Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...