Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...