌ನಲ್ಲಿ, ಬಿಹಾರದ ಗಯಾದಲ್ಲಿ ಕೈಗಾರಿಕಾ ಅಭಿವೃದ್ದಿಯನ್ನು ನಾವು ಬೆಂಬಲಿಸುತ್ತೇವೆ. ಇದು ಪೂರ್ವ ಪ್ರದೇಶದ ಅಭಿವೃದ್ಧಿಗೆ ವೇಗವನ್ನು ನೀಡುತ್ತದೆ” ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದರು.

ರಾಜ್ಯದ ಪ್ರವಾಸೋದ್ಯಮ ವಲಯವು ವಿಷ್ಣುಪಾದ್ ಮತ್ತು ಮಹಾಬೋಧಿ ದೇವಸ್ಥಾನದ ಕಾರಿಡಾರ್‌ಗಳನ್ನು ವಿಶ್ವದರ್ಜೆಯ ಯಾತ್ರಿಗಳು ಮತ್ತು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಯೋಜನೆಗಳೊಂದಿಗೆ ಪ್ರಮುಖ ಹಂಚಿಕೆಗಳನ್ನು ಹೊಂದಿದೆ. ಕೇಂದ್ರವು ರಾಜಗೀರ್ ಮತ್ತು ನಳಂದಾವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಆಂಧ್ರಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ನಾವು ಪೂರ್ವೋದಯ ಯೋಜನೆಯನ್ನು ರೂಪಿಸುತ್ತೇವೆ ಎಂದು ಹಣಕಾಸು ಸಚಿವರು ಹೇಳಿದರು.

ಪ್ರತಿ ವರ್ಷ 1 ಲಕ್ಷ ವಿದ್ಯಾರ್ಥಿಗಳಿಗೆ ಸಾಲದ ಮೊತ್ತದ ಶೇಕಡಾ 3 ರ ಬಡ್ಡಿ ರಿಯಾಯಿತಿಯೊಂದಿಗೆ ಸರ್ಕಾರವು ನೇರವಾಗಿ ಇ-ವೋಚರ್‌ಗಳನ್ನು ನೀಡುತ್ತದೆ ಎಂದು ಹಣಕಾಸು ಸಚಿವರು ಹೇಳಿದರು.

ಆಂಧ್ರಪ್ರದೇಶ

ಟಿಡಿಪಿ ಆಡಳಿತದಲ್ಲಿರುವ ಆಂಧ್ರಪ್ರದೇಶಕ್ಕೆ ಅದರ ರಾಜಧಾನಿ ಅಮರಾವತಿಯ ಅಭಿವೃದ್ಧಿಗೆ ₹15,000 ಕೋಟಿ  ಆರ್ಥಿಕ ನೆರವು ನೀಡಲಾಗುವುದು. ಕೇಂದ್ರವು ಆರ್ಥಿಕ ನೆರವು ನೀಡುವ ಭರವಸೆಯೊಂದಿಗೆ ಪೋಲಾವರಂ ನೀರಾವರಿ ಯೋಜನೆಗೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ಈ ಯೋಜನೆಯನ್ನು ಆಂಧ್ರದ ರೈತರಿಗೆ ಜೀವನಾಡಿ ಎಂದು ಪರಿಗಣಿಸಲಾಗಿದೆ.

“ಆಂಧ್ರ ಪ್ರದೇಶ ಮರುಸಂಘಟನೆ ಕಾಯಿದೆಯಲ್ಲಿನ ಬದ್ಧತೆಗಳನ್ನು ಪೂರೈಸಲು ನಮ್ಮ ಸರ್ಕಾರವು ಸಂಘಟಿತ ಪ್ರಯತ್ನಗಳನ್ನು ಮಾಡಿದೆ. ನಾವು ರಾಜ್ಯದ ಬಂಡವಾಳದ ಅಗತ್ಯವನ್ನು ಗುರುತಿಸುತ್ತಿದ್ದೇವೆ. ನಾವು ಬಹುಪಕ್ಷೀಯ ಅಭಿವೃದ್ಧಿ ಏಜೆನ್ಸಿಗಳ ಮೂಲಕ ವಿಶೇಷ ಹಣಕಾಸಿನ ನೆರವು ನೀಡುತ್ತೇವೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ₹15,000 ಕೋಟಿ ಮುಂದಿನ ವರ್ಷಗಳಲ್ಲಿ ಹೆಚ್ಚುವರಿ ಮೊತ್ತ ನೀಡಲಾಗುವುದು” ಎಂದು ಅವರು ಹೇಳಿದರು.

ಎಪಿ ಮರುಸಂಘಟನೆ ಕಾಯಿದೆಯಡಿಯಲ್ಲಿ ರಾಯಲಸೀಮಾ, ಪ್ರಕಾಶಂ ಉತ್ತರ ಕರಾವಳಿ ಆಂಧ್ರಪ್ರದೇಶದ ಹಿಂದುಳಿದ ಪ್ರದೇಶಗಳಿಗೆ ನೀರು, ವಿದ್ಯುತ್, ರೈಲ್ವೆ ಮತ್ತು ರಸ್ತೆಗಳಂತಹ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಅಗತ್ಯ ಮೂಲಸೌಕರ್ಯಗಳಿಗೆ ಸಹ ಹಣವನ್ನು ಒದಗಿಸಲಾಗುವುದು. ವಿಶಾಖಪಟ್ಟಣಂ-ಚೆನ್ನೈ ಮತ್ತು ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್‌ಗಳನ್ನೂ ಸಹ ಸಚಿವರು ಘೋಷಿಸಿದರು.

ಇದನ್ನೂ ಓದಿ; ಕೇಂದ್ರ ಬಜೆಟ್ | ವಿತ್ತ ಸಚಿವರು ಕಾಂಗ್ರೆಸ್ ಪ್ರಣಾಳಿಕೆ ಓದಿರುವುದು ಖುಷಿ ತಂದಿದೆ: ಪಿ. ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...