Homeಮುಖಪುಟಮುಡಾ ಹಗರಣ ಚರ್ಚೆಗೆ ಆಗ್ರಹಿಸಿ 'ಕಮಲ-ದಳ' ಶಾಸಕರಿಂದ ಅಹೋರಾತ್ರಿ ಧರಣಿ; ವಿಧಾನಸೌಧ ಕಾರಿಡಾರ್‌ನಲ್ಲಿ ಭಜನೆ

ಮುಡಾ ಹಗರಣ ಚರ್ಚೆಗೆ ಆಗ್ರಹಿಸಿ ‘ಕಮಲ-ದಳ’ ಶಾಸಕರಿಂದ ಅಹೋರಾತ್ರಿ ಧರಣಿ; ವಿಧಾನಸೌಧ ಕಾರಿಡಾರ್‌ನಲ್ಲಿ ಭಜನೆ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಶಾಸಕರು ಚರ್ಚೆಗೆ ಒತ್ತಾಯಿಸಿದ್ದು, ವಿಧಾನ ಪರಿಷತ್ತಿನಲ್ಲೂ ಇಂತಹದ್ದೇ ದೃಶ್ಯ ಕಂಡು ಬಂತು. ಚರ್ಚೆಗೆ ಒತ್ತಾಯಿಸಿದ  ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ಬುಧವಾರ ವಿಧಾನಸಭೆಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಭಾಗವಾಗಿ, ಅವರು ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಮತ್ತು ಸ್ಪೀಕರ್ ಯು ಟಿ ಖಾದರ್ ವಿರುದ್ಧ ಘೋಷಣಾ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ನಂತರ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಸೇರಿದಂತೆ ಶಾಸಕರು ವಿಧಾನಸೌಧದ ಆವರಣದಲ್ಲಿಯೇ ಮಲಗಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಮುಂದೂಡಿಕೆ ಸೂಚನೆಯನ್ನು ವಿಧಾನಸಭಾಧ್ಯಕ್ಷ ಖಾದರ್ ತಿರಸ್ಕರಿಸಿದ್ದು, ವಿಪಕ್ಷ ಶಾಸಕರು ವಿಧಾನಸಭೆಯೊಳಗೆ ಅಹೋರಾತ್ರಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್‌ ಸೇರಿದಂತೆ ಹಲವು ವಿಧಾನಪರಿಷತ್‌ ಸದಸ್ಯರು ಭಾಗವಹಿಸಿದ್ದರು.

ಪ್ರತಿಭಟನಾ ನಿರತ ಶಾಸಕರು ಕರ್ನಾಟಕ ವಿಧಾನಸಭೆಯೊಳಗೆ ಮಲಗಿರುವ ವಿಡಿಯೋಗಳು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ರಾತ್ರಿಯಿಡೀ ನಡೆದ ಧರಣಿಯಲ್ಲಿ ಅವರು ಭಕ್ತಿಗೀತೆಗಳನ್ನು ಹಾಡಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕರ್ನಾಟಕ ಬಿಜೆಪಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಡಾ ಹಗರಣದ ಪಿತಾಮಹ’ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಘಟಕವು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದೆ.

“ಸಿದ್ದರಾಮಯ್ಯ ನವರು ಭಾಗಿಯಾಗಿರುವ ಮೈಸೂರು ಮೂಡಾ ಹಗರಣ ಖಂಡಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಸೇರಿದಂತೆ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದಲ್ಲಿ ಉಭಯ ಸದನಗಳ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೊಂದಿಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗಿದೆ” ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸಿದ್ದರಾಮಯ್ಯನವರೇ ಹಾಗೂ ಕಾಂಗ್ರೆಸ್ಸಿಗರೇ…….” ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಾಗಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹187 ಕೋಟಿ ಹಣ ದರೋಡೆ ಮಾಡಿ ಈಗಾಗಲೇ ‘ಇಡಿ ಇಕ್ಕಳ’ಕ್ಕೆ ಸಿಲುಕಿ ಶಾಸಕ ಬಿ ನಾಗೇಂದ್ರ ಜೈಲು ಸೇರಿರುವುದರ ಹಿಂದೆಯೇ ಸರತಿ ಸಾಲಿನಲ್ಲಿ ನಿಂತು ಜೈಲಿನ ಬಾಗಿಲು ತಟ್ಟುತ್ತಿದ್ದೀರಿ. ವಿತ್ತ ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಹಗರಣದ ಬಗ್ಗೆ ತಮಗೇನೂ ತಿಳಿದಿಲ್ಲ’ ಗುಳುಂ’ಆಗಿರುವ ವಾಲ್ಮೀಕಿ ನಿಗಮದ 187 ಕೋಟಿ ರೂಗಳ ರಕ್ಷಣೆಯ ಹೊಣೆ ನನ್ನದಲ್ಲ ಎಂದು ಹೇಳುತ್ತಿರುವುದು ಬರೀ ನೈತಿಕತೆಯ ಪ್ರಶ್ನೆ ಅಲ್ಲವೇ ಅಲ್ಲ. ಜವಾಬ್ದಾರಿಯಿಂದ ನುಣುಕಿಕೊಳ್ಳುವ ಕುತಂತ್ರದ ಯೋಚನೆಯಾಗಿದೆ, ಇದಕ್ಕೆ ತನಿಖೆಯ ಹಾದಿಯಲ್ಲಿ ನಿಮಗೆ ತಕ್ಕ ಉತ್ತರ ದೊರಕಲಿದೆ” ಎಂದಿದ್ದಾರೆ.

“ಪರಿಶಿಷ್ಟ ಜಾತಿಗಳ ಕಲ್ಯಾಣ ಕಾರ್ಯಕ್ಕೆ ಮಾತ್ರ ಬಳಸಬೇಕಿದ್ದ ಸಾವಿರಾರು ಕೋಟಿ ರೂಪಾಯಿಗಳನ್ನು ಅನ್ಯ ಕಾರ್ಯಗಳಿಗೆ ಬಳಸಿ ನೀವು ಮತ್ತು ನಿಮ್ಮ ಸರ್ಕಾರ ಪರಿಶಿಷ್ಟರ ದ್ರೋಹಿಯಾಗಿದ್ದೀರಿ, ನಿಮಗೆ ಪರಿಶಿಷ್ಟ ಸಮುದಾಯಗಳೇ ಪಾಠ ಕಲಿಸಲಿವೆ. ನಿಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಸೂರು ಹೊಂದುವ ಜೀವಮಾನದ ಕನಸನ್ನು ನನಸು ಮಾಡಿಕೊಳ್ಳಲು ದಶಕಗಳಿಂದ ಕಾದು ಕುಳಿತಿದ್ದ ಲಕ್ಷಕ್ಕೂ ಹೆಚ್ಚಿನ ಅರ್ಜಿದಾರ ವಸತಿ ರಹಿತರು ಹಾಗೂ ಬಡವರಿಗೆ ದಕ್ಕಬೇಕಾದ ಮೂಡಾ ನಿವೇಶನಗಳನ್ನು ಬಲಾಢ್ಯರು, ನೆಲಬಾಕರು, ಪ್ರಭಾವಿಗಳಿಗೆ ನೀತಿ ನಿಯಮಗಳನ್ನು ಮೀರಿ ಕೋಟ್ಯಂತರ ರೂಪಾಯಿ ಬೆಲೆಬಾಳುವ 5000ಕ್ಕೂ ಹೆಚ್ಚು ನಿವೇಶನಗಳನ್ನು ಧಾರೆ ಎರೆದು ಕೊಟ್ಟಿರುವ ನಿವೇಶನ ಅಕ್ರಮದ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನೀವು ಏಕೆ ಹಿಂದೇಟು ಹಾಕುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ.

“ಏಕೆಂದರೆ, ಈ ಹಗರಣದ ಪಿತಾಮಹ ನೀವೇ ಆಗಿದ್ದೀರಿ, ನಿಮ್ಮ ಪತ್ನಿಯವರ ಹೆಸರಿನಲ್ಲಿ ಬೆಳೆಬಾಳುವ 14 ನಿವೇಶನಗಳನ್ನು ನಿಯಮ ಬಾಹಿರವಾಗಿ ಪಡೆದುಕೊಂಡು ನೈಜ ಫಲಾನು ಭವಿ ಪರಿಶಿಷ್ಟ ಕುಟುಂಬವನ್ನು ವಂಚಿಸಿ ನಾಡಿನ ಮುಖ್ಯಮಂತ್ರಿ ಸ್ಥಾನದ ಘನತೆ ಗೌರವಗಳನ್ನು ಗಾಳಿಗೆ ತೂರಿ, ಸ್ವಜನ ಪಕ್ಷಪಾತ ಹಾಗೂ ಭ್ರಷ್ಟತೆಯ ಕಿರೀಟ ಧರಿಸಿ ಭಂಡತನದಿಂದ ನಿಮ್ಮನ್ನು ನೀವೇ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ನಿಮ್ಮ ಅಕ್ರಮಗಳ ವಿರುದ್ಧ ಪ್ರಜಾಸತ್ತಾತ್ಮಕ ರೀತಿಯಲ್ಲಿ ಹೋರಾಡಲು ಅವಕಾಶ ನೀಡದೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದಮನ ಮಾಡುತ್ತಿದ್ದೀರಿ, ಮತ್ತೊಂದೆಡೆ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಉಭಯ ಸದನಗಳಲ್ಲೂ ವಿರೋಧ ಪಕ್ಷವಾಗಿ ಜನಪರ ದನಿಯಾಗಿ ನಿಂತು ಹಗರಣವನ್ನು ಬಯಲು ಮಾಡಲು ಅವಕಾಶ ನೀಡದೆ ಸಾಂವಿಧಾನಿಕ ಹಕ್ಕಿನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದೀರಿ. ಪಕ್ಷಪಾತಿ ಸ್ಪೀಕರ್ ಅವರು ನಿಮ್ಮ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಶಾಸಕಾಂಗ ವ್ಯವಸ್ಥೆಯ ಕಪ್ಪು ಚುಕ್ಕೆಯಾಗಿದೆ” ಎಂದಿದ್ದಾರೆ.

ಏನಿದು ಮುಡಾ ಹಗರಣ?

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮೈಸೂರಿನ ಕೆಸರೆ ಗ್ರಾಮದಲ್ಲಿ 3 ಎಕರೆ ಜಮೀನು ಹೊಂದಿದ್ದರು. ಈ ಭೂಮಿಯನ್ನು ಮುಡಾ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದು, ಮೈಸೂರಿನ ಮೇಲ್ಮಟ್ಟದ ಪ್ರದೇಶದಲ್ಲಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರದ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮುಡಾದಿಂದ ಸ್ವಾಧೀನಪಡಿಸಿಕೊಂಡಿರುವ ಪಾರ್ವತಿ ಅವರ ಜಮೀನಿಗೆ ಹೋಲಿಸಿದರೆ ಪಾರ್ವತಿ ಅವರಿಗೆ ನೀಡಲಾದ ನಿವೇಶನವು ಹೆಚ್ಚಿನ ಆಸ್ತಿ ಮೌಲ್ಯವನ್ನು ಹೊಂದಿದೆ ಎಂದು ಆರೋಪಿಸಲಾಗಿದೆ.

ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿಗೆ ಬದಲಾಗಿ ನಿವೇಶನಗಳನ್ನು ಮಂಜೂರು ಮಾಡಿತ್ತು, ಅಲ್ಲಿ ಮುಡಾ ವಸತಿ ಬಡಾವಣೆಯನ್ನು ಅಭಿವೃದ್ಧಿಪಡಿಸಿತು.

ಮುಡಾದಿಂದ ಪರಿಹಾರ ಪಡೆಯಲು ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಒಂಬತ್ತು ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದರು. ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸೋದರ ಮಾವ ಮಲಿಕಾರ್ಜುನ ಸ್ವಾಮಿ ದೇವರಾಜ್ ಮತ್ತು ಅವರ ಕುಟುಂಬದವರು ಅಕ್ರಮ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಮುಡಾ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಪಡೆದು ವಂಚಿಸಿದೆ ಎಂದು ಆರೋಪಿಸಿದೆ.

ಸ್ನೇಹಮಯಿ ಕೃಷ್ಣ ಅವರು ತಮ್ಮ ದೂರಿನಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಮುಡಾ ಹಗರಣದಲ್ಲಿ 5000 ಕೋಟಿ ರೂ.ಗೂ ಹೆಚ್ಚು ಹಗರಣ ನಡೆದಿದೆ ಎಂದು ಬಿಜೆಪಿ ಆರೋಪಿಸಿದ್ದು, ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿದೆ.

ಇದನ್ನೂ ಓದಿ; ಕನ್ನಡಿಗರಿಗೆ ಉದ್ಯೋಗ ಮೀಸಲು ಮಸೂದೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...