Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...