Homeಸಾಹಿತ್ಯ-ಸಂಸ್ಕೃತಿಕವನಕಳೆದುಹೋದನು ಹೇಗೆ ಪರಶುರಾಮ?

ಕಳೆದುಹೋದನು ಹೇಗೆ ಪರಶುರಾಮ?

- Advertisement -
- Advertisement -

ರಾಮ ರಾಮಾ ರಾಮ ಅಯ್ಯೋ ಶ್ರೀರಾಮಾ
ಎಲ್ಲಿರುವನೋ ನನ್ನ ಪರಶುರಾಮ
ಮರಳಿ ಕೊಡುವೆಯಾ ಮಗನ ರಾಮ ಶ್ರೀರಾಮಾ
ಇಲ್ಲದಿರೆ ನನ್ನನ್ನೂ ಬಲಿ ತೆಗೆದುಕೋ ರಾಮ

ಕೈಯಲ್ಲಿ ಬಂದೂಕು ಹಿಡಿದನಂತೆ
ನನ್ನಂಥ ಹೆಣ್ಣನ್ನೇ ಹೊಡೆದನಂತೆ
‘ಅಮ್ಮ’ ಎನ್ನುತ್ತಲೇ ಎದೆ ಸೀಳುವಾಗ
ಹೆತ್ತಮ್ಮನನ್ನೇ ಮರೆತಿದ್ದನಂತೆ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಏಳುಕೊಳ್ಳದೆಲ್ಲವಗ ಹರಕೆ ಹೊತ್ತಿದ್ದೆ
ಒಂಬತ್ತು ತಿಂಗಳು ಹೊಟ್ಟೆ ಹೊತ್ತಿದ್ದೆ
ರಕ್ತ ಮಾಂಸ ಬಸಿದು ಕೂಸ ಮಾಡಿದ್ದೆ
ನೋವು ಬ್ಯಾನಿ ತಿಂದು ಸತ್ತು ಹಡೆದಿದ್ದೆ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ವರ್ಷಗಟ್ಟಲೆ ಎದೆಯ ಹಾಲು ಉಣಿಸಿದ್ದೆ
ತೋಳ ತೊಟ್ಟಿಲು ತೂಗಿ ಲಾಲಿ ಹಾಡಿದ್ದೆ
ತೆಪ್ಪೆಜ್ಜಿ ಕಿತ್ತಾಗ ಹಾಡಿ ಕುಣಿದಿದ್ದೆ
ತೊದಲನುಡಿಯೊಳಗ ಕೈಲಾಸ ಕಂಡಿದ್ದೆ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಸಾಲಿಗಿ ಕಳಿಸಿದ ಸಡಗರ ಸಡಗರ
ಸಾಹೇಬನಾಗುವ ಕನಸಿನ ಸಡಗರ
ಕೂಲಿನಾಲಿ ಮಾಡಿ ಬೆಳೆಸಿದ ಸಡಗರ
ಬಡತನವ ಮರೆಸಿದ್ದ ಮುದ್ದು ಸುಕುಮಾರ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಹರೆಯವು ಮೈತುಂಬಿ ಹೋರಿಯಾಗಿದ್ದ
ಚೆಲುವೆಯರ ಕಣ್ಣಾಗ ಬುಗುರಿಯಾಗಿದ್ದ
ಅಪ್ಪನ ಹೆಗಲ ಭಾರ ಹೊರುತ್ತಿದ್ದ
ಅವ್ವನಲಿ ಸೊಸೆ ತರುವ ಕನಸ ಬೆಳೆಸಿದ್ದ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ನಿಂತಲ್ಲೇ ಕತ್ತರಿಸಿ ನೆಲಕ ಬಿದ್ದೇನಿ
ಎದೆಯಿಂದ ನೆಲವ ಬಗೆಯುತ್ತಿದ್ದೀನಿ
ಕಣ್ಣು ಕತ್ತಲಗೂಡಿ ಹೊರಳುತಿದ್ದೀನಿ
ಮಗನ ಹೆಸರಿಡಿದು ಚೀರುತಿದ್ದೀನಿ
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ
ಹರೆಯದ ಕೈಗೆ ಬಂದೂಕು ಕೊಟ್ಟವರಾರು ?
ಹರೆಯದ ಮೈ ಹೊಕ್ಕ ಕೊಲೆಗಡುಕರಾರು ?
ಯಾರು ಉಣಿಸಿದರವನ ಎದೆಗೆ ವಿಷವ ?
ಯಾರು ಕಕ್ಕಿಸಿದರು ನನ್ನೆದೆಯ ಹಾಲು ?
ಹೇಗೆ ನಂಬಲಿ ಶಿವನೇ ಅಯ್ಯೋ ಶ್ರೀರಾಮಾ
ಕಳೆದು ಹೋದನು ಹೇಗೆ ಪರಶುರಾಮ ನನ್ನ ಪರಶುರಾಮ

ಕರುಣೆ ಬಾರದೇನೋ ರಾಮ ಶ್ರೀರಾಮಾ
ಮರಣವಾದರೂ ನೀಡೋ ರಾಮ ಶ್ರೀರಾಮಾ
ಯಾರ ಸೇನೆಯಲ್ಲಿ ಕಳೆದುಹೋದೆಯೋ ರಾಮ
ಕಾಯುತಿರುವೆನು ತಾಯಿ ರಾಮಶ್ರೀರಾಮ
ಮರಳಿ ಕೊಡುವೆಯಾ ಮಗನ ರಾಮ ಶ್ರೀರಾಮ
ಇಲ್ಲದಿರೆ ನನ್ನೊಡಲ ಬೆಂಕಿಯಲಿ ಬೂದಿಯಾಗೋ

-ಎಂ. ಡಿ. ಒಕ್ಕುಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...